ಯಡಿಯೂರಪ್ಪಗೆ ಅಭಿನಂದಿಸಿದ ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಮೇ 6: ಕೊರೊನಾ ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 1610 ಕೋಟಿ ರುಪಾಯಿಯ ಪ್ಯಾಕೇಜ್ ಘೋಷಿಸಿದಕ್ಕೆ ಮುಖ್ಯಮಂತ್ರಿಗೆ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Recommended Video
ಈ ಕುರಿತು ಬುಧವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು. ಲಾಕ್ ಡೌನ್ ನಿಂದಾಗಿ ರಾಜ್ಯವು ಎಲ್ಲ ವಿಧದಿಂದ ಭಾರಿ ಸಂಕಷ್ಟ ಎದುರಿಸುತ್ತಿದೆ. ಅದರೂ ಯಡಿಯೂರಪ್ಪ ಅವರು ಶ್ರಮಿಕರಿಗಾಗಿ 1610 ಕೋಟಿ ಪ್ಯಾಕೇಜ್ ಘೋಷಿಸಿದ್ದಾರೆ ಎಂದಿದ್ದಾರೆ.
ಕೊರೊನಾ ಸಂಕಷ್ಟ: 1,610 ಕೋಟಿ ರೂ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಪ್ಯಾಕೇಜ್ ಘೋಷಣೆ ಮಾಡಿರುವುದು ನಮಗೆ ತುಂಬಾ ಸಂತೋಷ ತಂದಿದೆ ಎಂದು ಕಟೀಲ್ ಹೇಳಿಕೆ ನೀಡಿದ್ದಾರೆ. ಪಕ್ಷದ ಪರವಾಗಿ ಸಿಎಂ ಯಡಿಯೂರಪ್ಪ ಗೆ ಅಭಿನಂದನೆ ಸಲ್ಲಿಸುತ್ತೇವೆ. ಶ್ರಮಿಕರು ಪ್ಯಾಕೇಜ್ನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿಗತಿ ಉತ್ತಮ ಇಲ್ಲದೇ ಇದ್ದರೂ ರೈತರು ಹಾಗೂ ಸಣ್ಣ ಪುಟ್ಟ ಉದ್ಯೋಗಸ್ಥರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ 1,610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.