Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಸರ್ಕಾರದ ವರ್ಷದ ಸಾಧನೆ, ಅಭಿವೃದ್ಧಿ ಶೂನ್ಯ: ಬಿಜೆಪಿ ನಾಯಕರು ಹೇಳಿದ್ದೇನು?

ಬೆಂಗಳೂರು, ಮೇ 20: ಕರ್ನಾಟಕ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದು, ಸಾಧನೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕರು ವರ್ಷದ ಕಾಂಗ್ರೆಸ್ ಸಾಧನೆ ಶೂನ್ಯ ಎಂದು ದೂರಿದ್ದಾರೆ. ಬೊಕ್ಕಸ ಬರಿದು ಮಾಡಿಕೊಂಡು ರಾಜ್ಯ ಜನರ ಶಾಪಕ್ಕೆ ಗುರಿಯಾಗಿದೆ.

ಕಾಂಗ್ರೆಸ್ ಒಂದು ವರ್ಷದ ಸಾಧಣೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

BJP Leader R Ashok BY Vijayendra Criticized About Completed One Year of Karnataka Govt

ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡದೆ, ಗ್ಯಾರಂಟಿ ನೆಪದಲ್ಲಿ ಬೊಕ್ಕಸ ಬರಿದು ಮಾಡಿ ನಿಂತ ನೀರಾಗಿರುವ ಕಾಂಗ್ರೆಸ್ ಸರ್ಕಾರ ನಾಡಿನ ರೈತರು, ಶ್ರಮಿಕರು, ಮಹಿಳೆಯರು, ಯುವಕರು, ಉದ್ಯಮಿಗಳು, ಹಿಂದುಳಿದ ಸಮುದಾಯಗಳು ಸೇರಿದಂತೆ ವಿವಿಧ ವರ್ಗಗಳ ಹಿತಾಸಕ್ತಿಗಳನ್ನು ಕಡೆಗಣಿಸಿ ಜನಸಾಮಾನ್ಯರ ಶಾಪಕ್ಕೆ ಗುರಿಯಾಗಿದೆ ಎಂದು ಬಿವೈ ವಿಜಯೇಂದ್ರ ದೂರಿದರು.

ಒಂದು ವರ್ಷ ಪೂರೈಸಿದ ಕರ್ನಾಟಕ ಕಾಂಗ್ರೆಸ್ ಸಾಧನೆ ಏನು ಇಲ್ಲ. ರಾಜ್ಯಾದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ವೈಫಲ್ಯಗೊಂಡಿದೆ ಎಂದರು.

ಸ್ತ್ರೀಯರ ರಕ್ಷಣೆಯಲ್ಲಿ ಸರ್ಕಾರ ದುಶ್ಯಾಸನ ಸಂಸ್ಕೃತಿ

ರಾಜ್ಯದಲ್ಲಿ ಸ್ತ್ರೀಯರ ರಕ್ಷಣೆ ವಿಚಾರದಲ್ಲಿ ರಾಜ್ಯ ಸರ್ಕಾರವು ದುಶ್ಯಾಸನ ಸಂಸ್ಕೃತಿಯವರಿಗೆ ಉತ್ತೇಜನ ನೀಡುತ್ತಿದೆ. ಸರ್ಕಾರದ ಇಡೀ ಮಂತ್ರಿಮಂಡಲವೇ ಚಳಿಗಾಲ ಅಧಿವೇಶದಲ್ಲಿದ್ದಾಗ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ ಮಾಡಲಾಯಿತು.

BJP Leader R Ashok BY Vijayendra Criticized About Completed One Year of Karnataka Govt

ನಂತರದ ದಿನಗಳಲ್ಲಿ ಒಂದರ ಮೇಲೊಂದರಂತೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದವು. ಹಾಡಹಗಲೇ ವಿದ್ಯಾರ್ಥಿಗಳನ್ನು ಬರ್ಬವಾಗಿ ಹತ್ಯೆ ಮಾಡಲಾಯಿತು. ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗಿದ್ದು, ಒಟ್ಟಾರೆ ರಾಜ್ಯ ಗೃಹ ಇಲಾಖೆ ನಿಷ್ಕ್ರೀಯಗೊಂಡಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಸಚಿವರು ನಾಲಾಯಕರು: ಆರ್.ಅಶೋಕ್

ವಿಪಕ್ಷ ನಾಯಕ ಆರ್‌. ಅಶೋಕ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಮಹಿಳೆಯರು ಹೆಣ್ಣು ಮಕ್ಕಳಿಗಿಲ್ಲ ಸುರಕ್ಷತೆ ಇಲ್ಲದಾಗಿದೆ. ಸಾಲದ ಹೊರೆ ಏರುತ್ತಲೇ ಇದ್ದು, ನಾಡಿನ ಅಭಿವೃದ್ದಿ ಮಾತ್ರ ಕಣ್ಮರೆಯಾಗಿದೆ. ಅಧಿಕಾರದಲ್ಲಿರುವ ಸಚಿವರುಗಳು ನಾಲಾಯಕರುಗಳು ಎಂದು ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಾಲು ಸಾಲು ಎಡವಟ್ಟುಗಳಾಗಿವೆ. ಮುಖ್ಯಮಂತ್ರಿ ಗಾದಿಗೇರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸು ಕಟ್ಟಿದ್ದಾರೆ. ಇತ್ತ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸರ್ಕಸ್ಸು ನಡೆಸಿದ್ದಾರೆ.

ಜಾತಿಗೊಂದು, ಜಿಲ್ಲೆಗೊಂದು ಬಣ

ಕಾಂಗ್ರೆಸ್‌ನಲ್ಲಿ ಜಾತಿಗೊಂದು ಬಣವಿದೆ. ಜಿಲ್ಲೆಗೊಂದು ಬಣ ವಿದೆ. ನಾಡಿನ ಅಭಿವೃದ್ದಿ ಮಾತ್ರ ಗೌಣವಾಗಿದೆ. ಏನು ಅಭಿವೃದ್ಧಿ ಆಗಿಲ್ಲ ಎಂದು ಆರೋಪಿಸಿದ ಆರ್. ಅಶೋಕ್ ಅವರು, ಇದು ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ

ಏಳೂವರೇ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ ಎಂದು ಅವರು ಲೇವಡಿ ಮಾಡಿದ್ದಾರೆ.

ಅಧಿಕಾರಕ್ಕೆ ಬಂದ ಒಂದು ವರ್ಷ ಇದು ನಿರರ್ಥಕ ವರ್ಷವಾಗಿದೆ. ಅತಿ ಕೆಟ್ಟ ಆಡಳಿತ ನಾವು ನೋಡಿದ್ದೇವೆ ಎಂದು ಅವರು ಆರೋಪಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+