ಅನರ್ಹರಿಗೆ ಆತಂಕ ತಂದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ
ಬೆಂಗಳೂರು, ಅಕ್ಟೋಬರ್ 23 : ಕರ್ನಾಟಕದ ಬಿಜೆಪಿ ಕಚೇರಿಯಲ್ಲಿ ಉಪ ಚುನಾವಣೆ ಬಗ್ಗೆ ನಡೆದ ಸಭೆ ಅನರ್ಹ ಶಾಸಕರ ಆತಂಕಕ್ಕೆ ಕಾರಣವಾಗಿದೆ. ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ಒಮ್ಮತ ಮೂಡಿಲ್ಲ.
ಬುಧವಾರ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಉಪ ಚುನಾವಣೆ ಬಗ್ಗೆ ಸಭೆ ನಡೆಯಿತು. ಶಾಸಕರಾದ ಆರ್. ಅಶೋಕ್, ಅರವಿಂದ ಲಿಂಬಾವಳಿ ಹಾಗೂ ಬೆಂಗಳೂರು ನಗರದ ಇತರ ಶಾಸಕರು, ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು ನಗರದ ಯಶವಂತಪುರ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಅನರ್ಹ ಶಾಸಕರಾದ ಎಸ್. ಟಿ. ಸೋಮಶೇಖರ್ ಮತ್ತು ಕೆ. ಗೋಪಾಲಯ್ಯಗೆ ಟಿಕೆಟ್ ನೀಡಲು ಸ್ಥಳೀಯ ನಾಯಕರು ವಿರೋಧ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಸಭೆಗೆ ಆಗಮಿಸಿದ್ದರು. ಆದರೆ, ಅವರಿಗೆ ಸಮಾಧಾನ ತರುವಂಥದ ಬೆಳವಣಿಗೆ ನಡೆಯಲಿಲ್ಲ. ಅನರ್ಹ ಶಾಸಕರಿಗೆ ಟಿಕೆಟ್ ನೀಡಲು ಯಡಿಯೂರಪ್ಪ ಬಯಸಿದ್ದಾರೆ. ಸ್ಥಳೀಯ ನಾಯಕರು ಇದಕ್ಕೆ ಒಪ್ಪುತ್ತಿಲ್ಲ.
ಸ್ಥಳೀಯ ನಾಯಕರ ಅಭಿಪ್ರಾಯವನ್ನು ಸಂಗ್ರಹಿಸಿ ಟಿಕೆಟ್ ಹಂಚಿಕೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಅನರ್ಹ ಶಾಸಕರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರು ಅಸಮಾಧಾನಗೊಳ್ಳಲಿದ್ದಾರೆ. ಅವರ ವಿರುದ್ಧ ಹೋರಾಟ ಮಾಡಿದ ನಾವು ಈಗ ಅವರ ಪರವಾಗಿ ಹೇಗೆ ಮತ ಕೇಳುವುದು? ಎಂದು ನಾಯಕರು ಪ್ರಶ್ನಿಸಿದರು.
ಅನರ್ಹ ಶಾಸಕರಿಗೆ ಟಿಕೆಟ್ ನೀಡಿದ ಬಳಿಕ ಉಪ ಚುನಾವಣೆಯಲ್ಲಿ ಅವರು ಗೆದ್ದು ಬಂದರೆ ನಮ್ಮ ಹಿಡಿತಕ್ಕೆ ಸಿಗುವುದಿಲ್ಲ ಎಂದು ಚರ್ಚೆ ನಡೆಯಿತು. ಶಾಸಕರು ತಮ್ಮ ಆಪ್ತರಿಗೆ ಮಾತ್ರ ಮನ್ನಣೆ ಕೊಡುತ್ತಾರೆ. ಇದರಿಂದ ಬಿಜೆಪಿ ಕಾರ್ಯಕರ್ತರಿಗೆ ಹಿನ್ನಡೆಯಾಗಲಿದೆ ಎಂದು ನಾಯಕರು ಆತಂಕ ವ್ಯಕ್ತಪಡಿಸಿದರು.
ಯಶವಂತಪುರದ ಶಾಸಕರಾಗಿದ್ದ ಎಸ್. ಟಿ. ಸೋಮಶೇಖರ್ ಕ್ಷೇತ್ರದ ಬಿಜೆಪಿ ಮುಖಂಡರ ಮೇಲೆ 13 ಪ್ರಕರಣ ದಾಖಲಿಸಿದ್ದಾರೆ. ಅಂತವರನ್ನು ಪಕ್ಷಕ್ಕೆ ಸೇರಿಸಿಕೊಂಡು ಅವರ ಪರವಾಗಿ ಮತ ಕೇಳುವುದು ಎಂದು ಸ್ಥಳೀಯ ಬಿಜೆಪಿ ನಾಯಕರು ಪ್ರಶ್ನೆ ಮಾಡಿದರು.
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿಯೂ ಕೆ. ಗೋಪಾಲಯ್ಯಗೆ ಉಪ ಚುನಾವಣೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದೆ. ಆದರೆ, ಯಡಿಯೂರಪ್ಪ ಟಿಕೆಟ್ ನೀಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications