ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಡಬಲ್ ಶಾಕ್: ಸುರ್ಜೇವಾಲಾ
ಬೆಂಗಳೂರು, ನವೆಂಬರ್ 09: ವಿದ್ಯುತ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕ ಹೆಚ್ಚಳ ಮಾಡಲು ಮುಂದಾಗಿರುವ ಕರ್ನಾಟಕ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು. ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ವಿದ್ಯುತ್ ಆಯಿತು, ಈಗ ದರ ಏರಿಕೆಗೆ ಜಲಮಂಡಳಿ ಚಿಂತನೆ
ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕ ಏರಿಕೆ ಮಾಡುವ ಮೂಲಕ ರಾಜ್ಯ ಬಿಎಸ್ ಯಡಿಯೂರಪ್ಪ ಸರ್ಕಾರ ಜನರಿಗೆ ಡಬಲ್ ಶಾಕ್ ನೀಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಲ್ಕ ಮತ್ತು ನಿರ್ವಹಣಾ ವೆಚ್ಚ ಭರಿಸುವುದು ಸುಲಭವಾಗಿದೆ, ಈ ಅಂಶ ಗಮನದಲ್ಲಿಟ್ಟುಕೊಂಡು ದರ ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿದೆ.
ನೀರಿನ ದರ ಪರಿಷ್ಕರಣೆ ಆಗಿ ಏಳು ವರ್ಷಗಳೇ ಆಗಿದೆ. ವಿದ್ಯುತ್ ಶುಲ್ಕ ಮತ್ತು ನಿರ್ವಹಣಾ ವೆಚ್ಚ ಭರಿಸುವುದು ಸವಾಲಾಗಿದೆ. ಈ ಅಂಶ ಗಮನದಲ್ಲಿಟ್ಟುಕೊಂಡು ದರ ಹೆಚ್ಚಳಕ್ಕೆ ಸಲ್ಲಿಸಲಾಗಿದೆ. ಸರ್ಕಾರ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದರೆ ಶೇ.ವಿದ್ಯುತ್10 ರಿಂದ ಶೇ.12ರಷ್ಟು ದರ ಹೆಚ್ಚಳ ಆಗಬಹುದು ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದರು.
Recommended Video
2013ರ ಜುಲೈನಲ್ಲಿ ನೀರಿನ ದರ ಪರಿಷ್ಕರಣೆ ಆಗಿತ್ತು. ಜಲಮಂಡಳಿಗೆ ಮಾಡಿಕ115 ಕೋಟಿ ರೂ ವರಮಾನ ಬರುತ್ತಿದೆ. ವಿದ್ಯುತ್ ಶುಲ್ಕ ಪಾವತಿಗೆ 46 ಕೋಟಿ ರೂ ನಿರ್ವಹಣೆಗೆ30 ಕೋಟಿರೂ.ಮತ್ತು ಅಧಿಕಾರಿ, ಸಿಬ್ಬಂದಿಯ ವೇತನಕ್ಕೆ 10 ಕೋಟಿಯಿಂದ 15 ಕೋಟಿ ರೂ. ವ್ಯಯವಾಗುತ್ತಿದೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.