Breaking: ನೇಣು ಬಿಗಿದುಕೊಂಡು ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ
ಬೆಂಗಳೂರು ಮೇ 12: ಈ ಬಾರಿ ಬಿಬಿಎಂಪಿ ಎಲೆಕ್ಷನ್ ಗೆ ಸ್ಪರ್ಧಿಸಲು ತಯಾರಿ ಮಾಡ್ಕೊಳ್ತಿದ್ದ ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇರೊಹಳ್ಳಿ ವಾರ್ಡ್ ಬಿಜೆಪಿ ಮುಖಂಡರಾಗಿದ್ದ ಅನಂತರಾಜು(46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಡರಹಳ್ಳಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಥೈರಾಯ್ಡ್ ಕಾಯಿಲೆಯಿಂದ ಬೇಸರಗೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಹೋದರ ದೂರು ನೀಡಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
Recommended Video
ಮೇ 14 ರಂದು ಶನಿ ದೇವನ ಪೂಜೆ ಮಾಡ್ಬಿಟ್ರೆ ನಿಮ್ಮೆಲ್ಲಾ ಸಂಕಟಗಳು ಮಾಯ | Oneindia Kannada












Click it and Unblock the Notifications