Budget 2024: ಬೆಲೆ ಇಳಿಕೆ-ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್: ಆರ್.ಅಶೋಕ್
ಬೆಂಗಳೂರು, ಜುಲೈ 23: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಬಳಿಕ ಪ್ರತಿಕ್ರಿಯಿಸಿರುವ ಆರ್.ಅಶೋಕ್ ಅವರು, ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಆಯವ್ಯಯವು ಭಾರತ ಜಗತ್ತಿನಲ್ಲೇ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗಲಿದೆ.

ರೈತರು, ಮಹಿಳೆಯರು, ಯುವಜನರು, ತೆರಿಗೆ ಪಾವತಿಸುವವರ ಬದುಕನ್ನು ವಿಶ್ಲೇಷಿಸಿ ಅವರ ಅನುಕೂಲಕ್ಕೆ ತಕ್ಕಂತಹ ಬಜೆಟ್ ನೀಡಲಾಗಿದೆ ಎಂದು ಅವರು ಆರ್ಥಿಕ ಸಚಿವರಿಗೆ ಧನ್ಯವಾದ ತಿಳಿಸಿದರು.
ಪಿಎಂ ಗತಿಶಕ್ತಿ ಮಾಸ್ಟರ್ ಪ್ಲಾನ್ ಮುಂದುವರಿಕೆ
ಕಾಂಗ್ರೆಸ್ ಸರ್ಕಾರ ಯಾವಾಗಲೂ ಅನುದಾನ ತಾರತಮ್ಯದ ಬಗ್ಗೆ ಹೇಳುತ್ತದೆ. 50 ವರ್ಷಗಳ ಅವಧಿಗೆ ಬಡ್ಡಿ ರಹಿತ ಸಾಲ ನೀಡುವ ಪಿಎಂ ಗತಿಶಕ್ತಿ ಮಾಸ್ಟರ್ ಪ್ಲಾನ್ ಅನ್ನು ಕೇಂದ್ರ ಸರ್ಕಾರ ಇನ್ನೂ 1 ವರ್ಷ ಮುಂದುವರಿಸಲಿದೆ. ಇದಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, ಖಾಲಿ ಖಜಾನೆಯ ರಾಜ್ಯ ಸರ್ಕಾರ ಇಂತಹ ಯೋಜನೆಗಳನ್ನು ಬಳಸಿಕೊಂಡಾದರೂ ಜನಕಲ್ಯಾಣಕ್ಕೆ ಶ್ರಮಿಸಲಿ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಮುಂದುವರಿಸಲು ಹಾಗೂ ಅಕ್ಕಿ ನೀಡಲು ಇನ್ನೂ ತಿಣುಕಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು 5 ವರ್ಷ ವಿಸ್ತರಿಸಿ, 80 ಕೋಟಿ ಜನರಿಗೆ ಆಹಾರ ಭದ್ರತೆ ಕಲ್ಪಿಸಿದೆ. ಕ್ಯಾನ್ಸರ್ನ 3 ಔಷಧಿಗಳ ಮೇಲಿನ ಕಸ್ಟಮ್ ತೆರಿಗೆ ರದ್ದುಪಡಿಸಿ, ರೋಗಿಗಳ ಕುಟುಂಬಕ್ಕೆ ವೆಚ್ಚ ಕಡಿಮೆ ಮಾಡಲಾಗಿದೆ.

ಚಿನ್ನ, ಬೆಳ್ಳಿ ಕಸ್ಟಮ್ಸ್ ತೆರಿಗೆ ಕಡಿತ
ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.6 ರಷ್ಟು ಕಡಿತ, ಮೊಬೈಲ್ ಹಾಗೂ ಚಾರ್ಜರ್ಗಳ ಮೇಲಿನ ತೆರಿಗೆ ಇಳಿಕೆ ಮೊದಲಾದ ಶ್ಲಾಘನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಇದು ಬೆಲೆ ಇಳಿಕೆಯ ಸುರಕ್ಷಿತ ಬಜೆಟ್ ಎಂದು ಅವರು ಬಜೆಟ್ ಪಾಸಿಟಿವ್ ಅಂಶಗಳನ್ನು ವಿವರಿಸಿದರು.
ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್
ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ನಿಂದ ಹೊಸ ಉದ್ಯೋಗಗಳು ಸೃಷ್ಟಿಯಾಗಿ ಜನರಿಗೆ ಸುಭದ್ರ ಬದುಕು ಸಿಗಲಿದೆ. ಈ ದೂರದೃಷ್ಟಿಯ ಯೋಜನೆಯಿಂದ ರಾಜಧಾನಿ ಬೆಂಗಳೂರು ತನ್ನ ಹಿರಿಮೆಯನ್ನು ಉಳಿಸಿಕೊಳ್ಳಲಿದೆ. ಈ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದು ಕೇಂದ್ರ ಸರ್ಕಾರದ ಬಜೆಜ್ ಅನ್ನು ಸಮರ್ಥಿಸಿಕೊಂಡರು.
ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ, 1 ಕೋಟಿ ಕುಟುಂಬಗಳಿಗೆ 300 ಯುನಿಟ್ ವಿದ್ಯುತ್, ಮುದ್ರಾ ಯೋಜನೆಯಡಿ 20 ಲಕ್ಷ ರೂ. ಸಾಲ, 1 ಲಕ್ಷ ವಿದ್ಯಾರ್ಥಿಗಳಿಗೆ ಶೇ.3 ಬಡ್ಡಿ ದರದ ಸಾಲ ಮೊದಲಾದ ಯೋಜನೆಗಳು ಜನಕಲ್ಯಾಣಕ್ಕೆ ಹೊಸ ದಿಕ್ಕು ನೀಡಿದೆ ಎಂದು ತಿಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications