Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯ: ದೇವಸ್ಥಾನ ಸಮಿತಿಗೆ 'ಮುಸ್ಲಿಂ' ಸದಸ್ಯನ ನೇಮಕಕ್ಕೆ ವಿರೋಧ

ಹೊಸಕೋಟೆ, ಮೇ 08: ಕರ್ನಾಟಕದಲ್ಲಿ ಚುನಾವಣೆ ಮುಗಿದಿದ್ದು, ರಾಜಕೀಯ ಪಕ್ಷಗಳ ಪರಸ್ಪರ ದೂರುವಿಕೆ ಮುಂದುವರೆದಿದೆ. ಇದೀಗ ಹಿಂದೂ ದೇವಾಲಯಕ್ಕೆ ಹಿಂದೂಯೇತರ ಅಂದರೆ ಮುಸ್ಲಿಂ ಸಮುದಾಯ ವ್ಯಕ್ತಿಯನ್ನು ಸದಸ್ಯ ಸ್ಥಾನಕ್ಕೆ ನೇಮಕ ಮಾಡಿದ್ದನ್ನು ಬಿಜೆಪಿ ಕಟುವಾಗಿ ವಿರೋಧಿಸಿದೆ.

ಹೋಸ ಕೋಟೆ ಟೌನ್ ಕೋಟೆಯಲ್ಲಿರುವ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Avimukteshwara Temple) ಬ್ರಹ್ಮೋತ್ಸವ ಕಾರ್ಯಕ್ರಮದ ಮೇಲ್ವಿಚಾರಣೆಗೆ ಕಾಂಗ್ರೆಸ್ 'ನವಾಜ್' ಎಂಬ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯರನ್ನಾಗಿದೆ ನೇಮಿಸಿದೆ ಎಂದು ಕರ್ನಾಟಕ ಬಿಜೆಪಿ ದೂರಿದೆ.

BJP Outrage on Congress Govt For Appointed Non Hindu as Member for Hosakote Hindu Temple

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು ದೇವಸ್ಥಾನ ಸಮಿತಿ ಪದಾಧಿಕಾರಿಗಳ ಅಧಿಕೃತ ಜ್ಞಾಪನಾ ಪತ್ರ ಪೋಸ್ಟ್ ಮಾಡಿ ಕಾಂಗ್ರೆಸ್‌ ಬಗ್ಗೆ ಎಚ್ಚರ ಎಂದು ಬರೆದುಕೊಂಡಿದೆ.

ಹತ್ತು ಸದಸ್ಯರಲ್ಲಿ ಒಬ್ಬ ಹಿಂದೂಯೇತರ

ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಈ ಕಾರಣಕ್ಕೆ ಅಭಿವೃದ್ಧಿ ಕಾರ್ಯ ನಿರ್ವಹಿಸುವ ಸಂಬಂಧ ಸಮಿತಿ ಆಯುಕ್ತರು, ಕಾರ್ಯದರ್ಶಿ ಹಾಗೂ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಬೇಕೆಂದು ಹೊಸಕೋಟೆ ಶಾಕಸರು ಕೋರಿರುತ್ತಾರೆ. ಅವರ ಮನವಿ ಮೇರೆಗೆ ಒಬ್ಬರು ಆಯುಕ್ತರು, ಒಬ್ಬರು ಕಾರ್ಯದರ್ಶಿ ಒಳಗೊಂಡು ಹತ್ತು ಮಂದಿ ಸದಸ್ಯರನ್ನು ನೇಮಕ ಮಾಡಿ ತಹಶೀಲ್ದಾರ್ ಮತ್ತು ತಾಲೂಕು ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಬಿಜೆಪಿಯು ತನ್ನ ಪೋಸ್ಟ್‌ನಲ್ಲಿ, ಹಿಂದೂಗಳ ದೇವಸ್ಥಾನಗಳನ್ನು ಲೂಟಿ ಮಾಡಲು ಯತ್ನಿಸಿದ ನಂತರ ಹಿಂದೂ ದ್ವೇಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ಹಿಂದೂಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

BJP Outrage on Congress Govt For Appointed Non Hindu as Member for Hosakote Hindu Temple

ಕಾಂಗ್ರೆಸ್ ಹಿಂದೂಗಳ ಹಕ್ಕು ಕಸಿಯುತ್ತಿದೆ: ಆರೋಪ

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುವ ರಾಹುಲ್ ಗಾಂಧಿಯವರ ಭ್ರಮೆಯ ಕಲ್ಪನೆಗಳನ್ನು ಕಾರ್ಯಗತಗೊಳಿಸಲು ಆತುರ ಸಿದ್ದರಾಮಯ್ಯ ಸರ್ಕಾರ ಆತುರ ತೋರುತ್ತಿದೆ.

ಇಂದು ಕರ್ನಾಟಕ ಹೊಸಕೋಟೆಯ ಒಂದು ದೇವಸ್ಥಾನಕ್ಕೆ ಹೀಗಾದರೆ ಮುಂದಿನ ಅದು ಭಾರತದ ಪ್ರತಿಯೊಂದು ದೇವಾಲಯವನ್ನು ನಿಯಂತ್ರಿಸಬಹುದು. ಜನರು ಕಾಂಗ್ರೆಸ್ ಬಗ್ಗೆ ಎಚ್ಚರ ವಹಿಸಬೇಕು ಎಂದು ಬಿಜೆಪಿ ಹೇಳಿದೆ.

ಈ ಮೂಲಕ ಹಿಂದೂ ದೇವಾಲಯಕ್ಕೆ ಹಿಂದೂಯೇತರ ವ್ಯಕ್ತಿಯ ನೇಮಕವನ್ನು ಸಹಿಸುವುದಿಲ್ಲ ಸಮಯ ರಚನೆಯಲ್ಲಿನ ಸರ್ಕಾರದ ನಡೆಯನ್ನು ಬಿಜೆಪಿ ಖಂಡಿಸಿದೆ.

ದೇವಸ್ಥಾನ ಕುರಿತು ಬಿಜೆಪಿ ಆರೋಪಿಸುತ್ತಿದ್ದಂತೆ ಸ್ವತಃ ಸಿದ್ದರಾಮಯ್ಯನವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಕೈಗೆ ಬಡಿಗೆ ಕೊಟ್ಟಿ ಬಡಿಸಿಕೊಳ್ಳಬೇಡಿ. ನೀವು ಹೇಳಿದ್ದು ಸುಳ್ಳು. ಸುಳ್ಳಿನ ಪ್ಯಾಕ್ಟರಿಯ ಬಿಜೆಪಿ ಸುಳ್ಳು ಸದಸ್ಯ ಪತ್ರ ಪೋಸ್ಟ್ ಮಾಡಿದೆ ಎಂದು ಅವರು ತಿರುಗೇಟು ಕೊಟ್ಟರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+