ಲಿಂಗಾಯತ ಮುಖಂಡರು 'ಸಿಎಂ' ಗಾದಿಗೆ,ಎಂಬಿ ಪಾಟೀಲರ ನೆರವು ಕೇಳಿದ ರವಿ
Recommended Video
ಬೆಂಗಳೂರು, ಜೂನ್ 04: 'ಯಡಿಯೂರಪ್ಪ ಸಿಎಂ ಮಾಡಲು ಎಂಬಿ ಪಾಟೀಲ ನೆರವು ಕೋರಿದ ಸಿಟಿ ರವಿ' ಶೀರ್ಷಿಕೆ ನೋಡಿ ಅರೇ ಇದೇನಿದು ಎಂದುಕೊಳ್ಳಬೇಡಿ. ಮೋದಿ ಸಂಪುಟದಲ್ಲಿ ಕರ್ನಾಟಕದ ಸಂಸದರಿಗೆ ಸಿಕ್ಕಿರುವ ಪ್ರಾತಿನಿಧ್ಯ ಕುರಿತು ಗೃಹ ಸಚಿವ ಎಂಬಿ ಪಾಟೀಲ್ ಅವರು ಮಾಡಿದ್ದ ಟ್ವೀಟ್ ಗೆ ಶಾಸಕ ಸಿಟಿ ರವಿ ಕೊಟ್ಟ ತಿರುಗೇಟು ಈ ರೀತಿ ಇತ್ತು.
ಕರ್ನಾಟಕದಿಂದ 25 ಮಂದಿ ಸಂಸದರು ಆಯ್ಕೆಯಾಗಿದ್ದಾರೆ ಈ ಪೈಕಿ ಮೂವರಿಗೆ ಮಾತ್ರ ಮೋದಿ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ.
ಪ್ರಲ್ಹಾದ ಜೋಶಿ ನಾಲ್ಕು ಬಾರಿ, ಸುರೇಶ್ ಅಂಗಡಿ ಕೂಡಾ ನಾಲ್ಕು ಬಾರಿ ಗೆದ್ದಿದ್ದಾರೆ, ಆದರೆ, ಜೋಶಿ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಕ್ಕಿದೆ, ಅಂಗಡಿ ಅವರಿಗೆ ರಾಜ್ಯ ಸಚಿವ ಸ್ಥಾನ ಸಿಕ್ಕಿದೆ ಇದು ಲಿಂಗಾಯತರಿಗೆ ಆಗಿರುವ ಅನ್ಯಾಯ, ಯಾಕೆ ಈ ರೀತಿ ತಾರತಮ್ಯದ ನೀತಿ ಎಂದು ಪ್ರಶ್ನಿಸಿ ಎಂಬಿ ಪಾಟೀಲ್ ಅವರು ಟ್ವೀಟ್ ಮಾಡಿದ್ದರು.
ಇದಕ್ಕೆ ಉತ್ತರ ನೀಡಿರುವ ಸಿಟಿ ರವಿ, ಕರ್ನಾಟಕ ಬಿಜೆಪಿ ಸಂಸದರ ಬಗ್ಗೆ ಯಾಕೆ ಚಿಂತಿಸುತ್ತೀರಿ? ರಾಜ್ಯದಲ್ಲಿ ಲಿಂಗಾಯತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋಣ, ನಿಮಗೆ ನಿಜಕ್ಕೂ ಲಿಂಗಾಯತರ ಬಗ್ಗೆ ಕಾಳಜಿ ಇದ್ದರೆ,
ನಿಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಲಿಂಗಾಯತ ನಾಯಕ ಬಿಎಸ್ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಲು ಬೆಂಬಲಿಸಿ ಎಂದಿದ್ದಾರೆ.
|
ಯಡಿಯೂರಪ್ಪ ಅವರ ಸ್ಥಿತಿಯೂ ಹೀಗೆ ಆಗಬಹುದೇನೋ
ಆದರೆ, ಜೋಶಿ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ್ ಸಿಕ್ಕಿದೆ, ಅಂಗಡಿ ಅವರಿಗೆ ರಾಜ್ಯ ಸಚಿವ ಸ್ಥಾನ ಸಿಕ್ಕಿದೆ ಇದು ಲಿಂಗಾಯತರಿಗೆ ಆಗಿರುವ ಅನ್ಯಾಯ, ಯಾಕೆ ಈ ರೀತಿ ತಾರತಮ್ಯದ ನೀತಿ ಎಂದು ಪ್ರಶ್ನಿಸಿ ಎಂಬಿ ಪಾಟೀಲ್ ಅವರು ಟ್ವೀಟ್ ಮಾಡಿದ್ದರು. ನಂತರ ಯಡಿಯೂರಪ್ಪ ಅವರ ಸ್ಥಿತಿಯೂ ಹೀಗೆ ಆಗಬಹುದೇನೋ ಎಂದು ಮತ್ತೊಂದು ಟ್ವೀಟ್ ಹಾಕಿದ್ದರು.
|
ಲಿಂಗಾಯತ ಪರ ಕಾಳಜಿ ತೋರಿಸಿ ಎಂದು ಸವಾಲು
ನಿಮ್ಮ ಕೈಯಲ್ಲಿ ಇಲ್ಲದ ಭವಿಷ್ಯ ಹೇಳುವುದನ್ನು ಬಿಟ್ಟು ವರ್ತಮಾನದ ಬಗ್ಗೆ ಮಾತನಾಡಿ, ರೈತ ಬಂಧು, ಲಿಂಗಾಯತ ನಾಯಕ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಸಿದ್ಧವಿದೆ, ಲಿಂಗಾಯತ ಪರ ಕಾಳಜಿ ತೋರಿಸಿ ನಿಮ್ಮ ಹುದ್ದೆಗೆ ರಾಜೀನಾಮೆ ನೀಡುವುದು ನಿಮ್ಮ ಕೈಯಲ್ಲಿದೆ ಎಂದು ಟಾಂಗ್ ಕೊಟ್ಟ ಸಿಟಿ ರವಿ.
|
ವಿಶ್ವನಾಥ್ ರಾಜೀನಾಮೆ ಬಳಿಕ ಸಿಟಿ ರವಿ ಟ್ವೀಟ್
ವಿಶ್ವನಾಥ್ ರಾಜೀನಾಮೆ ಬಳಿಕ ಸಿಟಿ ರವಿ ಟ್ವೀಟ್ ಮಾಡಿ, ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ದೂರಿದ್ದಾರೆ. ಆಡಳಿತ ಯಂತ್ರ ಕುಸಿದಿದ್ದು, ಹೊಸದಾಗಿ ಜನಾದೇಶ ಪಡೆಯಲು ಎಚ್ ಡಿ ಕುಮಾರಸ್ವಾಮಿ ಮುಂದಾಗಲಿ ಎಂದ ಸಿಟಿ ರವಿ.
|
ಜಾತಿ ನೋಡಿ ಸಚಿವ ಸ್ಥಾನ ನೀಡಿಲ್ಲ
ಜಾತಿ ನೋಡಿ ಸಚಿವ ಸ್ಥಾನ ನೀಡೋಕೆ ಅದು ಕರ್ನಾಟಕ ಸರ್ಕಾರ ಅಲ್ಲ, ಮೋದಿ ಸರ್ಕಾರ, ಯೋಗ್ಯತೆಗೆ ತಕ್ಕಂತೆ ಸ್ಥಾನಮಾನ ಸಿಗುತ್ತದೆ ಎಂದ ಸಾರ್ವಜನಿಕರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications