'ಪ್ರಿಯಾಂಕ್ ಖರ್ಗೆ ಸುಪಾರಿ ಸ್ಪಾನ್ಸರ್': ಬಿಜೆಪಿ ಪೋಸ್ಟರ್ ಅಭಿಯಾನ
ಬೆಂಗಳೂರು, ಡಿಸೆಂಬರ್ 31: ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಬಿಜೆಪಿಯು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮತ್ತಷ್ಟು ತೀವ್ರಗೊಳಿಸಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ಮಧ್ಯೆ ನೂಕಾಟ ಉಂಟಾಯಿತು.
ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಹಾಗೂ ರವಿಕುಮಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರ ಸಚಿವ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೊಣೆಗಾರರು ಎಂದು ಘೋಷಣೆ ಕೂಗಿದರು. ಕೈಲಿದ್ದ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದರು.

ಇದೊಂದು ಭ್ರಷ್ಟ ಸರ್ಕಾರ. ಏನೇ ಮಾಡಿದರೂ ತಮ್ಮನ್ನು ಯಾರು ಕೇಳುವುದಿಲ್ಲ ಎಂದುಕೊಂಡಿದ್ದಾರೆ. ಗುತ್ತಿಗೆದಾರರನ ಡೆತ್ನೋಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರು ಇದೆ. ಇದಕ್ಕೆ ಸಚಿವರೇ ಜವಾಬ್ದಾರರು ಎಂದು ಬಿಜೆಪಿ ನಾಯಕರು ಸಚಿವ 'ಪ್ರಿಯಾಂಕ್ ಖರ್ಗೆ ಸೂಪಾರಿ ಸ್ಪಾನ್ಸರ್' ಎಂಬ ಪೋಸ್ಟರ್ ಅನ್ನು ವಿವಿಧೆಡೆ ಗೋಡೆಗಳಿಗೆ ಅಂಟಿಸಿದರು. ಸಚಿವರು ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.
ಪೋಸ್ಟರ್ನಲ್ಲಿ ವಿವಿಧ ಸಚಿವರ ಪೋಟೋ
ಸೂಸೈಡ್ ಹಾಗೂ ಸಪಾರಿ ಭಾಗ್ಯ ನೀಡಿದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್ಗಳನ್ನು ಅಂಟಿಸಿ, ಕೈ ಹಿಡಿದು ಬಿಜೆಪಿ ಕಾಯರ್ತರು ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಹಿಂದೆ ನಡೆದಿದ್ದ ಕೆಲವು ಘಟನೆಗಳನ್ನು ವಿವರಿಸಿದ ಸಚಿವರಾದ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ನಾಗೇಂದ್ರ ಮತ್ತು ಶಾಸಕ ಚೆನ್ನಾರೆಡ್ಡಿ ಅವರ ಫೋಟೋ ಪೋಸ್ಟರ್ ಮಾಡಿಸಿದ್ದಾರೆ.

ಖರ್ಗೆ ರಾಜೀನಾಮೆ ಏಕಿಲ್ಲ?
ಇದಷ್ಟೇ ಅಲ್ಲದೇ ವಿವಿಧ ಪ್ರಕರಣಗಳಲ್ಲಿ ಮಾಜಿ ಸಚಿವ ಈಶ್ವರಪ್ಪ, ಕೆ.ಜೆ.ಜಾರ್ಜ್, ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿರಬೇಕಾದರೆ, ಮಲ್ಲಿಕಾರ್ಜುನ್ ಖರ್ಗೆ ರಾಜೀನಾಮೆ ಏಕಿಲ್ಲ? ಎಂದು ಪ್ರಶ್ನೆ ಮಾಡಲಾಗಿದೆ.
ರಾಜೀನಾಮೆ ಕೊಡೋವರೆಗೂ ಬಿಜೆಪಿ ಹೋರಾಟ
ಈ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಇದೊಂದು ಭ್ರಷ್ಟಾಚಾರ ಸರ್ಕಾರ. ಅಧಿಕಾರಿಗಳಿಗೆ ಸಾವಿನ ಭಾಗ್ಯ ನೀಡಿದೆ. ಕೊಲೆಗೆಡುಕ ಸರ್ಕಾರದಲ್ಲಿ ನಾಯಕರು ಏನೆ ಮಾಡಿದರು ಕೇಳೋರಿಲ್ಲ ಎಂದಿಕೊಂಡಂತಿದೆ. ಗುತ್ತಿಗೆದಾರನ ಸಾವಿನ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರ ಇದಿಯೋ ಇಲ್ಲವೋ ಎಂದು ಮೊದಲು ಗೊತ್ತಾಗಬೇಕು. ಅದಕ್ಕಾಗಿ ತನಿಖೆ ನಡೆಯಬೇಕು. ಆದ್ದರಿಂದ ಸಚಿವರು ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಗುಡುಗಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications