ಬೆಂಗಳೂರಲ್ಲಿ ಅಮಿತ್ ಶಾ ರೋಡ್ ಶೋ, ಭಾಷಣ ಮಾಡದೆ ವಾಪಸ್
ಬೆಂಗಳೂರು, ಏಪ್ರಿಲ್ 02 : ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರೋಡ್ ಶೋ ಆರಂಭವಾಗಿದೆ. ಸಾವಿರಾರು ಕಾರ್ಯಕರ್ತರು ಮೋದಿ ಮೋದಿ ಎಂಬ ಘೋಷಣೆ ಕೂಗುತ್ತಾ ರೋಡ್ ಶೋನದಲ್ಲಿ ಪಾಲ್ಗೊಂಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಂಗಳವಾರ ರಾತ್ರಿ 9.10ಕ್ಕೆ ಬೆಂಗಳೂರು ನಗರಕ್ಕೆ ಅಮಿತ್ ಶಾ ಅವರು ಆಗಮಿಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರವಾಗಿ ಪ್ರಚಾರ ಮಾಡಲು ಅಮಿತ್ ಶಾ ಅವರು ಆಗಮಿಸಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಆಸ್ತಿ ವಿವರ
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ, ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶ್ವಥ್ ನಾರಾಯಣ, ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ್, ಶಾಸಕ ವಿ.ಸೋಮಣ್ಣ, ಸತೀಶ್ ರೆಡ್ಡಿ ಸೇರಿದಂತೆ ಹಲವು ನಾಯಕರು ರೋಡ್ ಶೋನದಲ್ಲಿ ಪಾಲ್ಗೊಂಡಿದ್ದಾರೆ.
ವ್ಯಕ್ತಿ ಚಿತ್ರ: ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಅಮಿತ್ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.
ಕರ್ನಾಟಕ ಬಿಜೆಪಿ ಈಗಾಗಲೇ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಪಕ್ಷ ಬೆಂಬಲ ಘೋಷಣೆ ಮಾಡಿದೆ....