ಮೀಸಲಾತಿ ಬಗ್ಗೆ ಬಿಜೆಪಿ ಮುಖಂಡನ ಹೇಳಿಕೆ: ಉಚ್ಚಾಟನೆಗೆ ಎಎಪಿ ಆಗ್ರಹ
ಬೆಂಗಳೂರು, ಅಕ್ಟೋಬರ್ 25: ಮೀಸಲಾತಿಯನ್ನು ತೆಗೆದು ಒಗೆಯಿರಿ ಎಂದಿರುವ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಅವರ ಹೇಳಿಕೆಗೆ ಆಮ್ ಆದ್ಮಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.
ಸೋಮವಾರ ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಜಗದೀಶ್ ಸದಂ ಅವರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಗುಡಗಂಟಿ ಅವರು ಮೀಸಲಾತಿ ತೆಗೆಯಿರಿ. ಎಲ್ಲರೂ ಟಾಪ್ ಕ್ಲಾಸ್ನಲ್ಲಿ ಬಂದು ಬಿಡುತ್ತಾರೆ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

ಬಿಜೆಪಿ ಮುಖಂಡನ ಈ ಹೇಳಿಕೆ ಸಂಬಂಧ ಕಿಡಿಕಾರಿದ ಎಎಪಿ ಮುಖಂಡ ಜಗದೀಶ್ ವಿ ಸದಂ ಅವರು ಬಿಜೆಪಿಗರು ಸಂವಿಧಾನ ವಿರೋಧಿಗಳು ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು
ಬಡವರು ಮತ್ತು ಹಿಂದುಳಿದವರು ಎಲ್ಲರಂತೆ ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಜೆಪಿಗರು ಸಹಿಸುವುದಿಲ್ಲ. ಎಸ್ಸಿ/ಎಸ್ಟಿ ಸೇರಿದಂತೆ ಇತರೆ ಹಿಂದುಳಿದ ವರ್ಗದವರು ಹಿಂದಿನಂತೆ ಕೂಲಿಗಳಾಗಿ, ಜೀತದಾಳುಗಳಾಗಿ ಬದುಕಬೇಕೆಂದು ಬಯಸುತ್ತಾರೆ. ಇವರು ಪ್ರಜಾಪ್ರಭುತ್ವ ವಿರೋಧಿಗಳು. ಬಿಜೆಪಿ ವಾಸ್ತವದಲ್ಲಿ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವಕ್ಕೆ ಗೌರವ ಕೊಡುವುದಿದ್ದರೆ ತಕ್ಷಣ ಜಗದೀಶ್ ಗುಡಗಂಟಿ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ಹಕ್ಕು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಅತ್ಯಮೂಲ್ಯ ಕೊಡುಗೆಯಾಗಿದೆ. ಮೀಸಲಾತಿಯು ನಮ್ಮ ದೇಶದ ದೃಢೀಕರಣದ ಒಂದು ವ್ಯವಸ್ಥೆಯಾಗಿದ್ದು ಅದು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಐತಿಹಾಸಿಕವಾಗಿ ಅನನುಕೂಲಕರ ಗುಂಪುಗಳಿಗೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ.

ಮೀಸಲಾತಿಯಿಂದ ಸಹಾಯ
ಭಾರತೀಯ ಸಂವಿಧಾನದಲ್ಲಿನ ನಿಬಂಧನೆಗಳ ಆಧಾರದ ಮೇಲೆ, ಇದು ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಮತ್ತು ಪ್ರಾಂತ್ಯಗಳಿಗೆ ಮೀಸಲು ಕೋಟಾಗಳು ಅಥವಾ ಸೀಟುಗಳನ್ನು ಹೊಂದಿಸಲು ಅನುಮತಿಸುತ್ತದೆ. ಮೀಸಲಾತಿಯು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ನಾಗರಿಕರಿಗೆ ಪರೀಕ್ಷೆಗಳು, ಉದ್ಯೋಗಾವಕಾಶಗಳನ್ನು ಪಡೆಯುಲ್ಲಿ ಸಾಕಷ್ಟು ಸಹಾಯವಾಗಲಿದೆ ಎಂದು ಅವರು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications