ಕಾಂಗ್ರೆಸ್ 'ಸತ್ಯಮೇವ ಜಯತೆ' ಬಲೂನಿಗೆ 'ಡೊನೇಶನ್ ಗೇಟ್' ಪಿನ್ ಚುಚ್ಚಿದ ಬಿಜೆಪಿ
ಗುರುವಾರ ಮುಂಜಾನೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಕಾಂಗ್ರೆಸ್ 'ಸತ್ಯಮೇವ ಜಯತೆ'ಗೆ ಕೇವಲ 12 ಗಂಟೆಗಳೊಳಗೆ ತಿರುಗೇಟು ನೀಡುವಲ್ಲಿ ಬಿಜೆಪಿ ಸಫಲವಾಗಿದೆ.
ಬೆಂಗಳೂರು, ಫೆಬ್ರವರಿ 24: ಗುರುವಾರ ಮುಂಜಾನೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಕಾಂಗ್ರೆಸ್ 'ಸತ್ಯಮೇವ ಜಯತೆ'ಗೆ ಕೇವಲ 12 ಗಂಟೆಗಳೊಳಗೆ ತಿರುಗೇಟು ನೀಡುವಲ್ಲಿ ಬಿಜೆಪಿ ಸಫಲವಾಗಿದೆ. ಸಂಜೆ ವೇಳೆ 'ಡೊನೇಶನ್ ಗೇಟ್' ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಬಾಯಿ ಮುಚ್ಚಿ ಕುಳಿತುಕೊಳ್ಳಬೇಕಾದ ಸ್ಥಿತಿ ತಲುಪಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾವನದಲ್ಲಿ ಕಾಂಗ್ರೆಸ್ ಗುರುವಾರ ಸತ್ಯಮೇವ ಜಯತೆ ಹೆಸರಿನಲ್ಲಿ ರ್ಯಾಲಿ ಹಮ್ಮಿಕೊಂಡಿತ್ತು. ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಸೇರಿದಂತೆ ಹಲವು ನಾಯಕರು ಭಾಗವಹಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.[ಡೊನೇಷನ್ ಗೇಟ್ ಹಗರಣ : ಯಾರು ಏನು ಹೇಳುತ್ತಿದ್ದಾರೆ?]

ಕಾಂಗ್ರೆಸ್ ಮುಕ್ತ ಕರ್ನಾಟಕ ಕನಸು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ದ ಕೈ ನಾಯಕರು ಅಬ್ಬರಿಸಿದ್ದರು. ರ್ಯಾಲಿ ಉದ್ಘಾಟಿಸಿ ಮಾತನಾಡಿದ್ದ ಪರಮೇಶ್ವರ್, ಕಾಂಗ್ರೆಸ್ ಮುಕ್ತ ಕರ್ನಾಟಕ ನಿಮ್ಮ ಜನ್ಮದಲ್ಲೂ ಸಾಧ್ಯವಿಲ್ಲ. ಜೈಲಿಗೆ ಹೋಗಿ ಬಂದ ನೀವು (ಯಡಿಯೂರಪ್ಪ) ರಾಜ್ಯಾದ್ಯಂತ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದೀರಿ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ. ಜೈಲಿಗೆ ಹೋಗಿ ಬಂದ ನೀವು ಜನರಿಗೆ ಹೇಗೆ ಮುಖ ತೋರಿಸುತ್ತೀರಿ. ನಿಮಗೆ ನೈತಿಕತೆ ಎಲ್ಲಿದೆ," ಎಂದು ಯಡಿಯೂರಪ್ಪ ವಿರುದ್ದ ಅಬ್ಬರಿಸಿ ಬೊಬ್ಬಿರಿದಿದ್ದರು.
ಸಂಜೆ ವೇಳೆಗ ಪಟಾಕಿ ಠುಸ್
ಆದರೆ ಸಂಜೆ ವೇಳೆಗೆ ರಾಷ್ಟ್ರೀಯ ಮಾಧ್ಯಮದಲ್ಲಿ 'ಡೊನೇಶನ್ ಗೇಟ್' ಹಗರಣ ಬಹಿರಂಗವಾಗಿದೆ. ಇದಕ್ಕೆ ವಿಡಂಬನಾತ್ಮಕವಾಗಿ ಉತ್ತರ ನೀಡಿದ ಬಿಜೆಪಿ 'ಸತ್ಯಮೇವ ಜಯತೆ' ಅಂತ ಒಂದೇ ಸಾಲಿನ ಟ್ವೀಟ್ ಮಾಡಿ ಕಾಂಗ್ರೆಸ್ ಗೆ ಚುಚ್ಚಿದೆ.[ಗೋವಿಂದರಾಜ್ ಡೈರಿ ಸ್ಪೋಟ: ಕೋಟಿ ಕೋಟಿ ಹಣದ ಸಂಪೂರ್ಣ ವಿವರ]
ಸತ್ಯಮೇವ ಜಯತೆ
— BJP Karnataka (@BJP4Karnataka) February 23, 2017
BJP puns on Congress' Satyameva Jayate after diary expose
ರಾಷ್ಟ್ರೀಯ ಮಾಧ್ಯಮ ಬಿಡುಗಡೆ ಮಾಡಿದ ಡೈರಿಯ ದಾಖಲೆಗಳಲ್ಲಿ ಹಲವರ ಇನಿಶಿಯಲ್ ಗಳಿದ್ದು ಇದು ಕಾಂಗ್ರೆಸಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಮೇಲೆ ದಾಳಿ ಮಾಡುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಈಗ ಸ್ಪಷ್ಟನೆ ನೀಡುವುದರಲ್ಲೇ ಸಾಕು ಸಾಕಾಗಿ ಹೋಗಿದೆ.
ವಿಶೇಷ ಎಂದರೆ 2013ರಲ್ಲಿ ಇದೇ ರೀತಿ ಬಿಜೆಪಿನ ಹಗರಣಗಳಿಂದ ನಲುಗಿ ಹೋಗಿತ್ತು. ಇದೀಗ 2018ರ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಗರಣಗಳ ಆರೋಪ ಎದುರಿಸುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications