ನೂತನ ಸಂಪುಟ ರಚನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಮಹತ್ವದ ಹೇಳಿಕೆ
ಬೆಂಗಳೂರು, ಜುಲೈ 28: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ಸ್ವೀಕರಿಸಿದರು. ಈಗ ರಾಜ್ಯದ ಜನರ ಗಮನ ಏನಿದ್ದರೂ ಸಚಿವ ಸಂಪುಟ ರಚನೆ ಕಡೆಗೆ ಇದೆ ಎನ್ನಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ದೆಹಲಿಗೆ ಹೋಗಲಿದ್ದಾರೆ ಎನ್ನಲಾಗುತ್ತಿದ್ದು, ಹೈಕಮಾಂಡ್ ಜೊತೆ ಚರ್ಚಿಸಿ ಸಚಿವ ಸಂಪುಟದಲ್ಲಿ ಯಾರು ಇರಬೇಕು ಎಂಬುದರ ಬಗ್ಗೆ ಅಂತಿಮ ಪಟ್ಟಿ ತಯಾರಿಸಿಕೊಂಡು ಬರಲಿದ್ದಾರೆ.
ಬಸವರಾಜ ಬೊಮ್ಮಾಯಿ ಪ್ರಮಾಣ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, "ಎಲ್ಲ ವಲಸಿಗರು ಈಗ ನಮ್ಮ ಪಕ್ಷದವರು. ಯಾರಿಗೂ ಅನ್ಯಾಯ ಅಗದಂತೆ ಪಕ್ಷ ನಿರ್ಧಾರ ಮಾಡುತ್ತದೆ,'' ಎಂದು ಹೇಳಿದರು.

"ಯಾರು ಸಚಿವರಾಗಬೇಕು ಎನ್ನುವುದನ್ನು ಸಿಎಂ ಅವರೇ ನಿರ್ಧಾರ ಮಾಡುತ್ತಾರೆ. ಸಾಮಾಜಿಕ ನ್ಯಾಯ, ಭೌಗೋಳಿಕ ಎಲ್ಲವನ್ನು ನೋಡಿ ಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ,'' ಎಂಬ ಮುನ್ಸೂಚನೆ ನೀಡಿದರು.
Recommended Video
ಇನ್ನೊಬ್ಬ ಮಾಜಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, "ಬಸವರಾಜ ಬೊಮ್ಮಾಯಿಗೆ ಅಭಿನಂದನೆಗಳು, ಅವರ ರಾಜಕೀಯ ಅನುಭವ ಹಾಗೂ ಒಳ್ಳೆತನದಿಂದ ರಾಜ್ಯದ ಅಭಿವೃದ್ಧಿಗೆ ಸಹಾಯಕಾರಿಯಾಗಲಿದೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಗೊಂದಲವಿಲ್ಲದೇ ಹೊಸ ನಾಯಕತ್ವ ಆಯ್ಕೆಯಾಗಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಎಲ್ಲಾ ಕ್ಷೇತ್ರದಲ್ಲೂ ಅನುಭವವಿದೆ. ಸಚಿವ ಸಂಪುಟ ಪಟ್ಟಿ ಸಿಎಂ ಪರಮೋಚ್ಚ ಅಧಿಕಾರವಾಗಿದ್ದು, ಅವರೇ ನೋಡಿಕೊಳ್ಳಲಿದ್ದಾರೆ,'' ಎಂದು ಪ್ರತಿಕ್ರಿಯೆ ನೀಡಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications