Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಆಪರೇಷನ್ ಕಮಲ!?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು, ಮಾರ್ಚ್ 23: ಕುದುರೆ ವ್ಯಾಪಾರ, ಪಕ್ಷಾಂತರಕ್ಕೆ ಇದ್ದ ಹೆಸರನ್ನು ಆಪರೇಷನ್ ಎಂದು ಬದಲಾಯಿಸಿದ ಕೀರ್ತಿ ಬಿಜೆಪಿ ಪಕ್ಷಕ್ಕೆ ಸಲ್ಲುತ್ತದೆ. ಆಪರೇಷನ್ ಕಮಲದ ಮೂಲಕ ಈ ಹಿಂದೆ ಸಿದ್ದರಾಮಯ್ಯ ಸರ್ಕಾರವನ್ನು ಪತನಗೊಳಿಸಿದ್ದ ಬಿಜೆಪಿ ಮತ್ತೆ ರಾಜ್ಯದಲ್ಲಿ ಅದೆ ಪ್ರಯತ್ನಗಳನ್ನು ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, 'ಆಪರೇಷನ್ ಕಮಲ'ದ ಭಾಗವಾಗಿ ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ನೀಡಲು ಬಿಜೆಪಿ ತಲಾ 50 ಕೋಟಿ ರೂಪಾಯಿಗಳ ಆಫರ್ ನೀಡುತ್ತಿದೆ ಎಂದು ಆರೋಪ ಮಾಡಿದ್ದಾರೆ.

BJP offering 50 crore each to Congress MLA says Chief Minister Siddaramaiah

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ನಂತರದ ಉಪಚುನಾವಣೆಯಲ್ಲಿ ಅವರಿಗೆ ಹಣ ನೀಡುವುದಾಗಿ ಭರವಸೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆರೋಪಿಸಿದ್ದಾರೆ. "ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತದೆ ಸರಿ. ಅಕ್ರಮವಾಗಿ ಆಸ್ತಿ ಗಳಿಸಿದ ಶ್ರೀಮಂತರು ವಿರೋಧ ಪಕ್ಷಗಳಲ್ಲಿ ಮಾತ್ರವೇ ಇದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಬಿಜೆಪಿ ಭ್ರಷ್ಟಾಚಾರದ ಪಿತಾಮಹ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಆಪರೇಷನ್ ಕಮಲ ಮತ್ತು ಬಿಜೆಪಿ

ಆಪರೇಷನ್ ಕಮಲ ಎಂಬುದು ಬಿಜೆಪಿ ವಿರೋಧ ಪಕ್ಷದ ಶಾಸಕರ ಪಕ್ಷದ ಶಾಸಕರನ್ನು ತನ್ನತ್ತ ಬರುವಂತೆ ಮಾಡಿ ಇರುವ ಸರ್ಕಾರವನ್ನು ಬೀಳಿಸುತ್ತದೆ. ಬಳಿಕ ತನ್ನದೇ ಸರ್ಕಾರ ರಚಿಸುತ್ತದೆ. ವಿರೋಧ ಪಕ್ಷದ ಶಾಸಕರನ್ನು ಪಕ್ಷಾಂತರ ಮಾಡುವಂತೆ ಮಾಡಿಸುವ ಪ್ರಯತ್ನಗಳು, ಆಮಿಷಗಳ ಕೆಲಸವನ್ನೇ ಆಪರೇಷನ್ ಕಮಲ ಎನ್ನಲಾಗುತ್ತದೆ.

BJP offering 50 crore each to Congress MLA says Chief Minister Siddaramaiah

ಮತ್ತೆ ರಾಜ್ಯದಲ್ಲಿ ಈ ಅಪರೇಷನ್ ಕಮಲದ ಸುದ್ದಿ ಹರಿದಾಡುತ್ತಿದೆ. ಈ ಬ್ಗೆಗ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, "ಕರ್ನಾಟಕದಲ್ಲಿ ಬಿಜೆಪಿ ಈ ಹಿಂದೆಯೂ ಆಪರೇಷನ್ ಕಮಲ ನಡೆಸಿತ್ತು. ಅವರು (ಬಿಜೆಪಿ) ವಿರೋಧ ಪಕ್ಷದ ಶಾಸಕರ ರಾಜೀನಾಮೆಯನ್ನು ಖಾತ್ರಿಪಡಿಸಿಕೊಂಡರು. ತಮ್ಮ ಉಪಚುನಾವಣೆಗಳಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಮಾಡಿದರು, ರಾಜೀನಾಮೆ ನೀಡಿದವರಿಗೆ ಕೋಟಿ ರೂಪಾಯಿ ಹಣವನ್ನು ನೀಡಿದರು. ಇಂದಿಗೂ ಅವರು ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಹಲವಾರು ಉದಾಹರಣೆಗಳಿವೆ, ನಾನು ಈಗ ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ನಮ್ಮ ಶಾಸಕರಿಗೆ 50 ಕೋಟಿ ರೂಪಾಯಿ ನೀಡುವುದಾಗಿ ಹೇಳಿ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ" ಎಂದು ಗಂಭಿರ ಆರೋಪ ಮಾಡಿದ್ದಾರೆ.

"ರಾಜೀನಾಮೆ ಬಳಿಕ ಉಪಚುನಾವಣೆಯಲ್ಲಿ ಸಹಾಯ ಮಾಡುವುದಾಗಿ ಬಿಜೆಪಿ ಭರವಸೆ ನೀಡುತ್ತಿದೆ. 50 ಕೋಟಿ ರೂಪಾಯಿ ತೆಗೆದುಕೊಂಡು ರಾಜೀನಾಮೆ ನೀಡಿ, ಜೊತೆಗೆ ನಿಮ್ಮ ಚುನಾವಣೆಯ ವೆಚ್ಚಕ್ಕೂ ಹಣ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಅವರು ಯಾವ ಹಣದ ಭರವಸೆ ನೀಡುತ್ತಿದ್ದಾರೆ..? ಇದು ಕಪ್ಪು ಹಣವಲ್ಲವೇ..? ಇದು ಭ್ರಷ್ಟಾಚಾರದ ಹಣವಲ್ಲವೇ..?. ಬಿಜೆಪಿ ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೇಕೆದಾಟು ಯೋಜನೆಯ ಜಾರಿಗೆ ಸ್ಟಾಲಿನ್‌ ಅನುಮತಿಗಾಗಿ ಕಾದು ಕುಳಿತಿಲ್ಲ!

ಇನ್ನು, ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್‌ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ ಎಂದು ಟ್ರೋಲ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. "ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವೇ, ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು" ಎಂದಿದ್ದಾರೆ.

"ನಿಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಾರೆ, ಮೇಕೆದಾಟು ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಕೂರುತ್ತಾರೆ. ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್‌ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು. ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ ಆರಂಭ ಮಾಡಲು ನಾವು ತಯಾರಿದ್ದೇವೆ.. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂಬ ಸುಳ್ಳು ಸುದ್ದಿಯ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ" ಎಂದು ಟೀಕಿಸಿದ್ದಾರೆ.

"ಕರ್ನಾಟಕ ಬಿಜೆಪಿ, ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ,
ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ" ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+