ಪರೇಶ್ ಸಾವು ಎನ್ಐಎ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ರಾಜಭವನ ಚಲೋ
ಬೆಂಗಳೂರು, ಡಿಸೆಂಬರ್ 12: ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರಕ್ಷುಬ್ದ ಪರಿಸ್ಥಿತಿ, ಹಿಂದೂ ಪರ ಸಂಘಟನೆ ಕಾರ್ಯಕರ್ತ ಪರೇಶ್ ಮೆಸ್ತಾನ ಸಾವಿನ ತನಿಖೆಯನ್ನು ಎನ್ಐಎ ತಂಡಕ್ಕೆ ವಹಿಸುವಂತೆ ಆಗ್ರಹಿಸಿ ಕರ್ನಾಟಕ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ಮನವಿ ಸಲ್ಲಿಸಲಿದ್ದಾರೆ.
ಈ ನಿಟ್ಟಿನಲ್ಲಿ ಮಂಗಳವಾರ ಬೆಳಗ್ಗೆ ವಿಧಾನಸೌಧದಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿಧಾನಸೌಧ ಬಳಿಯ ಇರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತದೆ. ನಂತರ ರಾಜಭವನಕ್ಕೆ ತೆರಳಲಾಗುತ್ತದೆ.
ವಿಧಾನಪರಿಷತ್ ನಾಯಕ ಕೆಎಸ್ ಈಶ್ವರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಪಿ.ಸಿ ಮೋಹನ್, ಮಾಜಿ ಡಿಸಿಎಂ ಆರ್ ಅಶೋಕ್, ಅರವಿಂದ ಲಿಂಬಾವಳಿ ಸೇರಿದಂತೆ ಪ್ರಮುಖ ನಾಯಕರು ರಾಜಭವನಕ್ಕೆ ತೆರಳಲಿದ್ದಾರೆ.

ಡಿಸೆಂಬರ್ 6ರಂದು, ಬಾಬ್ರಿ ಮಸೀದಿ ಧ್ವಂಸವಾದ 25ನೇ ವರ್ಷದ ದಿನದಂದು, 21 ವರ್ಷದ ಯುವಕರ ಪರೇಶ್ ಮೇಸ್ತಾ ನಿಗೂಢವಾಗಿ ಕಣ್ಮರೆಯಾಗಿದ್ದ. ಎರಡು ದಿನಗಳ ನಂತರ ಆತನ ಶವ ಕೆರೆಯೊಂದರಲ್ಲಿ ಪತ್ತೆಯಾಗಿತ್ತು. ಆತನ ಮೇಲೆ ಮಚ್ಚಿನಿಂದ ಕೊಚ್ಚಿದ ಗುರುತುಗಳಿದ್ದವು, ಕಾದ ಎಣ್ಣೆಯನ್ನೂ ಆತನ ಮೇಲೆ ಚೆಲ್ಲಲಾಗಿತ್ತು.
ಈ ಹತ್ಯೆಯ ಹಿಂದೆ ಮತೀಯ ಶಕ್ತಿಗಳ ಕೈವಾಡವಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದರೆ, ನಂತರ ಪರೇಶ್ ಅವರು ಆಕಸ್ಮಿಕವಾಗಿ ಕೆರೆಗೆ ಜಾರಿ, ಮೃತಪಟ್ಟಿದ್ದಾರೆ ಎಂದು ವರದಿಗಳು ಬಂದಿವೆ. ಈ ಘಟನೆ ನಡೆದ ನಂತರ ಹೊನ್ನಾವರ ಹೊತ್ತಿ ಉರಿಯುತ್ತಿದೆ. ಮೂರು ದಿನಗಳವರೆಗೂ ನಿಷೇಧಾಜ್ಞೆ(ಸಿ ಆರ್ ಪಿಸಿ ಸೆಕ್ಷನ್ 144) ಜಾರಿಗೊಳಿಸಿ ಜಿಲ್ಲಾಧಿಕಾರಿ ನಕುಲ್ ಆದೇಶಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications