ಪ್ರತಾಪ್ ಸಿಂಹರಿಂದ ಮತ್ತೆ ಕಾನೂನು ಉಲ್ಲಂಘನೆಯಾದರೆ ಕಠಿಣ ಕ್ರಮ: ರಾಮಲಿಂಗಾರೆಡ್ಡಿ
ಬೆಂಗಳೂರು, ಡಿಸೆಂಬರ್ 04 : ಪದೇ ಪದೇ ಸಂಸದ ಪ್ರತಾಪ್ ಸಿಂಹ ಅವರು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ಮುಂದುವರೆಸಿದರೆ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾತನಾಡಿದ ಅವರು ಬಿಜೆಪಿಗೆ ಕಾನೂನಿನ ತಿಳಿವಳಿಕೆ ಇಲ್ಲ. ಆದರೆ ಪ್ರತಾಪ್ ಸಿಂಹ ಅವರಿಗೆ ಕಾನೂನಿನ ಬಗ್ಗೆ ಅರಿವಿದೆ. ಆದರೂ ಪದೇ ಪದೇ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.
ನಿನ್ನೆ ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆಗೆ ಅನುಮತಿ ನೀಡಿದ ಮಾರ್ಗದಲ್ಲಿ ಹೋಗಬೇಕಾಗಿತ್ತು. ಮಾರ್ಗ ಬದಲಾವಣೆ ಮಾಡಿದಾಗ ಪೊಲೀಸರು ತಡೆದಿದ್ದಾರೆ. ಪೊಲೀಸರ ಮೇಲೆ ಅಡ್ಡಾದಿಡ್ಡಿ ಕಾರು ಚಲಾಯಿಸಲು ಪ್ರತಾಪ್ಸಿಂಹ ಯತ್ನಿಸಿದ್ದಾರೆ. ಯಾರಿಗೂ ಅಂತಹ ಅಪಾಯಗಳಾಗಿಲ್ಲ ಎಂದರು.

ರಾಮಜಯಂತಿ, ಹನುಮಜಯಂತಿ, ದತ್ತಪೀಠ ಜಯಂತಿ ವಿಷಯದಲ್ಲಿ ಬಿಜೆಪಿಯವರಿಗಿಂತಲೂ ಕಾಂಗ್ರೆಸ್ನವರಿಗೆ ಹೆಚ್ಚಿನ ಭಕ್ತಿ ಇದೆ. ಬಿಜೆಪಿಯವರು ಕೇವಲ ರಾಜಕೀಯ ಕಾರಣಕ್ಕಾಗಿ ಇಂತಹ ಜಯಂತಿಗಳನ್ನು ಮಾಡಿ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ವರ್ಷದಲ್ಲಿ ಇದ್ದಕ್ಕಿದ್ದ ಹಾಗೆ ಬಿಜೆಪಿಯವರಿಗೆ ದೇವರ ಬಗ್ಗೆ ಭಕ್ತಿ ಹೆಚ್ಚಾಗುತ್ತದೆ ಎಂದು ರಾಮಲಿಂಗಾರೆಡ್ಡಿ ಲೇವಡಿ ಮಾಡಿದರು.
ತುಮಕೂರಿನಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿರುವ ಬಿಜೆಪಿ ನಾಯಕರನ್ನು ಕೂಡಲೇ ಬಂಧಿಸುವಂತೆ ಸೂಚನೆ ನೀಡಿದ್ದೇನೆ. ಹಲ್ಲೆ ಮಾಡಿದವರು ತಲೆ ಮರೆಸಿಕೊಂಡಿದ್ದಾರೆ. ಎಲ್ಲೇ ಇದ್ದರೂ ಹಿಡಿದು ಒಳಗೆ ಹಾಕುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರನ್ನು ಪ್ರತಾಪ್ ಸಿಂಹ ಗೂಂಡಾ ಎಂದು ಕರೆದಿದ್ದಾರೆ.
ಬಿಜೆಪಿ ನಾಯಕರ ಇತಿಹಾಸಗಳನ್ನು ಕೆಣಕಿದರೆ ಯಾರು ಗೂಂಡಾಗಳು, ಯಾರು ಅಲ್ಲ ಎಂಬುದು ಗೊತ್ತಾಗಲಿದೆ. ಶೀಘ್ರವೇ ಈ ಬಗ್ಗೆ ಮಾಹಿತಿಯೊಂದಿಗೆ ಮಾತನಾಡುತ್ತೇನೆ ಎಂದರು. ಮೌಢ್ಯ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಈಗಿರುವ ಪೊಲೀಸ್ ಠಾಣೆಗಳಲ್ಲೇ ಕಚೇರಿ ಆರಂಭಿಸುವುದಾಗಿ ಗೃಹ ಸಚಿವರು ತಿಳಿಸಿದರು. ಪೊಲೀಸ್ ಸಿಬ್ಬಂದಿಗಳ ಕೊರತೆ ನೀಗಿಸಲು 2 ಸಾವಿರ ಹುದ್ದೆಗಳ ನೇಮಕಾತಿ ನಡೆದಿದೆ ಎಂದು ಅವರು ಹೇಳಿದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications