ಯಡಿಯೂರಪ್ಪ ನೇತೃತ್ವ: ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು
ಬೆಂಗಳೂರು, ಫೆಬ್ರವರಿ 14: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಿಯೋಗವು ರಾಜಭವನಕ್ಕೆ ತೆರಳಿ ಗುರುವಾರ ದೂರು ಸಲ್ಲಿಸಿದೆ.
ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆಯ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ನಡೆದಿದೆ ಎನ್ನಲಾದ ಕಲ್ಲು ತೂರಾಟ ಖಂಡಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಬಿಎಸ್ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ ಇನ್ನಿತರೆ ಬಿಜೆಪಿ ನಾಯಕರು ತೆರಳಿ ದೂರು ನೀಡಿದರು. ಶಾಸಕ ಪ್ರೀತಂಗೌಡ ದೇವೇಗೌಡರ ವಿಕೆಟ್ ಕೆಲವೇ ದಿನದಲ್ಲಿ ಉರುಳುತ್ತದೆ' ಎಂದು ಪ್ರೀತಂಗೌಡ ಅವರು ಹೇಳಿದ್ದಾರೆ ಎಂದು ಕೆಲವು ವಾಹಿನಿಗಳಲ್ಲಿ ವರದಿ ಆಗಿದೆ.

ಇದರಿಂದಾಗಿ ಸಿಟ್ಟಿಗೆದ್ದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.ಆದರೆ ಪ್ರತಿಭಟನೆ ಮುಗಿದ ಮೇಲೆ ಯಾರೋ ಕೆಲವರು ಕಿಡಿಗೇಡಿಗಳು ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಪ್ರೀತಂ ಗೌಡ ಬೆಂಬಲಿಗ ರಾಹುಲ್ ಅವರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ರಾಹುಲ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರಲಾಗಿದೆ.
ಈಗಾಗಲೇ ಜೆಡಿಎಸ್ ನ ಐದು ಮಂದಿ ಮೇಲೆ ಹಾಸನದಲ್ಲಿ ಎಫ್ಐಆರ್ ದಾಖಲಾಗಿದೆ. ಇದೀಗ ಬಿಜೆಪಿಯು ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಖಂಡಿಸಿ ಅವರ ವಿರುದ್ಧ ರಾಜ್ಯಪಾಲರ ಬಳಿ ದೂರು ದಾಖಲಿಸಿದ್ದಾರೆ.ಜೆಡಿಎಸ್ ದೂರು ನೀಡಿದರೆ ಜಾಮೀನುರಹಿತ ಸೆಕ್ಷನ್ ಹಾಕ್ತಾರೆ ಅದೇ ಬಿಜೆಪಿ ದೂರು ನೀಡಿದರೆ ಜಾಮೀನು ಸಹಿತ ಸೆಕ್ಷನ್ ಹಾಕಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ದೂರಿದ್ದಾರೆ.
ಹಾಸನದಲ್ಲಿ ಮೈತ್ರಿ ಸರ್ಕಾರದಿಂದ ಕೀಳುಮಟ್ಟದ ರಾಜಕೀಯ ನಡೆಯುತ್ತಿದೆ.ಈ ಕುರಿತು ಕೇಂದ್ರ ಗೃಹಸಚಿವರಿಗೂ ದೂರು ನೀಡುತ್ತೇವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications