MLA Satish Reddy: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ 2 ಕೋಟಿಯ ಸುಪಾರಿ, ಇಬ್ಬರು ಆರೋಪಿಗಳ ಬಂಧನ
ಸುಪಾರಿ ಪಡೆದು ಶಾಸಕ ಸತೀಶ್ ರೆಡ್ಡಿ ಅವರ ಚಲನವಲನದ ಮೇಲೆ ನಿಗಾ ಇಡುತ್ತಿದ್ದ ವೇಳೆಯೇ ವಿಷಯ ಬಹಿರಂಗಗೊಂಡಿದ್ದು, ದುರಂತ ಘಟನೆ ನಡೆಯುವುದು ತಪ್ಪಿದೆ.
ಬೆಂಗಳೂರು, ಫೆಬ್ರವರಿ. 15: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಎರಡು ಕೋಟಿ ರೂಪಾಯಿಗೆ ಸುಪಾರಿ ನೀಡಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ರೌಡಿಗಳ ತಂಡ ಸಂಚು ರೂಪಿಸಿದ್ದ ವಿಷಯ ಬಹಿರಂಗಗೊಂಡಿದ್ದು, ವಿಲ್ಸನ್ ಗಾರ್ಡನ್ ನಾಗನ ತಂಡ ಶಾಸಕನ ಹತ್ಯೆಗೆ 2 ಕೋಟಿಗೆ ಸುಪಾರಿ ಪಡೆದಿದ್ದರು ಎಂದು ತಿಳಿದು ಬಂದಿದೆ.
ಬಿಜೆಪಿ ಶಾಸಕ ಮತ್ತು ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಅವರನ್ನು ಹತ್ಯೆ ಮಾಡಲು 2 ಕೋಟಿ ರೂಪಾಯಿ ಸುಪಾರಿ ನೀಡಿದ್ದ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಪೊಲೀಸರು ಹೊಳಲ್ಕೆರೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಆಕಾಶ್, ಗಗನ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಸುಪಾರಿ ಪಡೆದಿದ್ದ ಪ್ರಮುಖ ಆರೋಪಿ ವಿಲ್ಸನ್ ಗಾರ್ಡನ್ ನಾಗನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಸುಪಾರಿ ಪಡೆದು ಶಾಸಕ ಸತೀಶ್ ರೆಡ್ಡಿ ಅವರ ಚಲನವಲನದ ಮೇಲೆ ನಿಗಾ ಇಡುತ್ತಿದ್ದ ವೇಳೆಯೇ ವಿಷಯ ಬಹಿರಂಗಗೊಂಡಿದ್ದು, ದುರಂತ ಘಟನೆ ನಡೆಯುವುದು ತಪ್ಪಿದೆ.
ಶಾಸಕ ಸತೀಶ್ ರೆಡ್ಡಿ ಆಪ್ತ ಸಹಾಯಕ ಹರೀಶ್ ಬಾಬು ಅವರಿಗೆ ಫೆಬ್ರವರಿ 11 ರಂದು ಬೊಮ್ಮನಹಳ್ಳಿ ನಿವಾಸಿ ಚಂದ್ರು ಎಂಬುವವರು ಕರೆ ಮಾಡಿ ಕೊಲೆಗೆ ಸಂಚು ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಲ್ಸನ್ ಗಾರ್ಡನ್ ನಾಗನ ತಂಡದಲ್ಲಿದ್ದ ಚಿತ್ರದುರ್ಗದ ಮೂಲದ ಆಕಾಶ್ ಎಂಬುವವರು ಕೊಲೆಯ ಸುಳಿವು ಬಿಟ್ಟು ಕೊಟ್ಟಿದ್ದಾನೆ. ಇದಾದ ಬಳಿಕ ಸತೀಶ್ ರೆಡ್ಡಿ ಬೆಂಬಲಿಗರಾಗಿದ್ದ ಚಂದ್ರು, ಹರೀಶ್ ಬಾಬುಗೆ ವಿಷಯ ಮುಟ್ಟಿಸಿದ್ದಾರೆ. ಎಚ್ಚೆತ್ತ ಶಾಸಕರು ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ತನಿಖೆ ಆರಂಭವಾಗಿತ್ತು.
ತಲೆ ಮರೆಸಿಕೊಂಡಿರುವ ವಿಲ್ಸನ್ ಗಾರ್ಡನ್ ನಾಗನ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ











Click it and Unblock the Notifications