ಕಾಂಗ್ರೆಸ್ 'ಸತ್ಯಮೇವ ಜಯತೆ' ಬಲೂನಿಗೆ 'ಡೊನೇಶನ್ ಗೇಟ್' ಪಿನ್ ಚುಚ್ಚಿದ ಬಿಜೆಪಿ
ಗುರುವಾರ ಮುಂಜಾನೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಕಾಂಗ್ರೆಸ್ 'ಸತ್ಯಮೇವ ಜಯತೆ'ಗೆ ಕೇವಲ 12 ಗಂಟೆಗಳೊಳಗೆ ತಿರುಗೇಟು ನೀಡುವಲ್ಲಿ ಬಿಜೆಪಿ ಸಫಲವಾಗಿದೆ.
ಬೆಂಗಳೂರು, ಫೆಬ್ರವರಿ 24: ಗುರುವಾರ ಮುಂಜಾನೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಕಾಂಗ್ರೆಸ್ 'ಸತ್ಯಮೇವ ಜಯತೆ'ಗೆ ಕೇವಲ 12 ಗಂಟೆಗಳೊಳಗೆ ತಿರುಗೇಟು ನೀಡುವಲ್ಲಿ ಬಿಜೆಪಿ ಸಫಲವಾಗಿದೆ. ಸಂಜೆ ವೇಳೆ 'ಡೊನೇಶನ್ ಗೇಟ್' ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಬಾಯಿ ಮುಚ್ಚಿ ಕುಳಿತುಕೊಳ್ಳಬೇಕಾದ ಸ್ಥಿತಿ ತಲುಪಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾವನದಲ್ಲಿ ಕಾಂಗ್ರೆಸ್ ಗುರುವಾರ ಸತ್ಯಮೇವ ಜಯತೆ ಹೆಸರಿನಲ್ಲಿ ರ್ಯಾಲಿ ಹಮ್ಮಿಕೊಂಡಿತ್ತು. ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಸೇರಿದಂತೆ ಹಲವು ನಾಯಕರು ಭಾಗವಹಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.[ಡೊನೇಷನ್ ಗೇಟ್ ಹಗರಣ : ಯಾರು ಏನು ಹೇಳುತ್ತಿದ್ದಾರೆ?]

ಕಾಂಗ್ರೆಸ್ ಮುಕ್ತ ಕರ್ನಾಟಕ ಕನಸು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ದ ಕೈ ನಾಯಕರು ಅಬ್ಬರಿಸಿದ್ದರು. ರ್ಯಾಲಿ ಉದ್ಘಾಟಿಸಿ ಮಾತನಾಡಿದ್ದ ಪರಮೇಶ್ವರ್, ಕಾಂಗ್ರೆಸ್ ಮುಕ್ತ ಕರ್ನಾಟಕ ನಿಮ್ಮ ಜನ್ಮದಲ್ಲೂ ಸಾಧ್ಯವಿಲ್ಲ. ಜೈಲಿಗೆ ಹೋಗಿ ಬಂದ ನೀವು (ಯಡಿಯೂರಪ್ಪ) ರಾಜ್ಯಾದ್ಯಂತ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದೀರಿ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ. ಜೈಲಿಗೆ ಹೋಗಿ ಬಂದ ನೀವು ಜನರಿಗೆ ಹೇಗೆ ಮುಖ ತೋರಿಸುತ್ತೀರಿ. ನಿಮಗೆ ನೈತಿಕತೆ ಎಲ್ಲಿದೆ," ಎಂದು ಯಡಿಯೂರಪ್ಪ ವಿರುದ್ದ ಅಬ್ಬರಿಸಿ ಬೊಬ್ಬಿರಿದಿದ್ದರು.
ಸಂಜೆ ವೇಳೆಗ ಪಟಾಕಿ ಠುಸ್
ಆದರೆ ಸಂಜೆ ವೇಳೆಗೆ ರಾಷ್ಟ್ರೀಯ ಮಾಧ್ಯಮದಲ್ಲಿ 'ಡೊನೇಶನ್ ಗೇಟ್' ಹಗರಣ ಬಹಿರಂಗವಾಗಿದೆ. ಇದಕ್ಕೆ ವಿಡಂಬನಾತ್ಮಕವಾಗಿ ಉತ್ತರ ನೀಡಿದ ಬಿಜೆಪಿ 'ಸತ್ಯಮೇವ ಜಯತೆ' ಅಂತ ಒಂದೇ ಸಾಲಿನ ಟ್ವೀಟ್ ಮಾಡಿ ಕಾಂಗ್ರೆಸ್ ಗೆ ಚುಚ್ಚಿದೆ.[ಗೋವಿಂದರಾಜ್ ಡೈರಿ ಸ್ಪೋಟ: ಕೋಟಿ ಕೋಟಿ ಹಣದ ಸಂಪೂರ್ಣ ವಿವರ]
ಸತ್ಯಮೇವ ಜಯತೆ
— BJP Karnataka (@BJP4Karnataka) February 23, 2017
BJP puns on Congress' Satyameva Jayate after diary expose
ರಾಷ್ಟ್ರೀಯ ಮಾಧ್ಯಮ ಬಿಡುಗಡೆ ಮಾಡಿದ ಡೈರಿಯ ದಾಖಲೆಗಳಲ್ಲಿ ಹಲವರ ಇನಿಶಿಯಲ್ ಗಳಿದ್ದು ಇದು ಕಾಂಗ್ರೆಸಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಮೇಲೆ ದಾಳಿ ಮಾಡುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಈಗ ಸ್ಪಷ್ಟನೆ ನೀಡುವುದರಲ್ಲೇ ಸಾಕು ಸಾಕಾಗಿ ಹೋಗಿದೆ.
ವಿಶೇಷ ಎಂದರೆ 2013ರಲ್ಲಿ ಇದೇ ರೀತಿ ಬಿಜೆಪಿನ ಹಗರಣಗಳಿಂದ ನಲುಗಿ ಹೋಗಿತ್ತು. ಇದೀಗ 2018ರ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಗರಣಗಳ ಆರೋಪ ಎದುರಿಸುತ್ತಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications