ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಿಜೆಪಿ ಹಿರಿಯ ಮುಖಂಡ ಬಲಿ
ಬೆಂಗಳೂರು, ಜುಲೈ 20: ಬಿಜೆಪಿ ಹಿರಿಯ ಮುಖಂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Recommended Video
ದಕ್ಷಿಣ ಕನ್ನಡದಲ್ಲಿ ಮತ್ತೆ ಲಾಕ್ ಡೌನ್ !?
ಬಿಜೆಪಿ ಮುಖಂಡರಾದ ಶ್ರೀನಿವಾಸರೆಡ್ಡಿ ಮೃತರು.ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅಂತಿಮ ದರ್ಶನ ಪಡೆದಿದ್ದಾರೆ.ಪಿಪಿಇ ಕಿಟ್ ಧರಿಸಿಕೊಂಡು ಎಲೆಕ್ಟ್ರಾನಿಕ್ ಸಿಟಿ ಬಳಿಯ ಬ್ಲಾಸಮ್ ಕೋವಿಡ್ ಆಸ್ಪತ್ರೆಯಲ್ಲಿ ದರ್ಶನ ಪಡೆದಿದ್ದಾರೆ.
ಬಳಿಕ ನಗರದ ಬನಶಂಕರಿಯಲ್ಲಿನ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು..ಈ ಸಂದರ್ಭದಲ್ಲಿ ಶ್ರೀನಿವಾಸ ರೆಡ್ಡಿ ಅವರ ಕುಟುಂಬಕ್ಕೆ ಶಾಸಕರು ಸಾಂತ್ವಾನ ಹೇಳಿದರು.

ಅವರ ಸಾವು ಅಪಾರ ನೋವನ್ನುಂಟು ಮಾಡಿದೆ ಎಂದರು.ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಹಲವೆಡೆ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದರು.
ಬೆಂಗಳೂರಿನಲ್ಲಿ ಇಂದು 1452 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಇಂದು 3648 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 72 ಮಂದಿ ಇಂದು ಮೃತಪಟ್ಟಿದ್ದಾರೆ.












Click it and Unblock the Notifications