ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಿದ ರಾಜ್ಯ ಬಿಜೆಪಿ ನಾಯಕರು
ಬೆಂಗಳೂರು, ಆಗಸ್ಟ್ 17: ವಾಜಪೇಯಿ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದ ವಿಧಾನಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ರಾಮಚಂದ್ರ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರ ಉಪಸ್ಥಿತಿಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಅಗಲಿದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಅಗಲಿದ ಮಹಾನ್ ಚೇತನದ ಭಾವಚಿತ್ರಕ್ಕೆ ಪಕ್ಷದ ಕಾರ್ಯಾಲಯ ಮುಂಭಾಗದಲ್ಲಿ ಪಕ್ಷದ ಮುಖಂಡರು, ಸಾರ್ವಜನಿಕರು ಪುಷ್ಪಾಂಜಲಿ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ನಂತರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಗಣ್ಯರು ಅಟಲ್ ಜೀ ಅವರ ಅವಿರತ ಸೇವೆಯನ್ನು ಸ್ಮರಿಸಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಅಟಲ್ ಜೀ ಅವರಿಗೆ ಅಟಲ್ ಜೀ ಅವರೇ ಸಾಟಿ. ವಾಜಪೇಯಿ ಅವರು ಇದ್ದ ಬಿಜೆಪಿಯಲ್ಲಿ ಇದ್ದೇವೆ ಎನ್ನುವುದೇ ನಮ್ಮ ಪುಣ್ಯ, ಅವರ ಪ್ರಾಮಾಣಿಕತೆಯಲ್ಲಿನ ಒಂದು ತುಣುಕು ನಾವಾಗೋಣ ಎಂದರು.

ಶಂಕರಮೂರ್ತಿ ಅವರು ವಾಜಪೇಯಿ ಅವರೊಂದಿಗಿನ ತಮ್ಮ ಒಡನಾಟವನ್ನು ಮೆಲಕು ಹಾಕಿದರು.
'ವಾಜಪೇಯಿ ರಾಜಕಾರಣಿಯಾಗದೇ ಇದ್ದರೆ ದೇಶದ ಶ್ರೇಷ್ಠ ಕವಿಯಾಗುತ್ತಿದ್ದರು,ಇಲ್ಲವೇ ಉತ್ತಮ ಪತ್ರಕರ್ತ ರಾಗುತ್ತಿದ್ದರು. 1981ರ ಚುನಾವಣೆಯಲ್ಲಿ ವಾಜಪೇಯಿ ಅವರನ್ನು ಹಳ್ಳಿಹಳ್ಳಿಗಳಲ್ಲಿ ಪ್ರವಾಸ ಮಾಡಿಸಿದೆವು. ಪರಿಣಾಮವಾಗಿ 18ಸ್ಥಾನ ಗಳಿಸಿದೆವು. ಆಗ ಸಮ್ಮಿಶ್ರ ಸರ್ಕಾರ ಕ್ಕೆ ವಾಜಪೇಯಿ ಅವರು ಶರತ್ತು ರಹಿತ ಬೆಂಬಲ ಘೋಷಿಸಿದರು' ಎಂದರು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ ವಾಜಪೇಯಿಯವರು ಹೇಳಿದ ನ ದೈನ್ಯಂ...ನ ಪಲಾಯನಂ...ಎನ್ನುವ ಮಾತುಗಳನ್ನು ಸ್ಮರಿಸಿಕೊಂಡರು. 'ನಾವಿಂದು ಪಕ್ಷದಲ್ಲಿ ವಿವಿಧ ಹಂತದಲ್ಲಿ ಅಧಿಕಾರ ಅನುಭವಿಸಿದೇವೆ. ಅದಕ್ಕೆ ಪ್ರತಿಯೊಬ್ಬರ ಜನಮಾನಸದಲ್ಲಿರುವ ವಾಜಪೇಯಿ ಅವರೇ ಕಾರಣ' ಎಂದರು.

ವಿರೋಧಪಕ್ಷಗಳು, ಪಾಕಿಸ್ತಾನ ಎಲ್ಲರೂ ಅವರನ್ನು ಕೊಂಡಾಡಿದ್ದಾರೆ. ಆದ್ದರಿಂದಲೇ ಅಟಲ್ ಜೀ ಆಜಾತಶತ್ರು ಎಂದು ಕರೆಯಲ್ಪಟ್ಟಿದ್ದಾರೆ ಎಂದು ಅಶೋಕ್ ಹೇಳಿದರು. ನಾಯಕರಾದ ವಿ.ಸೋಮಣ್ಣ, ಜಗ್ಗೇಶ್, ಚಿ.ನಾ.ರಾಮು, ಅಬ್ದುಲ್ ಅಜೀಂ, ಭಾರತಿ ಶೆಟ್ಟಿ, ಶಿವರಾಂ, ಡಿ.ಎಸ್.ವೀರಯ್ಯ, ಪಿ.ಎನ್.ಸದಾಶಿವ, ಪದ್ಮನಾಭ ರೆಡ್ಡಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ












Click it and Unblock the Notifications