ವೆಂಕಟರಾವ್ ರಸ್ತೆ ಮರು ನಾಮಕರಣಕ್ಕೆ ಬಿಜೆಪಿ ವಿರೋಧ
ಬೆಂಗಳೂರು, ಜೂ. 01 : ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡಬಾರದು ಎಂದು ಬಿಜೆಪಿ ಬಿಬಿಎಂಪಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಟಿಪ್ಪು ಸುಲ್ತಾನ್ ಹೆಸರಿಡಲು ಎಂ.ಚಿದಾನಂದಮೂರ್ತಿ ಅವರು ವಿರೋಧ ವ್ಯಕ್ತಪಡಿಸಿದ್ದರು.
ಮಾಜಿ ಸಚಿವ ಮತ್ತು ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಸೋಮವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಟಿ.ಎಂ.ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿ ಮರು ನಾಮಕರಣದ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಸಿದರು. [ವೆಂಕಟರಾವ್ ರಸ್ತೆಗೆ ಟಿಪ್ಪು ಹೆಸರೇಕೆ?]

ಆಲೂರು ವೆಂಕಟರಾಯರು ಕನ್ನಡ ನಾಡಿನ ಕುಲಪುರೋಹಿತರು. ರಾಜ್ಯದ ಏಕೀಕರಣದಲ್ಲಿ ಅವರ ಪಾತ್ರ ಅನನ್ಯವಾದದ್ದು. ಅಂತಹ ಹಿರಿಯ ಚೇತನದ ನೆನಪಿಗೆ ಅನ್ಯಾಯ ಮಾಡುವ ಕಾರ್ಯವನ್ನು ಪಾಲಿಕೆ ಮಾಡಬಾರದು. ಇಂತಹ ಕಾರ್ಯಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ನಾಯಕರು ಆಗ್ರಹ ಪಡಿಸಿದರು.
ರಸ್ತೆಯೊಂದಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ನಮ್ಮ ವಿರೋಧವಿಲ್ಲ. ಆದರೆ, ಈಗಾಗಲೇ ಆಲೂರು ವೆಂಕಟರಾವ್ ರಸ್ತೆ ಎಂದು ನಾಮಕರಣವಾಗಿರುವ ರಸ್ತೆಗೆ ಮರು ನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಬಿಜೆಪಿ ನಾಯಕರು ಮನವಿಯಲ್ಲಿ ತಿಳಿಸಿದ್ದಾರೆ.
ಚಿದಾನಂದಮೂರ್ತಿ ವಿರೋಧ ವ್ಯಕ್ತಪಡಿಸಿದ್ದರು : ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಸ್ತಾವನೆಗೆ ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿ ವಿರೋಧ ವ್ಯಕ್ತಪಡಿಸಿದ್ದರು.
ಟಿಪ್ಪು ಹೆಸರಿಡುವ ಮೂಲಕ ಪಾಲಿಕೆ ಕನ್ನಡಿಗರಿಗೆ ಅವಮಾನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದರು. 'ಟಿಪ್ಪು ಸುಲ್ತಾನ್ ಒಬ್ಬ ದೇಶದ್ರೋಹಿ. ಆತನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆಯುವುದು ನಾಚಿಕೆಗೇಡಿನ ವಿಚಾರ. ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಹೆಸರಿಟ್ಟರೆ, ಘೋರ ಅಪಚಾರವಾಗುತ್ತದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications