ಯಡಿಯೂರಪ್ಪ ಸಂಧಾನ ಸಭೆ ತಿರಸ್ಕರಿಸಿದ ಈಶ್ವರಪ್ಪ
ಬೆಂಗಳೂರು, ಜನವರಿ 20: ಗುರುವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆದಿದ್ದ ಸಂಧಾನ ಸಭೆಗೆ ಈಶ್ವರಪ್ಪ ಬಣದ ಅತೃಪ್ತರು ಗೈರು ಹಾಜರಾಗಿದ್ದಾರೆ. ಈ ಮೂಲಕ ಪಕ್ಷದಲ್ಲಿ 'ರಾಯಣ್ಣ ಬ್ರಿಗೇಡ್' ಗೊಂದಲ ಮತ್ತಷ್ಟು ತಾರಕಕ್ಕೇರಿದೆ.
24 ಜನ ಶಾಸಕರು, ವಿಧಾನಪರಿಷತ್ತು ಸದಸ್ಯರು ಮತ್ತು ಮಾಜಿ ಶಾಸಕರುಗಳು ಯಡಿಯೂರಪ್ಪ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ 3.30ಕ್ಕೆ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಸಂಧಾನ ಸಭೆ ನಿಗದಿಪಡಿಸಲಾಗಿತ್ತು. ಆದರೆ ಸಭೆಗೆ ಆಹ್ವಾನ ನೀಡಲಾಗಿದ್ದ ಈಶ್ವರಪ್ಪ ಬಣದ 12 ಜನರಲ್ಲಿ ಒಬ್ಬರೂ ಹಾಜರಾಗಲಿಲ್ಲ. ಕೊನೆಗೆ ಸಭೆಯನ್ನು 4 ಗಂಟೆಗೆ ಮುಂದೂಡಲಾಯಿತಾದರೂ ಆಗಲೂ ಅತೃಪ್ತರು ಹಾಜರಾಗದೆ ರಾಜ್ಯಾಧ್ಯಕ್ಷರ ಆಹ್ವಾನವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.[ಯಡಿಯೂರಪ್ಪ, ಈಶ್ವರಪ್ಪ ಮನಸ್ತಾಪಕ್ಕೆ ತುಪ್ಪ ಸುರಿದ ಆಯನೂರು]

ಮೂಲಗಳ ಪ್ರಕಾರ 24 ಜನರಲ್ಲಿ ಕೇವಲ 12 ಜನರನ್ನು ಸಭೆಗೆ ಆಹ್ವಾನಿಸಿರುವುದು ಮತ್ತು ಸೊಗಡು ಶಿವಣ್ಣ ಮುಂತಾದವರಿಗೆ ನೀಡಿರುವ ನೊಟೀಸ್ ವಾಪಸ್ ಪಡೆಯದೇ ಇರುವುದನ್ನು ಭಿನ್ನರು ಆಕ್ಷೇಪಿಸಿದ್ದಾರೆ. "ಸಭೆಗೆ ಯಾಕೆ ಹಾಜಾರಾಗಿಲ್ಲ ಎಂಬುದನ್ನು ರಾಜ್ಯಾಧ್ಯಕ್ಷರಿಗೆ ಹೇಳಿದ್ದೇನೆ. ಮಾಧ್ಯಮಗಳಿಗೇ ಹೇಳಲ್ಲ," ಎಂದು ಅತೃಪ್ತರ ನಾಯಕ ಮತ್ತು ವಿಧಾನಪರಿಷತ್ ಸದಸ್ಯ ಭಾನು ಪ್ರಕಾಶ್ 'ಒನ್ ಇಂಡಿಯಾ'ಗೆ ಪ್ರತಿಕ್ರಿಯೆ ನೀಡಿದ್ದಾರೆ.
'ರಾಯಣ್ಣ ಬ್ರಿಗೇಡ್' ಸಂಬಂಧ ಆರಂಭವಾದ ಈಶ್ವರಪ್ಪ ಮತ್ತು ಯಡಿಯೂರಪ್ಪ ಗಲಾಟೆ ಈಗ ಅತೃಪ್ತರ ಸೇರ್ಪಡೆಯಿಂದ ಮತ್ತಷ್ಟು ಹೆಚ್ಚಾಗಿದೆ. ಪರಿಸ್ಥಿತಿ ದಿನೇ ದಿನೇ ಬಿಗುಡಾಯಿಸುತ್ತಿದ್ದು, ವರಿಷ್ಠರ ಗಮನಕ್ಕೆ ತಂದು ಅತೃಪ್ತರ ಮೇಲೆ ಶಿಸ್ತು ಕ್ರಮ ಜರುಗಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications