ಕಳೆದ ಚುನಾವಣೆಗಿಂತಲೂ ಹೆಚ್ಚಿನ ಮತ ಗಳಿಸಿದ್ದೇವೆ:ಪ್ರಹ್ಲಾದ್ ಜೋಷಿ
ಬೆಂಗಳೂರು, ಡಿಸೆಂಬರ್ 18: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ರಾಜ್ಯದ ಬಿಜೆಪಿ ನಾಯಕರು ಗರಿಗೆದರಿಕೊಂಡಿದ್ದಾರೆ.
ಯಡಿಯೂರಪ್ಪ, ಪ್ರತಾಪ್ ಸಿಂಹ, ಪ್ರಹ್ಲಾದ್ ಜೋಷಿ, ರಾಮದಾಸ್ ಮತ್ತಿತರೆ ನಾಯಕರು ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿರುವ ಮುನ್ನಡೆಗೆ ಸಂತೋಷ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲೂ ಇದೇ ಫಲಿತಾಂಶ ಪ್ರತಿಫಲನವಾಗಲಿದೆ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಗುಜರಾತ್ನಲ್ಲಿ ಬಿಜೆಪಿ ವಿರುದ್ಧ ಜಾತಿಗಳನ್ನು ಎತ್ತಿ ಕಟ್ಟಿದ್ದರೂ ಕೂಡ ಜನ ಅಭಿವೃದ್ಧಿಗೇ ಮತ ಹಾಕಿದ್ದಾರೆ ಎಂದಿದ್ದಾರೆ.
ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿ ಕಡಿಮೆ ಸ್ಥಾನ ಪಡೆದಿರುವ ಬಗ್ಗೆ ಮಾತನಾಡಿದ ಅವರು ಸಂಪೂರ್ಣ ಫಲಿತಾಂಶ ಬರುವ ಬಗ್ಗೆ ಈ ಬಗ್ಗೆ ಹೇಳಲು ಸಾಧ್ಯವಿಲ್ಲ ಆದರೆ ಈಗ ಬಂದಿರುವ ವರದಿಗಳ ಪ್ರಕಾರ ಬಿಜೆಪಿ ಗಳಿಸಿರುವ ಒಟ್ಟಾರೆ ಮತಗಳ ಸಂಖ್ಯೆ ಕಳೆದ ಬಾರಿಗಿಂತ ಹೆಚ್ಚಿದೆ ಹಾಗಾಗಿ ಬಿಜೆಪಿ ಜನಪ್ರಿಯತೆ ಕುಂದಿದೆ ಎಂದು ವಾದ ಮಾಡುವಂತೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, 'ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಜನ ಮೆಚ್ಚಿದ್ದಾರೆ ಎಂಬುದಕ್ಕೆ ಗುಜರಾತ್-ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಸಾಧಿಸಿರುವ ಮುನ್ನಡೆಯೇ ಸಾಕ್ಷಿ. ಕರ್ನಾಟಕದಲ್ಲಿಯೂ ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸಲಿದೆ. ನಾಳೆಯಿಂದ ಕಾಂಗ್ರೆಸ್, ಜೆಡಿಎಸ್ನ ರಾಜ್ಯ, ತಾಲೂಕು, ಜಿಲ್ಲಾ ಮಟ್ಟದ ನಾಯಕರು ಬಿಜೆಪಿ ಕಡೆಗೆ ಆಗಮಿಸಲಿದ್ದಾರೆ ಎಂದು ಹೇಳಿದರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications