ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು, ಆಗಸ್ಟ್ 18 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಜವಳಿ ಖಾತೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಶುಕ್ರವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನೂರಾರೂ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಿಂದ ವಿಧಾನಸೌಧಕ್ಕೆ ತೆರಳುತ್ತಿದ್ದವರನ್ನು ರೇಸ್ ಕೋರ್ಸ್ ರಸ್ತೆ ಬಳಿ ಪೊಲೀಸರು ಬಂಧಿಸಿದರು.
In Pics : ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಆರ್ ಅಶೋಕ್, ಅರವಿಂದ್ ಲಿಂಬಾವಳಿ, ಶೋಭಾ ಕರಂದ್ಲಾಜೆ, ಈಶ್ವರಪ್ಪ ಸೇರಿದಂತೆ ಹಲವು ನಾಯಕರನ್ನು ಬಂಧಿಸಿ ಬಸ್ಸಲ್ಲಿ ಕರೆದೊಯ್ದಿರು.












Click it and Unblock the Notifications