ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈತ್ರಿ ಸರ್ಕಾರ ನುಗ್ಗೇಕಾಯಿ ಗಿಡ ಇದ್ದಂತೆ: ಆರ್ ಅಶೋಕ್ ಲೇವಡಿ

|
Google Oneindia Kannada News

ಬೆಂಗಳೂರು, ಜೂನ್ 19: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ನುಗ್ಗೇಕಾಯಿ ಗಿಡ ಇದ್ದಂತೆ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಲೇವಡಿ ಮಾಡಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಯಾವುದೇ ರೀತಿಯ ಆಪರೇಷನ್ ಕಮಲ ಮಾಡುತ್ತಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ವಿನಾಕಾರಣ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗೆ ಬಿಜೆಪಿಯವರ ವಿರುದ್ಧ ಆರೋಪಿಸುವುದೇ ಅವರಿಗೆ ಚಟವಾಗಿಬಿಟ್ಟಿದೆ. ಈ ರೀತಿ ಸುಖಾಸುಮ್ಮನೆ ಆರೋಪ ಹೊರಿಸುವುದನ್ನು ಬಿಟ್ಟು ಬರಪರಿಹಾರದ ಬಗ್ಗೆ ಅವರು ಗಮನ ಹರಿಸಲಿ ಎಂದು ಆಗ್ರಹಿಸಿದರು.

ಜಿಂದಾಲ್ ವಿವಾದದಲ್ಲಿ ಚರ್ಚೆಗೆ ಸಿದ್ಧ, ಸಿಎಂ ಸಿಗಬೇಕಲ್ಲ : ಅಶೋಕ ಜಿಂದಾಲ್ ವಿವಾದದಲ್ಲಿ ಚರ್ಚೆಗೆ ಸಿದ್ಧ, ಸಿಎಂ ಸಿಗಬೇಕಲ್ಲ : ಅಶೋಕ

ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲದೆ ಇದ್ದರೆ ಅದಕ್ಕೆ ನಾವು ಹೊಣೆಗಾರರಲ್ಲ. ಮೈತ್ರಿ ಸರ್ಕಾರದಲ್ಲಿ ಹೊಸ ಸಚಿವರಿಗೆ ಖಾತೆ ನೀಡದೆ ಬರಿ ಕ್ಯಾತೆ ಮಾಡುತ್ತಿದ್ದಾರೆ. ಅಧಿವೇಶನದ ಕರೆದರೆ ಚರ್ಚಿಸಲು ಸಾಕಷ್ಟು ಗಂಭೀರ ಸಮಸ್ಯೆಗಳಿವೆ ಎಂದು ಹೇಳಿದರು.

BJP MLA R Ashok called Congress JDS government is like drumstick tree

ಜೆಡಿಎಸ್ ಸಹವಾಸ ಮಾಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಿದೆ. ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಆರಂಭವಾಗಿದ್ದು, ಪಕ್ಷ ಒಡೆದು ಮಣ್ಣುಪಾಲಾಗುವುದರಲ್ಲಿ ಅನುಮಾನವಿಲ್ಲ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನಿರ್ಮಾಣ, ನಿರ್ದೇಶನದ ಸಿನಿಮಾ ಕಥೆ ಹೇಳಿದ ಆರ್. ಅಶೋಕ್ ಕಾಂಗ್ರೆಸ್ ನಿರ್ಮಾಣ, ನಿರ್ದೇಶನದ ಸಿನಿಮಾ ಕಥೆ ಹೇಳಿದ ಆರ್. ಅಶೋಕ್

ಸಿದ್ದರಾಮಯ್ಯ ಅವರು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ, ಯಡಿಯೂರಪ್ಪ ಅವರ ವಿರುದ್ಧ ಏಕವಚನದ ಪ್ರಯೋಗ ಮಾಡುತ್ತಿದ್ದರು. ಈಗ ಅವರದೇ ಪಕ್ಷದ ಶಾಸಕ ಅವರನ್ನು ಏಕವಚನದಲ್ಲಿ ಕರೆಯುವಂತಾಗಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿಯೇ ಅತಂತ್ರವಾಗಿದೆ ಎಂದು ಟೀಕಿಸಿದರು.

English summary
BJP leader R Ashok compared Congress and JDS coalition government to Drumstick tree.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X