ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಪರಮೇಶ್ವರ್
ಬೆಂಗಳೂರು, ಜುಲೈ 02: ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣ ಇದೆ ಎಂದು ಆ ಪಕ್ಷದ ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ, ಅವರನ್ನು ಅವಶ್ಯಕತೆ ಬಿದ್ದಾಗ ಕರೆಸಿಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಅವರದ್ದೇ ಆದ ರಣನೀತಿ ಇದೆ, ಈ ಎರಡು ರಾಜೀನಾಮೆ ಹಿಂದೆ ಬಿಜೆಪಿಯ ಕೈವಾಡವಿದೆ, ಸಿಎಂ ಅವರು ವಿದೇಶಕ್ಕೆ ಹೋದಾಗಲೇ ಈ ಘಟನೆ ಆಗಿರುವುದು ಕಾಕತಾಳೀಯ ಎಂದು ಅವರು ಹೇಳಿದರು.
ರಿವರ್ಸ್ ಆಪರೇಷನ್ ಮಾಡುವುದಾಗಿ ಈಗಾಗಲೇ ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೆ ಪರಮೇಶ್ವರ್ ಅವರು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎನ್ನುತ್ತಿರುವುದು ಅನುಮಾನ ಮೂಡಿಸಿದೆ.
ಮುಂದುವರೆದು ಮಾತನಾಡಿರುವ ಪರಮೇಶ್ವರ್, ಸಚಿವ ಸ್ಥಾನ ಸಿಗದೇ ಅತೃಪ್ತವಾಗಿರುವ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ಬಿಟ್ಟುಕೊಡಲು ಹಿರಿಯ ಸಚಿವರು ಸಿದ್ಧವಿದ್ದಾರೆ ಎಂದು ಮಹತ್ವದ ಹೇಳಿಕೆಯನ್ನು ಡಿಸಿಎಂ ಪರಮೇಶ್ವರ್ ನೀಡಿದ್ದಾರೆ.

'ಕೆಲವು ಹಿರಿಯರು ಸಚಿವ ಸ್ಥಾನ ತೊರೆಯಲು ಸಿದ್ಧರಿದ್ದಾರೆ'
ಕೆಲವು ಹಿರಿಯ ಸಚಿವರು ತಮ್ಮ ಸ್ಥಾನ ತ್ಯಜಿಸಲು ಸಿದ್ಧರಿದ್ದಾರೆ, ಆದರೆ ಹೈಕಮಾಂಡ್ನಿಂದ ಆದೇಶ ಬಂದರೆ ಮಾತ್ರ ಬದಲಾವಣೆ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

ನಾಲ್ವರು ಶಾಸಕರ ಕಳೆದುಕೊಂಡಿರುವ ಕಾಂಗ್ರೆಸ್
ಈಗಾಗಲೇ ಉಮೇಶ್ ಜಾಧವ್, ರೋಶನ್ ಬೇಗ್ ಸೇರಿ ನಾಲ್ವರು ಶಾಸಕರನ್ನು ಕಳೆದುಕೊಂಡಿರುವ ಕಾಂಗ್ರೆಸ್ ಇನ್ನಷ್ಟು ಶಾಸಕರನ್ನು ಕಳೆದುಕೊಳ್ಳುವ ಆತಂಕದಲ್ಲಿದೆ ಹಾಗಾಗಿ ಅತೃಪ್ತರಿಗೆ ಸಚಿವ ಸ್ಥಾನ ನೀಡಲು ಸಜ್ಜಾಗಿದೆ.

ಇಬ್ಬರೂ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದರು: ಪರಮೇಶ್ವರ್
ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಗೆ ಸ್ಪಷ್ಟ ಕಾರಣ ತಿಳಿದಿಲ್ಲ, ಈ ಇಬ್ಬರೂ ಬಿಜೆಪಿಯ ಸಂಪರ್ಕದಲ್ಲಿ ಇದ್ದರು, ಈ ಎರಡು ರಾಜೀನಾಮೆ ಹಿಂದೆ ಬಿಜೆಪಿಯ ಕೈವಾಡ ಇರುವುದು ಸ್ಪಷ್ಟ ಎಂದು ಪರಮೇಶ್ವರ್ ಹೇಳಿದ್ದಾರೆ.

'ಸಂಪುಟ ಉಪಸಮಿತಿಯೊಂದಿಗೆ ಮಾತನಾಡಬೇಕಿತ್ತು'
ಆನಂದ್ ಸಿಂಗ್ ಅವರಿಗೆ ಜಿಂದಾಲ್ ವಿಷಯವಾಗಿ ಭಿನ್ನಾಭಿಪ್ರಾಯ ಇದ್ದಿದ್ದರೆ ಅವರು ಶಾಸಕಾಂಗ ಸಭೆಯಲ್ಲಿ ಚರ್ಚಿಸಬಹುದಾಗಿತ್ತು, ಸಂಪುಟ ಉಪಸಮಿತಿಯೊಂದಿಗೆ ಚರ್ಚೆ ಮಾಡಬೇಕಿತ್ತು, ಜಿಂದಾಲ್ಗೆ ಭೂಮಿ ಪರಬಾರೆ ಪ್ರಸ್ತಾಪ ಯಾರ ಸಮಯದಲ್ಲಿ ಆಯಿತು ಎಂಬ ಬಗ್ಗೆ ಅಧ್ಯಯಯನ ಮಾಡಬೇಕಿತ್ತು ಎಂದು ಪರಮೇಶ್ವರ್ ಅವರು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications