ಬಿಜೆಪಿ ಬ್ಲೂ ಫಿಲಂ ಮುಗಿದ ಸರಕು: ಮಾಳವಿಕಾ
ಬೆಂಗಳೂರು, ಏಪ್ರಿಲ್ 10: ಬಿಜೆಪಿ ಶಾಸಕರ ಬ್ಲೂ ಫಿಲಂ ಪುರಾಣಗಳು ಮುಗಿದ ಸರಕು/ ಅಧ್ಯಾಯಗಳಾಗಿವೆ ಎಂದು ಬಿಜೆಪಿ ವಕ್ತಾರರಾದ ಕಿರುತೆರೆ ನಟಿ ಮಾಳವಿಕಾ ಅವಿನಾಶ್ ಅವರು ತಿಳಿಸಿದ್ದಾರೆ. ಆದರೆ ಜನ ಅದರಲ್ಲೂ ಮತದಾರ ಸ್ಮೃತಿಪಟಲದಿಂದ ಅದು ಅಳಸಿಹೋಗಿದೆಯಾ? ಎಂಬುದಕ್ಕೆ ಉತ್ತರ ಮೇ 16ರಂದು ದೊರೆಯಲಿದೆ.
ಪ್ರಜಾಪ್ರಭುತ್ವದ ಪವಿತ್ರ ದೇಗುಲ ವಿಧಾನಸಭೆಯಲ್ಲಿ ಈ ಹಿಂದೆ ಬಿಜೆಪಿಯ ಮೂವರು ಶಾಸಕರು ಮೊಬೈಲ್ ಫೋನಿನಲ್ಲಿ ಬ್ಲೂ ಫಿಲಂ ವಿಡಿಯೋ ವೀಕ್ಷಣೆ ಮಾಡಿದ್ದರು. ಜತೆಗೆ, ಕೆಲ ಶಾಸಕ/ಸಚಿವರಿಂದ ಮಹಿಳೆಯರ ಮೇಲೆ ದೌರ್ಜನ್ಯ/ ಹಿಂಸಾಚಾರಗಳೂ ನಡೆದಿದ್ದವು. ಆದರೆ ಅದೆಲ್ಲಾ ಈಗ ಗತಿಸಿಹೋದ ಸಂಗತಿಗಳಾಗಿವೆ. ಅಂತಹ ಕಳಂಕಿತರ ವಿರುದ್ಧ ಪಕ್ಷವು ಕಾಲಕಾಲಕ್ಕೆ ಖಡಕ್ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಮಾಳವಿಕಾ ಅವಿನಾಶ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮ/ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಈ ಭರವಸೆಗಳನ್ನಾಧರಿಸಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಮತ ಹಾಕಬೇಕು. ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡುವಂತೆ ಕೋರುವುದಾಗಿ ಅವರು ಹೇಳಿದರು.
ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮನಗಳಿವೆ. ಎಲ್ಲ ಸಮುದಾಯದ ಜನರಿಗೂ ಕಲ್ಯಾಣ ಯೀಜನೆಗಳಿವೆ. ಮೋದಿ ಆಡಳಿತದಲ್ಲಿ ದೇಶ ಪ್ರಗತಿ ಕಾಣಲಿದೆ; ಸುಭಿಕ್ಷವಾಗಲಿದೆ ಎಂದು ಮಾಳವಿಕಾ ವಿಶ್ವಾಸ ವ್ಯಕ್ತಪಡಿಸಿದರು.
ಒಟ್ಟು 7 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವಂತೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಘಟಕ ವರಿಷ್ಠರಲ್ಲಿ ಮನವಿ ಮಾಡಿತ್ತು. ಆದರೆ ಒಬ್ಬರಿಗೆ ಮಾತ್ರ (ಶೋಭಾ ಕರಂದ್ಲಾಜೆ) ಟಿಕೆಟ್ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಮಾಳವಿಕಾ ಸ್ಪಷ್ಟಪಡಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications