ಸಿಲಿಂಡರ್ಗೆ ಪೂಜಿಸಿದ ಕಾಂಗ್ರೆಸ್: ಸಿಲಿಂಡರ್ನಲ್ಲಿ ದೇವರನ್ನು ನೋಡುತ್ತಿದ್ದಾರೆ ಎಂದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು, ಮೇ. 10: ಬುಧವಾರ 242 ವಿಧಾನಸಭಾ ಕ್ಷೇತ್ರಗಳ ಮತದಾನದಲ್ಲಿ ಅಡುಗೆ ಅನಿಲ ಸಿಲಿಂಡರ್ಗಳಿಗೆ ಪ್ರಾರ್ಥನೆ ಸಲ್ಲಿಸುತ್ತಿರುವ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಬೆಂಗಳೂರಿನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. "ಕನಿಷ್ಠ ಅವರು ಏನನ್ನಾದರೂ ಪೂಜೆ ಮಾಡುತ್ತಿದ್ದಾರೆ" ಎಂದು ವ್ಯಂಗ್ಯವಾಡಿದ್ದಾರೆ.
"ಇದ್ದಕ್ಕಿದ್ದಂತೆ, ಕಾಂಗ್ರೆಸ್ ಪಕ್ಷವು ಎಲ್ಲವನ್ನೂ ಪ್ರಾರ್ಥಿಸಲು ಪ್ರಾರಂಭಿಸಿದೆ. ಕಳೆದ ವಾರ ಬಜರಂಗ ಬಲಿ ದೇವಾಲಯಗಳಿಗೆ ಭೇಟಿ ನೀಡುವುದು ಅಥವಾ ಗ್ಯಾಸ್ ಸಿಲಿಂಡರ್ನಲ್ಲಿ ದೇವರನ್ನು ನೋಡುತ್ತಿರುವುದು. ಹಿಂದೂ ತತ್ವದ ಪ್ರಕಾರ ಎಲ್ಲದರಲ್ಲೂ ದೇವರು ಕಾಣುತ್ತಾರೆ. ಅದನ್ನೇ ಕಾಂಗ್ರೆಸ್ ಮಾಡುತ್ತಿದೆ" ಎಂದು ಪಕ್ಷದ ನಾಯಕರನ್ನು ಲೇವಡಿ ಮಾಡಿದ್ದಾರೆ.

" ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷವು ಎಲ್ಪಿಜಿ ಸಿಲಿಂಡರ್ಗಳಿಗೆ ಪ್ರಾರ್ಥನೆ ಸಲ್ಲಿಸುವುದನ್ನು ನಾವು ನಿಜವಾಗಿಯೂ ಸ್ವಾಗತಿಸುತ್ತೇವೆ. ಕಾಂಗ್ರೆಸ್ ಏನನ್ನಾದರೂ ಪೂಜೆಮಾಡುತ್ತಿರುವುದು ನಮಗೆ ಸಂತೋಷವಾಗಿದೆ" ಎಂದು ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಬುಧವಾರ ಹೇಳಿದ್ದಾರೆ.
125ಕ್ಕೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆಯುತ್ತೇವೆ: ರಾಮಲಿಂಗಾ ರೆಡ್ಡಿ
ಮಂಗಳವಾರ, ಮತದಾನಕ್ಕೆ ಒಂದು ದಿನ ಮುಂಚಿತವಾಗಿ, ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಮಂಗಳವಾರ ಎಲ್ಪಿಜಿ ಸಿಲಿಮಡರ್ಗೆ ಪೂಜೆ ಸಲ್ಲಿಸಿ, ಅದರ ಮುಂದೆ ಆರತಿ ಮಾಡಿದರು. ಮತದಾನ ಮಾಡಲು ಹೋಗುವ ಮೊದಲು ಮತದಾರರು ಇದೇ ರೀತಿ ಮಾಡುವಂತೆ ಒತ್ತಾಯಿಸಿದರು. "ಕನ್ನಡಿಗರೇ! ನೀವು ಮತ ಚಲಾಯಿಸಲು ಹೋಗುವ ಮೊದಲು, ಈ ಆಚರಣೆಯನ್ನು ಮಾಡಲು ಮರೆಯದಿರಿ. ವಿಡಿಯೋವನ್ನು ನೋಡಿ," ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನರೇಂದ್ರ ಮೋದಿಯವರ ಹಳೆಯ ಭಾಷಣವನ್ನು ವಾಯ್ಸ್ಓವರ್ನಲ್ಲಿ ಇರುವ ವಿಡಿಯೋದಲ್ಲಿ. ನೀವು ಮತದಾನ ಮಾಡಲು ಹೋದಾಗ ಮೊದಲು ಗ್ಯಾಸ್ ಸಿಲಿಂಡರ್ಗೆ ಪ್ರಾರ್ಥಿಸಿ ಎಂದು ನರೇಂದ್ರ ಮೋದಿ ಹೇಳುವುದು ಕೇಳಿಸುತ್ತದೆ. ಇದರಲ್ಲಿ ಸಿಲಿಂಡರ್ ಬೆಲೆ ಏರಿಕೆ ಬಗ್ಗ ಮೋದಿ ಮಾತನಾಡುವ ಭಾಷಣವಿದೆ.
"ಮೋದಿಜೀಯವರು ಕೊನೆಯ ಬಾರಿ ಹೀಗೆ ಹೇಳಿದ್ದಾರೆ. ಈಗ ನಾನು ಅದನ್ನೇ ಮನವಿ ಮಾಡುತ್ತಿದ್ದೇನೆ. ಸಹೋದರ ಸಹೋದರಿಯರೇ, ಸಿಲಿಂಡರ್ 445 ರಿಂದ 1200 ರೂಪಾಯಿಗೆ ಏರಿದೆ. ದಯವಿಟ್ಟು ನಮ್ಮ ಪ್ರಧಾನಿಯವರ ಕೋರಿಕೆಯಂತೆ ನಿಮ್ಮ ಮತ ಚಲಾಯಿಸಿ. ಗ್ಯಾಸ್ ಸಿಲಿಂಡರ್ಗಳಿಗೆ ಹಾರ ಹಾಕಿ" ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
ಬುಧವಾರ ಕಾಂಗ್ರೆಸ್ ಬೆಂಬಲಿಗರು ಮತದಾನದೊಂದಿಗೆ ಹಲವು ಸ್ಥಳಗಳಲ್ಲಿ ಸಿಲಿಂಡರ್ಗಳನ್ನು ಪೂಜಿಸಲು ಪ್ರಾರಂಭಿಸಿದ್ದಾರೆ. ಇದು 'ಸಿಲಿಂಡರ್ ಚುನಾವಣೆ' ಎಂದು ಕರೆಯುವ ಮೂಲಕ ಪಿಎಂ ಮೋದಿಯವರನ್ನು ಅಪಹಾಸ್ಯ ಮಾಡಲು ಕಾಂಗ್ರೆಸ್ ಪ್ರಯತ್ನಿಸಿದೆ.
-
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ











Click it and Unblock the Notifications