ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಸುಕುಧಾರಿಗಳಿಂದ ಬಿಜೆಪಿ ಯುವ ಮುಖಂಡನಿಗೆ ಚಾಕು ಇರಿತ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 4:ಬಿಜೆಪಿ ಯುವ ಮುಖಂಡನಿಗೆ ಮುಸುಕುಧಾರಿಗಳ ಗುಂಪೊಂದು ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿವಿ ರಾಮನ್ ಕ್ಷೇತ್ರದ ಶಾಸಕ ರಘು ಆಪ್ತ ಹಾಗೂ ಬಿಜೆಪಿ ಯುವ ಮುಖಂಡ ಲೋಕೇಶ್ ಎಂಬುವವರ ಮೇಲೆ ಹಲ್ಲೆ ನಡೆದಿದೆ.

ಕೇರಳದಲ್ಲಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿಗೆ ಚೂರಿ ಇರಿತ: ನಾಲ್ವರ ಬಂಧನ ಕೇರಳದಲ್ಲಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿಗೆ ಚೂರಿ ಇರಿತ: ನಾಲ್ವರ ಬಂಧನ

ಮುಸುಕು ಧರಿಸಿ ದುಷ್ಕರ್ಮಿಗಳು ಬೈಕಿನಲ್ಲಿ ಬಂದಿದ್ದರು, ಗುರುವಾರ ರಾತ್ರಿ 10.30ರ ಸುಮಾರಿಗೆ ಹಲ್ಲೆ ನಡೆಸಿದ್ದಾರೆ.ಲಕ್ಷ್ಮೀಪುರ ನಿವಾಸದ ಬಳಿ ಕಾರಿಂದ ಕೆಳಗಿಳಿಯೋ ವೇಳೆ ಹಿಂಬದಿಯಿಂದ ಅಟ್ಯಾಕ್ ಮಾಡಿರೋ ಮುಸುಕುಧಾರಿಗಳು ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕುವಿನಿಂದ ಇರಿದಿದ್ದಾರೆ.

BJP Leader Stabbed By Miscreants In Bengaluru

ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಹೋದರರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಈ ವೇಳೆ ಲೋಕೇಶ್ ಜೊತೆಯಲ್ಲಿದ್ದ ಆತನ ಸಹೋದರ ಹರೀಶ್ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಲ್ಲೆಯ ಹಿಂದೆ ಹಳೆಯ ದ್ವೇಷವೇನಾದರೂ ಇತ್ತೇ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

English summary
BJP Leader Lokesh Has Been Stabbed By Some Miscreants in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X