Get Updates
Get notified of breaking news, exclusive insights, and must-see stories!

ಬಿ.ಎಸ್‌.ಯಡಿಯೂರಪ್ಪ ಜೊತೆ ಮಾಡಾಳ್ ವಿರೂಪಾಕ್ಷಪ್ಪ, ಗುರುಸಿದ್ದನಗೌಡ, ರೇಣುಕಾಚಾರ್ಯ ಗುಪ್ತ ಚರ್ಚೆ

ದಾವಣಗೆರೆ, ಡಿಸೆಂಬರ್‌, 11: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯುಡಿಯೂರಪ್ಪ ಅವರ ಆಹ್ವಾನದ ಮೇರೆಗೆ ದಾವಣಗೆರೆ ಬಿಜೆಪಿಯ ಪ್ರಮುಖ ನಾಯಕರ ನಿಯೋಗವು ಸೋಮವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದೆ.

ಜಗಳೂರಿನ ಮಾಜಿ ಶಾಸಕ, ದಾವಣಗೆರೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಟಿ. ಗುರುಸಿದ್ದನಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪ, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ, ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ರವಿಕುಮಾರ್ ಟಿ.ಜಿ, ಮತ್ತು ಮಾಡಾಳು ಮಲ್ಲಿಕಾರ್ಜುನ್ ಸೇರಿದಂತೆ ದಾವಣಗೆರೆ ಜಿಲ್ಲೆಯ ಪ್ರಮುಖರು ಬಿಎಸ್‌ವೈ ಅವರನ್ನು ಭೇಟಿ ಮಾಡಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

BJP leaders met B.S.Yediyurappa in bengaluru

ಬಿಜೆಪಿ ರಾಜ್ಯಾಧ್ಯಕರಾಗಿ ಬಿ.ವೈ.ವಿಜಯೇಂದ್ರ ಇತ್ತೀಚೆಗೆ ಜವಾಬ್ದಾರಿ ವಹಿಸಿಕೊಂಡಿದ್ದು, ಶೀಘ್ರವೇ ದಾವಣಗೆರೆ ಜಿಲ್ಲೆಯ ಎಲ್ಲ ನಾಯಕರಿಗೂ ಪಕ್ಷದ ಶಿಸ್ತಿನ ಪಾಠ ಮಾಡಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಶಾಸಕ ಗುರುಸಿದ್ದನಗೌಡ ಮಾತನಾಡಿ, ಕೆಲ ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ನೇರವಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಮಾತನಾಡಿಸಿದರು. ಪಕ್ಷವನ್ನು ಇಷ್ಟು ವರ್ಷ ಕಟ್ಟಿ ಬೆಳಸಿದ ಎಲ್ಲ ಹಿರಿಯರಿಗೂ ಧನ್ಯವಾದ ಹೇಳಲು ಕರೆ ಮಾಡಿರುವುದಾಗಿ ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಕೆಲವರ ನಡವಳಿಕೆ ಸಣ್ಣ ಬೇಸರ ಮೂಡಿಸಿದರೂ, ಪಕ್ಷಕ್ಕಾಗಿ ಶ್ರಮಿಸಿದ ನನ್ನನ್ನು ರಾಷ್ಟ್ರೀಯ ಮಟ್ಟದ ನಾಯಕರೇ ಸ್ಮರಿಸಿ, ಅಭಿಮಾನ ವ್ಯಕ್ತಪಡಿಸಿದ್ದು ಖುಷಿ ನೀಡಿತು ಎಂದು ಹೇಳಿದರು.

ಬಿಜೆಪಿಯನ್ನು ನಾಲ್ಕೈದು ದಶಕಗಳ ಕಾಲ ಕಟ್ಟಿ ಬೆಳೆಸಿದ ಗುರುಸಿದ್ದನಗೌಡರಿಗೆ ಇತ್ತೀಚಿಗೆ ಅಪಮಾನ ಆಗುವಂತೆ ನಡೆಸಿಕೊಳ್ಳಲಾಗಿದೆ. ಗುರುಸಿದ್ಧನಗೌಡರು ಮತ್ತು ಡಾ.ರವಿಕುಮಾರ್ ಅವರೊಂದಿಗೆ ಎಂದೆಂದಿಗೂ ನಾವು ಇದ್ದೇವೆ. ಜೊತೆಗೆ, ಇತ್ತೀಚಿನ ದಿನಗಳಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ, ಸ್ವಜನ ಪಕ್ಷಪಾತ ಮತ್ತು ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ತಿಳಿಸಿದರು.

ಸರ್ಕಾರದ ವಿರುದ್ಧ ಎಚ್‌ಡಿಕೆ ಆಕ್ರೋಶ

ರಾಜ್ಯ ಸರ್ಕಾರವು ನೀಡುತ್ತಿರುವ ವಿವಿಧ ಗ್ಯಾರಂಟಿಗಳ ಪೈಕಿ ಶೇಕಡಾ 50ರಷ್ಟು ಕೂಡ ಜನತೆಗೆ ಸರಿಯಾಗಿ ತಲುಪುತ್ತಿಲ್ಲ, ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ಆಡಳಿತದಿಂದ ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ ಎಂದು ಜೆಡಿಎಸ್ ವರಿಷ್ಠ ರಾಜ್ಯದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಅವರು ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೆಳತೂರು ಗ್ರಾಮದಲ್ಲಿ ಶ್ರೀಕೋಟೆ ರಂಗನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ, ವಿಗ್ರಹದ ಪುನರ್ ಪ್ರತಿಷ್ಠಾಪನೆ, ವಿಮಾನ ಗೋಪುರ ಮತ್ತು ಗರುಡಗಂಭದ ಪ್ರತಿಷ್ಠಾಪನೆ, ಮಹಾಕುಂಭಾಬಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ರಾಜ್ಯದ ಜನತೆ ಕಾಂಗ್ರೇಸ್ ಪಕ್ಷವು ಘೋಷಿಸಿದ ಗ್ಯಾರಂಟಿಗಳಿಗೆ ಮಾರುಹೋಗಿ 136 ಸ್ಥಾನಗಳನ್ನು ನೀಡಿದ್ದಾರೆ. ಆದರೆ ಜನತೆಯ ವಿಶ್ವಾಸವನ್ನು ಉಳಿಸಿಕೊಳ್ಳಲು ವಿಫಲವಾಗಿರುವ ಸರ್ಕಾರವು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಬೇಜವಾಬ್ಧಾರಿತನದಿಂದ ವರ್ತಿಸುತ್ತಿದೆ. ಗೃಹಲಕ್ಷ್ಮೀ ಹಾಗೂ ಬಡವರ ಪಡಿತರದ ಅಕ್ಕಿಯ ಹಣವು ಶೇ.50ರಷ್ಟು ಫಲಾನುಭವಿಗಳಿಗೆ ಕೂಡಾ ತಲುಪುತ್ತಿಲ್ಲ. 200ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದ ಕಾಂಗ್ರೇಸ್ ಈಗ ಪ್ರಸ್ತುತ ಎಷ್ಟು ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡುತ್ತಿದೆ ಎಂಬುದು ಬಹಿರಂಗ ಸತ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ರೈತರು ತೀವ್ರವಾದ ಬರವನ್ನು ಎದುರಿಸುತ್ತಿರುವುದರಿಂದ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುದ ಘೋಷಣೆ ಮಾಡಿ ಎದೆಗಾರಿಕೆಯನ್ನು ಪ್ರದರ್ಶಿಸಬೇಕು ಎಂದು ಸವಾಲು ಹಾಕಿದ ಮಾಜಿ ಸಿಎಂ, ಪಂಚರಾಜ್ಯಗಳ ಚುನಾವಣಾ ಫಲಿತಾಂಶದಿಂದ ಕಂಗಾಲಾಗಿರುವ ಕಾಂಗ್ರೇಸ್ ಪಕ್ಷವು ಹಣದ ಹೊಳೆ ಹರಿಸಿ ಆಶ್ವಾಸನೆಗಳು ಮತ್ತು ಭರವಸೆಯನ್ನು ನೀಡಿ ತೆಲಂಗಾಣ ರಾಜ್ಯದಲ್ಲಿ ಮಾತ್ರ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ ಎಂದು ಲೇವಡಿ ಮಾಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ ಜೊತೆಯಾಗಿ ಒಂದಾಗಿ ಪ್ರಚಾರ ನಡೆಸಿ ಕಾಂಗ್ರೆಸ್‌ಗೆ ತಕ್ಕ ಉತ್ತರವನ್ನು ನೀಡುವ ಜೊತೆಗೆ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದರು.

ಇಂದಿನ ಒತ್ತಡದ ಜೀವನದಲ್ಲಿ ದೇವರು ಮತ್ತು ಧರ್ಮದ ಮೊರೆ ಹೋಗುವುದು ಅನಿವಾರ್ಯವಾಗಿದೆ. ಭಗವಂತನ ನಾಮಸ್ಮರಣೆ ಮಾಡಿ ಪೂಜಿಸಿದರೆ ಸಾಕು ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ. ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿರುವ, ನಮ್ಮ ನೆಲದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ದೇವಾಲಯಗಳ ಸಂರಕ್ಷಣೆಯು ಅತ್ಯಗತ್ಯವಾಗಿ ಆಗಬೇಕಾಗಿದೆ ಎಂದರು.

ಈ ದಿಕ್ಕಿನಲ್ಲಿ ಬೆಳತೂರು ಗ್ರಾಮಸ್ಥರು ಶ್ರೀ ಕೋಟೆ ರಂಗನಾಥಸ್ವಾಮಿ ದೇವಾಲಯವನ್ನು ಜೀರ್ಣೋದ್ಧಾರ ಮಾಡಿಸಿ, ಹೊಸದಾಗಿ ವಿಮಾನಗೋಪುರ ಮತ್ತು ಗರುಡಗಂಭವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ. ನಮ್ಮ ಮುಂದಿನ ತಲೆಮಾರಿಗೆ ನಮ್ಮ ನೆಲದ ಇತಿಹಾಸ ಮತ್ತು ಪರಂಪರೆಯ ಬಗ್ಗೆ ಬೆಳಕು ಚೆಲ್ಲುವ ದೇವಾಲಯಗಳನ್ನು ಉಳಿಸಿ ಸಂರಕ್ಷಣೆ ಮಾಡುವುದು ಅಗತ್ಯವಾಗಿರುವುದರಿಂದ ಬೆಳತೂರು ಗ್ರಾಮಸ್ಥರನ್ನು ತಾವು ಅಭಿನಂದಿಸುವುದಾಗಿ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+