ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಎಸ್ ಬಿ ಎಂ ಶಾಸಕರು!
ಬೆಂಗಳೂರು, ಡಿಸೆಂಬರ್ 14: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಹಲವು ರಾಜಕೀಯ ಗಣ್ಯರು ಪಕ್ಷಬೇಧ ಮರೆತು ಬೆಂಗಳೂರಿನ ವೆಗಾಸ ಆಸ್ಪತ್ರೆಗೆ ತೆರಳುತ್ತಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರು ಸದ್ಯ ಚೇತಿರಿಸಿಕೊಳ್ಳುತ್ತಿದ್ದಾರೆ.
'ಎಸ್ ಬಿ ಎಂ' ಶಾಸಕರು ಎಂದು ಹೆಸರಾದ ಬೆಂಗಳೂರಿನ ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ ಹಾಗೂ ಮುನಿರತ್ನ ಶನಿವಾರ ಸಿದ್ದರಾಮಯ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ತಮ್ಮ ನೆಚ್ಚಿನ ನಾಯಕನನ್ನು ಭೇಟಿಯಾದ ಮೂವರೂ ಶಾಸಕರು, ನೀವು ಬೇಗ ಚೇತರಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಈ ವೇಳೆ, ಸಿದ್ದರಾಮಯ್ಯ, 'ಏನ್ರಯ್ಯ ಮೂವರು ಒಟ್ಟಿಗೆ ಬಂದಿದ್ದಿರಿ, ಬಿಜೆಪಿಯವರು ನಿಮ್ಮನ್ನು ಮಂತ್ರಿ ಮಾಡಿದ್ರಾ. ಎಲ್ಲೇ ಇರಿ ಒಟ್ಟಿನಲ್ಲಿ ಚೆನ್ನಾಗಿ ಇರಿ' ಎಂದು ಕಿಚಾಯಿಸಿದ ಘಟನೆ ನಡೆಯಿತು. ಇದಕ್ಕೆ ನಗುತ್ತಲೇ ಉತ್ತರಿಸಿದ ಎಸ್ ಟಿ ಸೋಮಶೇಖರ್ 'ಎಲ್ಲೇ ಇದ್ದರೂ ನಾವು ನಿಮ್ಮ ಶಿಷ್ಯಂದಿರು' ಎಂದು ಹೇಳಿದರು.

ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ ಹಾಗೂ ಮುನಿರತ್ನ ಆಪ್ತ ಸ್ನೇಹಿತರಾಗಿದ್ದು, ಸಿದ್ದರಾಮಯ್ಯ ಶಿಷ್ಯರು ಎಂದು ಗುರತಿಸಿಕೊಂಡಿದ್ದರು. ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಬಂಡೆದ್ದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಗೆಲುವು ಕಂಡು ಮತ್ತೆ ಶಾಸಕರಾಗಿದ್ದಾರೆ. ಕಳೆದ ಬುಧವಾರ ಎದೆನೋವು ಕಾಣಿಸಿಕೊಂಡಿದ್ದಕ್ಕೆ ಆಂಜಿಯೋಪ್ಲಾಸ್ಟ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರು ಡಿ.15 ರಂದು ಆಸ್ಪತ್ರೆಯಿಂದ ಬಿಡುಗಡೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಅವರಿಗೆ ಕನಿಷ್ಠ ಒಂದು ವಾರ ವಿಶ್ರಾಂತಿ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications