ವೆಂಕಟರಾವ್ ರಸ್ತೆ ಮರು ನಾಮಕರಣಕ್ಕೆ ಬಿಜೆಪಿ ವಿರೋಧ
ಬೆಂಗಳೂರು, ಜೂ. 01 : ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡಬಾರದು ಎಂದು ಬಿಜೆಪಿ ಬಿಬಿಎಂಪಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಟಿಪ್ಪು ಸುಲ್ತಾನ್ ಹೆಸರಿಡಲು ಎಂ.ಚಿದಾನಂದಮೂರ್ತಿ ಅವರು ವಿರೋಧ ವ್ಯಕ್ತಪಡಿಸಿದ್ದರು.
ಮಾಜಿ ಸಚಿವ ಮತ್ತು ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಸೋಮವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಟಿ.ಎಂ.ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿ ಮರು ನಾಮಕರಣದ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಸಿದರು. [ವೆಂಕಟರಾವ್ ರಸ್ತೆಗೆ ಟಿಪ್ಪು ಹೆಸರೇಕೆ?]

ಆಲೂರು ವೆಂಕಟರಾಯರು ಕನ್ನಡ ನಾಡಿನ ಕುಲಪುರೋಹಿತರು. ರಾಜ್ಯದ ಏಕೀಕರಣದಲ್ಲಿ ಅವರ ಪಾತ್ರ ಅನನ್ಯವಾದದ್ದು. ಅಂತಹ ಹಿರಿಯ ಚೇತನದ ನೆನಪಿಗೆ ಅನ್ಯಾಯ ಮಾಡುವ ಕಾರ್ಯವನ್ನು ಪಾಲಿಕೆ ಮಾಡಬಾರದು. ಇಂತಹ ಕಾರ್ಯಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ನಾಯಕರು ಆಗ್ರಹ ಪಡಿಸಿದರು.
ರಸ್ತೆಯೊಂದಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ನಮ್ಮ ವಿರೋಧವಿಲ್ಲ. ಆದರೆ, ಈಗಾಗಲೇ ಆಲೂರು ವೆಂಕಟರಾವ್ ರಸ್ತೆ ಎಂದು ನಾಮಕರಣವಾಗಿರುವ ರಸ್ತೆಗೆ ಮರು ನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಬಿಜೆಪಿ ನಾಯಕರು ಮನವಿಯಲ್ಲಿ ತಿಳಿಸಿದ್ದಾರೆ.
ಚಿದಾನಂದಮೂರ್ತಿ ವಿರೋಧ ವ್ಯಕ್ತಪಡಿಸಿದ್ದರು : ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಸ್ತಾವನೆಗೆ ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿ ವಿರೋಧ ವ್ಯಕ್ತಪಡಿಸಿದ್ದರು.
ಟಿಪ್ಪು ಹೆಸರಿಡುವ ಮೂಲಕ ಪಾಲಿಕೆ ಕನ್ನಡಿಗರಿಗೆ ಅವಮಾನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದರು. 'ಟಿಪ್ಪು ಸುಲ್ತಾನ್ ಒಬ್ಬ ದೇಶದ್ರೋಹಿ. ಆತನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆಯುವುದು ನಾಚಿಕೆಗೇಡಿನ ವಿಚಾರ. ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಹೆಸರಿಟ್ಟರೆ, ಘೋರ ಅಪಚಾರವಾಗುತ್ತದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications