ಕಾಂಗ್ರೆಸ್ ಸರ್ಕಾರದ ವರ್ಷದ ಸಾಧನೆ, ಅಭಿವೃದ್ಧಿ ಶೂನ್ಯ: ಬಿಜೆಪಿ ನಾಯಕರು ಹೇಳಿದ್ದೇನು?
ಬೆಂಗಳೂರು, ಮೇ 20: ಕರ್ನಾಟಕ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದು, ಸಾಧನೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕರು ವರ್ಷದ ಕಾಂಗ್ರೆಸ್ ಸಾಧನೆ ಶೂನ್ಯ ಎಂದು ದೂರಿದ್ದಾರೆ. ಬೊಕ್ಕಸ ಬರಿದು ಮಾಡಿಕೊಂಡು ರಾಜ್ಯ ಜನರ ಶಾಪಕ್ಕೆ ಗುರಿಯಾಗಿದೆ.
ಕಾಂಗ್ರೆಸ್ ಒಂದು ವರ್ಷದ ಸಾಧಣೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡದೆ, ಗ್ಯಾರಂಟಿ ನೆಪದಲ್ಲಿ ಬೊಕ್ಕಸ ಬರಿದು ಮಾಡಿ ನಿಂತ ನೀರಾಗಿರುವ ಕಾಂಗ್ರೆಸ್ ಸರ್ಕಾರ ನಾಡಿನ ರೈತರು, ಶ್ರಮಿಕರು, ಮಹಿಳೆಯರು, ಯುವಕರು, ಉದ್ಯಮಿಗಳು, ಹಿಂದುಳಿದ ಸಮುದಾಯಗಳು ಸೇರಿದಂತೆ ವಿವಿಧ ವರ್ಗಗಳ ಹಿತಾಸಕ್ತಿಗಳನ್ನು ಕಡೆಗಣಿಸಿ ಜನಸಾಮಾನ್ಯರ ಶಾಪಕ್ಕೆ ಗುರಿಯಾಗಿದೆ ಎಂದು ಬಿವೈ ವಿಜಯೇಂದ್ರ ದೂರಿದರು.
ಒಂದು ವರ್ಷ ಪೂರೈಸಿದ ಕರ್ನಾಟಕ ಕಾಂಗ್ರೆಸ್ ಸಾಧನೆ ಏನು ಇಲ್ಲ. ರಾಜ್ಯಾದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ವೈಫಲ್ಯಗೊಂಡಿದೆ ಎಂದರು.
ಸ್ತ್ರೀಯರ ರಕ್ಷಣೆಯಲ್ಲಿ ಸರ್ಕಾರ ದುಶ್ಯಾಸನ ಸಂಸ್ಕೃತಿ
ರಾಜ್ಯದಲ್ಲಿ ಸ್ತ್ರೀಯರ ರಕ್ಷಣೆ ವಿಚಾರದಲ್ಲಿ ರಾಜ್ಯ ಸರ್ಕಾರವು ದುಶ್ಯಾಸನ ಸಂಸ್ಕೃತಿಯವರಿಗೆ ಉತ್ತೇಜನ ನೀಡುತ್ತಿದೆ. ಸರ್ಕಾರದ ಇಡೀ ಮಂತ್ರಿಮಂಡಲವೇ ಚಳಿಗಾಲ ಅಧಿವೇಶದಲ್ಲಿದ್ದಾಗ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ಮಾಡಲಾಯಿತು.

ನಂತರದ ದಿನಗಳಲ್ಲಿ ಒಂದರ ಮೇಲೊಂದರಂತೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದವು. ಹಾಡಹಗಲೇ ವಿದ್ಯಾರ್ಥಿಗಳನ್ನು ಬರ್ಬವಾಗಿ ಹತ್ಯೆ ಮಾಡಲಾಯಿತು. ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗಿದ್ದು, ಒಟ್ಟಾರೆ ರಾಜ್ಯ ಗೃಹ ಇಲಾಖೆ ನಿಷ್ಕ್ರೀಯಗೊಂಡಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಸಚಿವರು ನಾಲಾಯಕರು: ಆರ್.ಅಶೋಕ್
ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಮಹಿಳೆಯರು ಹೆಣ್ಣು ಮಕ್ಕಳಿಗಿಲ್ಲ ಸುರಕ್ಷತೆ ಇಲ್ಲದಾಗಿದೆ. ಸಾಲದ ಹೊರೆ ಏರುತ್ತಲೇ ಇದ್ದು, ನಾಡಿನ ಅಭಿವೃದ್ದಿ ಮಾತ್ರ ಕಣ್ಮರೆಯಾಗಿದೆ. ಅಧಿಕಾರದಲ್ಲಿರುವ ಸಚಿವರುಗಳು ನಾಲಾಯಕರುಗಳು ಎಂದು ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಾಲು ಸಾಲು ಎಡವಟ್ಟುಗಳಾಗಿವೆ. ಮುಖ್ಯಮಂತ್ರಿ ಗಾದಿಗೇರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸು ಕಟ್ಟಿದ್ದಾರೆ. ಇತ್ತ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸರ್ಕಸ್ಸು ನಡೆಸಿದ್ದಾರೆ.
ಜಾತಿಗೊಂದು, ಜಿಲ್ಲೆಗೊಂದು ಬಣ
ಕಾಂಗ್ರೆಸ್ನಲ್ಲಿ ಜಾತಿಗೊಂದು ಬಣವಿದೆ. ಜಿಲ್ಲೆಗೊಂದು ಬಣ ವಿದೆ. ನಾಡಿನ ಅಭಿವೃದ್ದಿ ಮಾತ್ರ ಗೌಣವಾಗಿದೆ. ಏನು ಅಭಿವೃದ್ಧಿ ಆಗಿಲ್ಲ ಎಂದು ಆರೋಪಿಸಿದ ಆರ್. ಅಶೋಕ್ ಅವರು, ಇದು ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ
ಏಳೂವರೇ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ ಎಂದು ಅವರು ಲೇವಡಿ ಮಾಡಿದ್ದಾರೆ.
ಅಧಿಕಾರಕ್ಕೆ ಬಂದ ಒಂದು ವರ್ಷ ಇದು ನಿರರ್ಥಕ ವರ್ಷವಾಗಿದೆ. ಅತಿ ಕೆಟ್ಟ ಆಡಳಿತ ನಾವು ನೋಡಿದ್ದೇವೆ ಎಂದು ಅವರು ಆರೋಪಿಸಿದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications