ಕರ್ನಾಟಕದಲ್ಲಿ ಅಮಿತ್ ಶಾ ಮ್ಯಾಜಿಕ್ ನಡೆಯಲ್ಲ: ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 31: ಕರ್ನಾಟಕದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮ್ಯಾಜಿಕ್ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಯಲಹಂಕದ ಅಲ್ಲಾಳಸಂದ್ರದಲ್ಲಿರುವ ರಾಯಲ್ ಆರ್ಕಿಡ್ ನಲ್ಲಿ ಅಮಿತ್ ಶಾ ಇಂದು ಬಿಜೆಪಿ ನಾಯಕರ ಜತೆ ವಿಶೇಷ ಸಭೆ ನಡೆಸಲಿದ್ದಾರೆ. 2018ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಸಭೆ ನಡೆಯುತ್ತಿದೆ.

ವಿಧಾನಸಭೆ ಚುನಣಾವಣೆಯ ಸಿದ್ಧತೆಗಳ ಪ್ರಗತಿ ಪರಿಶೀಲನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅವರು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ.

ಸಭೆಯಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿಗಳಾದ ಪ್ರಕಾಶ್ ಜಾವ್ಡೇಕರ್, ಪಿಯೂಷ್ ಗೋಯಲ್, ಮುರಳೀಧರ್ ರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್, ಕೆ.ಎಸ್ ಈಶ್ವರಪ್ಪ, ಸದಾನಂದ ಗೌಡ, ಅನಂತ್ ಕುಮಾರ್ ಮೊದಲಾದವರು ಭಾಗಿಯಾಗಿದ್ದಾರೆ.












Click it and Unblock the Notifications