ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯವರು ನಪುಂಸಕರು: ಸಿಎಂ ಇಬ್ರಾಹಿಂ ವಿವಾದಾತ್ಮಕ ಹೇಳಿಕೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 3: 'ಬಿಜೆಪಿಯವರು ನಪುಂಸಕರು, ನಾವು ಹುಟ್ಟಿಸಿದ ಮಕ್ಕಳನ್ನು ಕರೆದುಕೊಂಡು ಹೋಗಿ ಬೀದಿಪಾಲು ಮಾಡಿದ್ದಾರೆ' ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಗೌಡ್ರು ತಿನ್ನೋದನ್ನಾ 3ದಿನ ತಿಂದು ಮೋದಿ ಬದುಕಿದ್ರೆ, ನಾ ಒಪ್ಕೋತೀನಿ: ಸಿ ಎಂ ಇಬ್ರಾಹಿಂಗೌಡ್ರು ತಿನ್ನೋದನ್ನಾ 3ದಿನ ತಿಂದು ಮೋದಿ ಬದುಕಿದ್ರೆ, ನಾ ಒಪ್ಕೋತೀನಿ: ಸಿ ಎಂ ಇಬ್ರಾಹಿಂ

ನಗರದಲ್ಲಿ ಗುರುವಾರ ಮಾತನಾಡಿದ ಅವರು, 'ಬಿಜೆಪಿಯವರು ನಮ್ಮ 17 ಮಕ್ಕಳನ್ನು ಮುಂಬೈಗೆ ಕರೆದುಕೊಂಡು ಹೋಗಿ ಇರಿಸಿದ್ದರು. ನಾವು ಹುಟ್ಟಿಸಿದವರನ್ನು ತಮ್ಮ ಮಕ್ಕಳು ಎಂದು ಹೇಳಿಕೊಂಡು ತಿರುಗಾಡುತ್ತಿದ್ದರು. ಈಗ ಅವರನ್ನೇ ಬೀದಿಪಾಲು ಮಾಡಿದ್ದಾರೆ. ಅವರ ಪರಿಸ್ಥಿತಿ ಈಗ ಅರ್ಹರೂ ಅಲ್ಲ, ಅನರ್ಹರೂ ಅಲ್ಲ ಎಂಬಂತಾಗಿದೆ. ಭಾರತದ ರಾಜಧಾನಿ ದೆಹಲಿಯ ಮುಂದೆ ರಾಜ್ಯದ ಮಾನಹರಾಜು ಹಾಕಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

ಪತಿವ್ರತೆಯರಾಗಿದ್ದ ಅನರ್ಹ ಶಾಸಕರು ಈಗ ದೇವದಾಸಿಯರು: ಸಿಎಂ ಇಬ್ರಾಹಿಂ ವ್ಯಂಗ್ಯಪತಿವ್ರತೆಯರಾಗಿದ್ದ ಅನರ್ಹ ಶಾಸಕರು ಈಗ ದೇವದಾಸಿಯರು: ಸಿಎಂ ಇಬ್ರಾಹಿಂ ವ್ಯಂಗ್ಯ

ಬಿಎಸ್ ಯಡಿಯೂರಪ್ಪ ಅವರು ಹೆಸರಿಗೆ ಮಾತ್ರ ಮುಖ್ಯಮಂತ್ರಿ. ಅವರಿಗೆ ಒಬ್ಬ ಕನ್ನಡಿಗನನ್ನು ಮೇಯರ್ ಆಗಿ ಆಯ್ಕೆ ಮಾಡಲು ಆಗಲಿಲ್ಲ. ಅಷ್ಟೇಕೆ, ಕೇಂದ್ರ ಸರ್ಕಾರದಿಂದ ಹತ್ತು ರೂಪಾಯಿ ನೆರೆ ಪರಿಹಾರವನ್ನೂ ತರಲು ಅವರಿಂದ ಸಾಧ್ಯವಾಗಲಿಲ್ಲ. ರಾಜ್ಯದಲ್ಲಿ 25 ಮಂದಿ ಬಿಜೆಪಿ ಸಂಸದರಿದ್ದಾರೆ. ಅವರಿಗೆ ಸ್ವಾಭಿಮಾನವಿದ್ದರೆ ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಪರಿಹಾರದ ಹಣ ತರಲಿ. ಇಲ್ಲದಿದ್ದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.

BJP Leaders Are Eunuchs: Congress MLC CM Ibrahim

ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಪರಿಹಾರ ಕೊಡಲು ಅವರ ಬಳಿ ದುಡ್ಡೇ ಇಲ್ಲ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದೆ. ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು

English summary
Congress MLC CM Ibrahim slams Karnataka BJP leaders and called them as eunuchs. They took our children away and left them, he criticized.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X