ಕೆಎಎಸ್ ಅಭ್ಯರ್ಥಿಗಳ ಪರವಾಗಿ ಶಾಸಕ ಸುರೇಶ್ ಕುಮಾರ್ ಉಪವಾಸ ಸತ್ಯಾಗ್ರಹ
ಬೆಂಗಳೂರು, ಜುಲೈ 03: ಕೆಎಎಸ್ ಅಭ್ಯರ್ಥಿಗಳ ಪರವಾಗಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಕೆಪಿಎಸ್ಸಿಯು ಕೆಎಎಸ್ ಅಭ್ಯರ್ಥಿಗಳ ಸಂದರ್ಶನ ದಿನಾಂಕವನ್ನು ಶೀಘ್ರವೇ ನಿಗದಿಗೊಳಿಸಬೇಕು ಎಂದು ಸುರೇಶ್ ಕುಮಾರ್ ಅವರು ಕೆಪಿಎಸ್ಸಿ ಕಚೇರಿ ಎದುರುಗಡೆಯೇ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಸುರೇಶ್ ಕುಮಾರ್ ಅವರು ಪ್ರತಿಭಟನೆ ಕೂತಿದ್ದ ಸ್ಥಳಕ್ಕೆ ಧಾವಿಸಿದ ಕೆಪಿಎಸ್ಸಿ ಅಧಿಕಾರಿಗಳು ಪ್ರತಿಭಟನೆ ಬಿಡುವಂತೆ ಸುರೇಶ್ ಕುಮಾರ್ ಅವರ ಬಳಿ ಮನವಿ ಮಾಡಿದ್ದಾರೆ. ಜುಲೈ 29 ರಿಂದ ಸಂದರ್ಶನ ನಡೆಸಲಾಗುವುದು ಎಂದು ಲಿಖಿತ ಭರವಸೆಯನ್ನು ಅವರಿಂದ ಪಡೆದ ಬಳಿಕ ಸುರೇಶ್ ಕುಮಾರ್ ಅವರು ಪ್ರತಿಭಟನೆ ಹಿಂಪಡೆದಿದ್ದಾರೆ.

ಅಧಿಕಾರಿಗಳು ನೀಡಿರುವ ಭರವಸೆಯಂತೆ 2015 ರ ಗೆಜೆಟೆಡ್ ಪ್ರೊಬೆಷನರ್ ಬ್ಯಾಚ್ ಅಭ್ಯರ್ಥಿಗಳಿಗೆ ಜುಲೈ 29 ರಿಂದ ಸಂದರ್ಶನ ನಡೆಸಲಾಗುತ್ತದೆ. ಈ ಪ್ರತಿಭಟನೆಯಲ್ಲಿ ಶಾಸಕ ಸುರೇಶ್ ಕುಮಾರ್ ಅವರ ಜೊತೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಅವರು ಸಹ ಇದ್ದರು.
2015 ರ ಬ್ಯಾಚ್ ನ KAS ಅಧಿಕಾರಿಗಳ ಆಯ್ಕೆಗಾಗಿ ಅಧಿಸೂಚನೆ ಹೊರಬಿದ್ದಿದ್ದು 12-05-2017 ರಂದು. ಅದರ ಪೂರ್ವಭಾವಿ ಪರೀಕ್ಷೆ( preliminary exam) ನಡೆದದ್ದು 20-08-2017 ರಂದು. ಮುಖ್ಯ ಪರೀಕ್ಷೆ ( Mains) ನಡೆದದ್ದು 2017 ರ ಡಿಸೆಂಬರ್ 16 ರಿಂದ 23 ರವರೆಗೆ. ಆದರೆ ಒಂದು ವರ್ಷ ಕಳೆದರೂ ಫಲಿತಾಂಶ ದೊರಕಿರಲಿಲ್ಲ.

ಈ ಬಗ್ಗೆ ಶಾಸಕ ಸುರೇಶ್ ಕುಮಾರ್ ಅವರು ಈ ಹಿಂದೆ ಕೆಪಿಎಸ್ಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಎಲ್ಲರೊಡನೆ ಚರ್ಚಿಸಿದ್ದರು, ಕಳೆದ ವರ್ಷ ನವೆಂಬರ್ ನಲ್ಲಿ ಇದೇ ವಿಷಯದ ಬಗ್ಗೆ ರಾಜ್ಯ ಸಿಎಂ ಅವರಿಗೂ ಪತ್ರ ಬರೆದಿದ್ದರು, ಕಳೆದ ವರ್ಷ ಡಿಸೆಂಬರ್ ನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದರು, ಆದರೆ ಯಾವುದೂ ಫಲ ನೀಡಿರಲಿಲ್ಲ, ಈಗ ಕೆಪಿಎಸ್ಸಿಯು ಕಣ್ಣು ತೆರೆದಿದ್ದು ಸಂದರ್ಶನ ಮಾಡುವುದಾಗಿ ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications