ಬಿಎಂಟಿಎಫ್ ಮುಚ್ಚವ ನಿರ್ಧಾರಕ್ಕೆ ಬಿಜೆಪಿ ವಿರೋಧ
ಬೆಂಗಳೂರು, ಅಕ್ಟೋಬರ್ 28 : ಬಿಎಂಟಿಎಫ್ ಅನ್ನು ಮುಚ್ಚುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸರ್ಕಾರ ಬಿಎಂಟಿಎಫ್ ಮುಚ್ಚಿ, ಸಿಎಸ್ಎಫ್ ರಚಿಸುವ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ.
ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ರಾಜ್ಯ ಸರ್ಕಾರ ಈಗ ಬಿಎಂಟಿಎಫ್ ರದ್ದುಗೊಳಿಸುವ ಪ್ರಸ್ತಾವನೆ ಸಿದ್ಧಪಡಿಸಿದೆ. ಇದನ್ನು ಬಿಜೆಪಿ ವಿರೋಧಿಸಿದ್ದು, ಕಾನೂನು ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಬಿಎಂಟಿಎಫ್ ಹಲವು ರಾಜಕಾರಣಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿತ್ತು. ರಾಜಕಾರಣಿಗಳು, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿದೆ' ಎಂದು ಆರೋಪಿಸಿದ್ದಾರೆ.

'ಸರ್ಕಾರ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಅನ್ನು ಮುಚ್ಚುವ ನಿರ್ಧಾರವನ್ನು ಹೊರಡಿಸಲಿ, ಮರುದಿನವೇ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡುತ್ತೇನೆ' ಎಂದು ಎನ್.ಆರ್.ರಮೇಶ್ ಹೇಳಿದ್ದಾರೆ.
22 ವರ್ಷಗಳಿಂದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಅಸ್ತಿತ್ವದಲ್ಲಿದೆ. ಸರ್ಕಾರಿ ಭೂಮಿಗಳನ್ನು ಸಂರಕ್ಷಿಸುವ ಹಾಗೂ ಅಧಿಕಾರಿಗಳ ಮೇಲಿನ ಆರೋಪಗಳ ತನಿಖೆಯನ್ನು ಬಿಎಂಟಿಎಫ್ ನಡೆಸುತ್ತಿದೆ.
ಬಿಬಿಎಂಪಿ ಮಾತ್ರವಲ್ಲದೇ ಬಿಡಿಎ, ಜಲಮಂಡಳಿ ಹಾಗೂ ಕರ್ನಾಟಕ ಕೊಳಗೇರಿ ಮಂಡಳಿಯ ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗ ಸರ್ಕಾರ ಬಿಎಂಟಿಎಫ್ ಅನ್ನು ಮುಚ್ಚಿ, ಸಿಎಸ್ಎಫ್ ರಚನೆ ಮಾಡುವ ಪ್ರಸ್ತಾಪ ಸಿದ್ಧಪಡಿಸಿದೆ.
ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ ಪಾಲಿಕೆ ಭದ್ರತಾ ಪಡೆ (ಸಿಎಸ್ಎಫ್) ರಚನೆ ಮಾಡುವ ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. ಆದರೆ, ತೀವ್ರ ವಿರೋಧದ ಕಾರಣದಿಂದಾಗಿ ಅದನ್ನು ವಾಪಸ್ ಪಡೆಯಲಾಗಿತ್ತು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications