ಅವಸರವೇನಿಲ್ಲ, ಹೈಕಮಾಂಡ್ ಸೂಚನೆಯಂತೇ ನಡೆಯುತ್ತಿದ್ದೇವೆ: ಸೋಮಣ್ಣ
ಬೆಂಗಳೂರುಮ ಜುಲೈ 26: 'ಯಡಿಯೂರಪ್ಪ ಅವರು ರಾಜ್ಯದ ಪ್ರಶ್ನಾತೀತ ನಾಯಕರು. ಅವರು ನಿನ್ನೆಯೇ ಅಧಿಕಾರ ಸ್ವೀಕಾರ ಮಾಡಬೇಕಿತ್ತು. ರಾಜ್ಯದ ಹಣಕಾಸು ವಿಧೇಯಕಕ್ಕೆ ಅನುಮೋದನೆ ಸಿಗಬೇಕಿದೆ. ಈ ತಿಂಗಳ 31ರ ಒಳಗೆ ಅನುಮೋದನೆ ಆಗಬೇಕು. ಇಲ್ಲದಿದ್ದರೆ ಒಂದು ರೂಪಾಯಿ ಕೂಡ ಖರ್ಚು ಮಾಡಲು ಸಾಧ್ಯವಿಲ್ಲ. ರಾಜ್ಯದ ಹಿತದೃಷ್ಟಿಯಿಂದ, ಅನುಕೂಲವಾಗಲಿ ಎಂದು ಬಿಜೆಪಿ ನೇತಾರರು ಅಧಿಕಾರ ಸ್ವೀಕಾರ ಮಾಡಲು ಸೂಚನೆ ನೀಡಿದ್ದಾರೆ. ತರಾತುರಿ ಏನಿಲ್ಲ' ಎಂದು ಬಿಜೆಪಿ ಮುಖಂಡ ವಿ. ಸೋಮಣ್ಣ ಹೇಳಿದರು.
ಖಾಸಗಿ ಸುದ್ದಿವಾಹಿನಿಯೊಂದರ ಜತೆ ಮಾತನಾಡಿದ ವಿ. ಸೋಮಣ್ಣ, ಹೈಕಮಾಂಡ್ ಸೂಚನೆ ಮೇರೆಗೇ ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಮುಂದಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
'ಹೈಕಮಾಂಡ್ ಹೇಳದೆ ಏನೂ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ. ಬಿಜೆಪಿ ಶಿಸ್ತಿನ ಪಕ್ಷ. ಇಲ್ಲಿ ನಾಯಕರ ಆದೇಶಗಳನ್ನು ಪಾಲಿಸುತ್ತೇವೆ. ಯಡಿಯೂರಪ್ಪ ಅವರಿಗೆ ಕೇಂದ್ರದಿಂದ ಮಾಹಿತಿ ಬಂದ ಬಳಿಕವೇ ಮುಂದೆ ಹೋಗಿದ್ದಾರೆ' ಎಂದು ತಿಳಿಸಿದರು.

ಯಡಿಯೂರಪ್ಪ ಅವರ ಮುಂದೆ ಸವಾಲು ಇದೆ ನಿಜ. ಆದರೆ, ಯಡಿಯೂರಪ್ಪ ಅವರಿಗೆ ಇದನ್ನೆಲ್ಲ ನಿಭಾಯಿಸುವ ಶಕ್ತಿಯನ್ನು ದೇವರು ಕೊಟ್ಟಿದ್ದಾನೆ. ಅವರ ಒಳ್ಳೆತನ ಅವರನ್ನು ಕಾಪಾಡುತ್ತದೆ. ರಾಜ್ಯದ ಅಭಿವೃದ್ಧಿಗೆ ಅವರ ಅಗತ್ಯವಿದೆ ಎಂದು ದೇವರು ಆಶೀರ್ವಾದ ಮಾಡಿದ್ದಾನೆ ಎಂದು ಹೇಳಿದರು.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಸ್ಪೀಕರ್ ಸಾಹೇಬರು ಬಳಸಿರುವ ಭಾಷೆ, ಹೇಳಿರುವ ಬಹುತೇಕ ವಿಚಾರಗಳು ರಾಜಕೀಯ ಪ್ರೇರಿತವಾಗಿವೆ. ಅವರು ಕಾಂಗ್ರೆಸ್ನ ಮೂರು ಜನರನ್ನು ಕಚೇರಿಯಲ್ಲಿ ಕೂರಿಸಿಕೊಳ್ಳುತ್ತಾರೆ. ಆದರೆ, ನಾವು ಭೇಟಿಯಾಗಲು ಹೋದರೆ ಅನುಮತಿ ನೀಡಲಿಲ್ಲ ಎಂದು ಆರೋಪಿಸಿದರು.
ಸ್ಪೀಕರ್ ಅವರನ್ನು 35 ವರ್ಷಕ್ಕೂ ಮೇಲ್ಪಟ್ಟು ಸಮಯದಿಂದ ಹತ್ತಿರದಿಂದ ನೋಡಿದ್ದೇನೆ. ಅವರು ಸ್ಪೀಕರ್ ಆಗಿದ್ದಾಗ ಈ ಹಿಂದೆ ಸಚಿವನಾಗಿದ್ದೆ. ಅವರಿಂದ ಸಾಕಷ್ಟು ಕಲಿತಿದ್ದೇನೆ. ಯಾಕೋ ಗೊತ್ತಿಲ್ಲ ಅವರ ಭಾವನೆ, ಧೋರಣೆ ಯಾಕೋ ಬದಲಾಗಿದೆ. ಇಂದು ಅವರು ಒತ್ತಡದಲ್ಲಿ ಇದ್ದಾರೆ ಎಂದು ಗೊತ್ತಾಗುತ್ತದೆ ಎಂದರು.
ಶಾಸಕರ ಅನರ್ಹತೆಯ ನಿರ್ಧಾರವು ಅವರಿಂದ ಆಗಬಾರದಿತ್ತು. ಸ್ವಪ್ರೇರಣೆಯಿಮದ ರಾಜೀನಾಮೆ ಕೊಟ್ಟಾಗ ತಪ್ಪೇನಿರುತ್ತದೆ? ನಾನೂ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದವನು. ಯಾವ ವಿಚಾರವನ್ನೋ ಇನ್ನು ಯಾವುದಕ್ಕೋ ತಳುಕು ಹಾಕುವುದು ಸರಿಯಲ್ಲ. ನಾವು ನಾವಾಗಿ ಇರಬೇಕು. ಇನ್ನೊಬ್ಬರ ವಿಚಾರವಾಗಬಾರದು. ಅವರು ನಾವು ಕಂಡ ರಮೇಶ್ ಕುಮಾರ್ ಆಗಿರಬೇಕಿತ್ತು ಎಂದು ಹೇಳಿದರು.
ಸ್ಪೀಕರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುವುದು ಅಷ್ಟೊಂದು ಇತ್ತಾ? ನನ್ನ ಇಚ್ಛೆಯಿಂದ ರಾಜಿನಾಮೆ ಕೊಡುತ್ತೇನೆ, ಯಾರ ಒತ್ತಡವೂ ಇಲ್ಲ ಎಂದರೆ ಅದನ್ನು ವಿರೋಧಿಸಲು ಯಾರಿಗೆ ಅಧಿಕಾರವಿದೆ? ಅದನ್ನು ಜನರು ತೀರ್ಮಾನ ಮಾಡಬೇಕು. ಚುನಾವಣೆಯಲ್ಲಿ ಅವರು ತೀರ್ಮಾನಿಸುತ್ತಾರೆ, ನಾವು ನೀವಲ್ಲ ಎಂದರು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications