ಹೈಕಮಾಂಡ್, ವಿಜಯೇಂದ್ರ ಕರೆ; ಆಫರ್ ಒಪ್ಪದ ಡಿವಿಎಸ್!
ಬೆಂಗಳೂರು, ಮಾರ್ಚ್ 19: ಲೋಕಸಭೆ ಚುನಾವಣೆ 2024ರ ಬಿಜೆಪಿ ಟಿಕೆಟ್ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ. ವಿ. ಸದಾನಂದ ಗೌಡರ ಕೈ ತಪ್ಪಿದೆ. ಈ ಬಾರಿ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಪಕ್ಷದ ಅಭ್ಯರ್ಥಿ.
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಟಿಕೆಟ್ ಕೈತಪ್ಪಿರುವ ಸದಾನಂದ ಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಟಿಕೆಟ್ ಕೈತಪ್ಪಿರುವ ಸದಾನಂದ ಗೌಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಇದನ್ನು ಸ್ವತಃ ಗೌಡರೇ ಖಚಿತಪಡಿಸಿದ್ದಾರೆ. ಆದರೆ ಅವರು ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬ ಪ್ರಶ್ನೆಗೆ ಸದ್ಯಕ್ಕೆ ಉತ್ತರವಿಲ್ಲ.
ಹೈಕಮಾಂಡ್ ಕರೆ: ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈತಪ್ಪಿರುವ ಡಿ. ವಿ. ಸದಾನಂದ ಗೌಡರಿಗೆ ಹೈಕಮಾಂಡ್ ನಾಯಕರು ಕರೆ ಮಾಡಿದ್ದಾರೆ. ಆಫರ್ ವೊಂದನ್ನು ಅವರಿಗೆ ನೀಡಿದ್ದು, ಈ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಸದಾನಂದ ಗೌಡರ ಜೊತೆ ಮಾತನಾಡಿದ್ದಾರೆ.
ಸದಾನಂದ ಗೌಡರು ಕಾಂಗ್ರೆಸ್ ಸೇರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳ ನಡುವೆಯೇ ಹೈಕಮಾಂಡ್ನ ಕರೆ ಗೌಡರಿಗೆ ಬಂದಿದೆ. ಆದರೆ ಈ ವರಿಷ್ಠರ ಆಫರ್ಗೆ ಗೌಡರು ಓಕೆ ಅಂದಿಲ್ಲ.
ವರಿಷ್ಠರು ಸದಾನಂದ ಗೌಡರಿಗೆ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಆಫರ್ ನೀಡಿದ್ದಾರೆ. ಈ ಕುರಿತು ಬಿ. ವೈ. ವಿಜಯೇಂದ್ರ ಸಹ ಸದಾನಂದ ಗೌಡರ ಜೊತೆ ಮಾತನಾಡಿದ್ದಾರೆ. ಆದರೆ ಇದಕ್ಕೆ ಇಲ್ಲಿಯ ತನಕ ಗೌಡರು ಒಪ್ಪಿಗೆ ನೀಡಿಲ್ಲ.
ಮಂಗಳವಾರ ಒಕ್ಕಲಿಗರ ಸಂಘದ ನಿರ್ದೇಶಕರು, ಪದಾಧಿಕಾರಿಗಳ ಜೊತೆ ಸದಾನಂದ ಗೌಡರು ಬೆಂಗಳೂರಿನಲ್ಲಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, "ಬುಧವಾರ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ" ಎಂದು ತಿಳಿಸಿದ್ದಾರೆ.
ಸದಾನಂದ ಗೌಡರನ್ನು ಕಾಂಗ್ರೆಸ್ಗೆ ಕರೆತರುವ ಪ್ರಯತ್ನವನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಾಡುತ್ತಿದ್ದಾರೆ. ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ಗೆ ಸೂಕ್ತ ಅಭ್ಯರ್ಥಿ ಸಿಗುತ್ತಿಲ್ಲ. ಆದ್ದರಿಂದ ಗೌಡರು ಪಕ್ಷಕ್ಕೆ ಬಂದರೆ ಅದೇ ಕ್ಷೇತ್ರದ ಟಿಕೆಟ್ ನೀಡುವುದು ಪಕ್ಷದ ಲೆಕ್ಕಾಚಾರವಾಗಿದೆ.
ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಮಂಗಳವಾರ ಸಂಜೆ ನಡೆಯುತ್ತಿದೆ. ಈ ಸಭೆಯಲ್ಲಿ ಸಹ ಸದಾನಂದ ಗೌಡರ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ಕಾಂಗ್ರೆಸ್ ಸೇರಲು ಗೌಡರು ಒಪ್ಪಿಗೆ ನೀಡಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷಕ್ಕೆ ಸೇರಿಸಿಕೊಂಡು ಬಳಿಕ ಅವರು ಬಿಜೆಪಿಗೆ ವಾಪಸ್ ಆದರು. ಈ ಬೆಳವಣಿಗೆ ಬಳಿಕ ಕಾಂಗ್ರೆಸ್ ಸಹ ಆತುರ ಮಾಡದೇ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದೆ.
ಚಿಕ್ಕಬಳ್ಳಾಪುರ ಕ್ಷೇತ್ರ ಬಿಜೆಪಿಗೆ ಕಗ್ಗಂಟಾಗಿದೆ. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ನಲ್ಲಿದ್ದಾರೆ. ಹಾಲಿ ಅವರು ಹೊಸಕೋಟೆ ಶಾಸಕರು. ಆದ್ದರಿಂದ ಅವರಿಗೆ ಟಿಕೆಟ್ ನೀಡುವಂತಿಲ್ಲ. ಸೋಮವಾರ ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವ ಸುಮಲತಾರನ್ನು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವಂತೆ ಆಫರ್ ನೀಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಇಂದು ಡಿ. ವಿ. ಸದಾನಂದ ಗೌಡರಿಗೆ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಚಿಕ್ಕಬಳ್ಳಾಪುರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ಚರ್ಚೆ ನಡೆದಿತ್ತು. ಆದರೆ ಅಮಿತ್ ಶಾ ಎಚ್. ಡಿ. ಕುಮಾರಸ್ವಾಮಿ ಕಣಕ್ಕಿಳಿಯುವ ಖಚಿತ ಭರವಸೆ ಕೊಟ್ಟರೆ ಮಾತ್ರ ಕ್ಷೇತ್ರ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಕುಮಾರಸ್ವಾಮಿ ಸ್ಪರ್ಧೆಗೆ ಒಪ್ಪಿಗೆ ನೀಡಿಲ್ಲ. ಇದರಿಂದಾಗಿ ಬಿಜೆಪಿ ಚಿಕ್ಕಬಳ್ಳಾಪುರದ ಅಭ್ಯರ್ಥಿಯಾಗಿ ಹುಡುಕಾಟ ಮುಂದುವರೆಸಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications