ಟ್ಯಾಂಕರ್ ನೀರಿನ ಮಾಫಿಯಾಕ್ಕೆ ಬಿಜೆಪಿ ಸರ್ಕಾರ ಬೆಂಬಲ: ಎಎಪಿ
ಬೆಂಗಳೂರು, ಡಿ.1: ಬಿಬಿಎಂಪಿ ವ್ಯಾಪ್ತಿಗೆ 110 ಹಳ್ಳಿಗಳು ಸೇರ್ಪಡೆಗೊಂಡು 13 ವರ್ಷಗಳು ಕಳೆಯುತ್ತಾ ಬಂದರೂ ಸರಿಯಾದ ಮೂಲ ಸೌಕರ್ಯಗಳನ್ನು ಒದಗಿಸಿದೆ ಸರ್ಕಾರಗಳು ಹಫ್ತಾ ವಸೂಲಿ ಮಾಡುವ ಪುಡಿ ರೌಡಿಗಳಂತೆ ವರ್ತಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ಯಾಂಕರ್ ಮಾಫಿಯಾಗೆ ಜನರ ಹಣವನ್ನು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಡವಿಟ್ಟಿದೆ ಎಂದು ಆರೋಪ ಮಾಡಿದರು.
ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಸವಲತ್ತುಗಳನ್ನು ನೀಡದೆ ಜನರಿಂದ ಮಾತ್ರ ಹಣ ವಸೂಲಿ ಮಾಡುತ್ತಿರುವ ಸರ್ಕಾರ ಈ ಹಳ್ಳಿಗಳ ಕಡೆ ತಿರುಗಿಯೂ ನೋಡಿಲ್ಲ. ಸುಮಾರು 12 ಲಕ್ಷ ಜನಸಂಖ್ಯೆ ಹೊಂದಿರುವ ಈ ಹಳ್ಳಿಗಳ ಅಭಿವೃದ್ಧಿಗೆ ಎಂದು ಈ ಮೊದಲು ಚದರ ಅಡಿಗೆ 150 ಶುಲ್ಕ ವಿಧಿಸಲಾಗುತ್ತಿತ್ತಿ ಈಗ ಅದನ್ನು 400 ರೂಗಳಿಗೆ ಹೆಚ್ಚಿಸಿ ಸರ್ಕಾರವೇ ಜನರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
ಇಷ್ಟೆಲ್ಲಾ ಹಫ್ತಾ ವಸೂಲಿ ಮಾಡುತ್ತಿರುವ ಸರ್ಕಾರ ಇದುವರೆಗು ಕನಿಷ್ಠ ಸೌಲಭ್ಯವಾದ ನೀರನ್ನೂ ಸಹ ಸರಿಯಾಗಿ ನೀಡಿಲ್ಲ. ಕಾವೇರಿ ನೀರು, ಉತ್ತಮ ಒಳ ಚರಂಡಿ ವ್ಯವಸ್ಥೆಗೆ ಎಂದು ಇದುವರೆಗು 5400 ಕೋಟಿ ಖರ್ಚು ಮಾಡಲಾಗಿದೆ ಈ ಹಣ ಎಲ್ಲಿ ಹೋಗಿದೆ ಎಂದು ಪ್ರಶ್ನಿಸಿದರು.

ಈ ನೀರಿನ ಟ್ಯಾಂಕರ್ ಮಾಫಿಯಾ ವರ್ಷಕ್ಕೆ 150 ಕೋಟಿಗೂ ಹೆಚ್ಚಿನ ವ್ಯವಹಾರವಾಗಿದ್ದು ಈ ಹಣ ರಾಜಕಾರಣಿಗಳ ಸ್ಥಳೀಯ ಪುಡಾರಿಗಳ ಜೇಬು ಸೇರುತ್ತಿರುವುದರಿಂದ ಯಾರೂ ಈ ಸಮಸ್ಯೆ ಬಗ್ಗೆ ಮಾತನಾಡುತ್ತಿಲ್ಲ. ಒಂದು ಕುಟುಂಬ ಪ್ರತಿ ವರ್ಷ 20 ಸಾವಿರದಿಂದ 55 ಸಾವಿರದ ತನಕ ನೀರು ಹಾಗೂ ಒಳ ಚರಂಡಿ ವ್ಯವಸ್ಥೆ ದುರಸ್ಥಿಗೆ ಖರ್ಚು ಮಾಡುತ್ತಿದ್ದಾನೆ, ಈ ಹಣವೆಲ್ಲ ಸ್ಥಳೀಯ ಪುಡಾರಿಗಳ ಜೇಬು ತುಂಬಿಸುತ್ತಿದೆ. ಇವರಿಂದ ಸರ್ಕಾರ ಹಫ್ತಾ ವಸೂಲಿ ಮಾಡುತ್ತಿದೆ ಎಂದು ದೂರಿದರು.

ಆಮ್ ಆದ್ಮಿ ಪಕ್ಷದ ಪ್ರಮುಖ ಆಗ್ರಹ:
* ಈ ಕೂಡಲೇ ಹೆಚ್ಚಳ ಮಾಡಿರುವ ಅಭಿವೃದ್ಧಿ ಶುಲ್ಕ ಹೆಚ್ಚಳ ಆದೇಶವನ್ನು ಹಿಂಪಡೆಯಬೇಕು.
* ಸರಿಯಾದ ಕುಡಿಯುವ ನೀರು ಹಾಗೂ ಒಳ ಚರಂಡಿ ವ್ಯವಸ್ಥೆ ಇರುವ ಮನೆಗಳಿಂದ ಮಾತ್ರ ಅಭಿವೃದ್ಧಿ ಶುಲ್ಕ ಪಡೆದುಕೊಳ್ಳಬೇಕು.
* ಟ್ಯಾಂಕರ್ ಮಾಫಿಯಾಕ್ಕೆ ಕಡಿವಾಣ ಹಾಕಿ ಪ್ರತಿ ತಿಂಗಳು 200-300 ರೂಗೆ ಕಾವೇರಿ ನೀರು ಸೌಲಭ್ಯ ಸಿಗುವ ತನಕ ನೀರು ಸರಬರಾಜು ಮಾಡಬೇಕು.
ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಮಾತನಾಡಿ, ಇಷ್ಟೆಲ್ಲಾ ದೋಚುತ್ತಿರುವ ಬಿಬಿಎಂಪಿ ಮತ್ತು ಸರ್ಕಾರ ಅಭಿವೃದ್ಧಿ ಶುಲ್ಕವನ್ನು ಚದರ ಅಡಿಗೆ 150 ರಿಂದ 400 ಕ್ಕೆ ಹೆಚ್ಚಿಸಿದ್ದು 100 ಚದರ ಅಡಿ ಹೊಂದಿರುವ ಒಬ್ಬ ಜನಸಾಮಾನ್ಯ 25 ಸಾವಿರ ಎಲ್ಲಿ ಹೊಂದಿಸ ಬೇಕು ಎಂದು ಹೇಳಿದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications