ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಲೀಗಲ್ ನೋಟಿಸ್ ನೀಡಿದ ಬಿಜೆಪಿ
ಬೆಂಗಳೂರು, ಜುಲೈ 31: ವೈದ್ಯಕೀಯ ಸಲಕರಣೆ ಖರೀದಿಯಲ್ಲಿ 2000 ಕೋಟಿ ಅಕ್ರಮ ನಡೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದರು.
ಈ ಆರೋಪಕ್ಕೆ ಸಂಬಂಧಿಸಿಂತೆ ಬಿಜೆಪಿ ಪಕ್ಷ ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಲೀಗಲ್ ನೋಟಿಸ್ ನೀಡಿದೆ. ಹದಿನೈದು ದಿನಗಳಲ್ಲಿ ನೋಟಿಸ್ಗೆ ಉತ್ತರ ನೀಡಬೇಕು ಹಾಗೂ ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್, ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ, ಸಾರ್ವಜನಿಕ ಕ್ಷಮೆಯಾಚಿಸಬೇಕು ಅಥವಾ ಕಾನೂನು ಹೋರಾಟ ಮುಂದುವರಿಸಬೇಕಾಗುತ್ತದೆ ಎಂದರು. ಇನ್ನು ಅಶ್ವಥ್ ನಾರಾಯಣ್ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದರು. ಮುಂದೆ ಓದಿ...
|
ಕೊರೊನಾ ವಾರಿಯರ್ಸ್ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ
ಪ್ರಸ್ತಾವನೆಗಳನ್ನೇ ಖರ್ಚು ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಎರಡು ಪದಗಳ ನಡುವಿನ ವ್ಯತ್ಯಾಸ ಅವರಿಗೆ ಗೊತ್ತಿಲ್ಲ ಅನ್ನಿಸುತ್ತದೆ. ಕೊವಿಡ್ ಸಂಕಷ್ಟ ಸಮಯದಲ್ಲಿ ಕೊರೊನಾ ವಾರಿಯರ್ಸ್, ವೈದ್ಯರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡ್ತಿದ್ದಾರೆ. ವೈದ್ಯರು ಹಾಕಿಕೊಳ್ಳುವ ಪಿಪಿಇ ಕಿಟ್ ಬಗ್ಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತಾಡ್ತಾರೆ. ನಮ್ಮ ಲೀಗಲ್ ನೋಟಿಸ್ ಗೆ 15 ದಿನದಲ್ಲಿ ಉತ್ತರ ಕೊಡಬೇಕು' ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ್ ಕಿರಿಕಾರಿದ್ದಾರೆ.

ಯಾವ ನೈತಿಕತೆ ಇಟ್ಕೊಂಡು ಡಿಕೆಶಿ ಪಕ್ಕ ಕೂರುತ್ತೀರಿ?
'ಸಿದ್ದರಾಮಯ್ಯನವರೇ ಯಾವ ನೈತಿಕತೆ ಇಟ್ಟುಕೊಂಡು ಡಿ.ಕೆ. ಶಿವಕುಮಾರ ಪಕ್ಕದಲ್ಲಿ ಕೂರುತ್ತೀರಿ? ಯಾವ ನೈತಿಕತೆ ಇಟ್ಕೊಂಡು ಡಿಕೆ ಶಿವಕುಮಾರ ಜೊತೆ ಸೇರಿ ಪ್ರತಿಭಟನೆ ಮಾಡ್ತೀರಾ? ಡಿ.ಕೆ. ಶಿವಕುಮಾರ್ ಹೇಗೆ ಆಸ್ತಿ ದುಪ್ಪಟ್ಟು ಮಾಡಿಕೊಂಡರು? ನಮಗೂ ಹೇಳಿ ಕೊಡಿ. ಕಡಿಮೆ ಅವಧಿಯಲ್ಲಿ ಹೇಗೆ ಜಾಸ್ತಿ ಆಯ್ತು ಇವರ ಆಸ್ತಿ?' ಎಂದು ಡಿಕೆ ಶಿವಕುಮಾರ್ ಕುರಿತು ವಾಗ್ದಾಳಿ ನಡೆಸಿದರು.

ಮಾಹಿತಿ ಪಡೆಯದೆ ಅಕ್ರಮ ಎಂದರಾ?
20 ಪತ್ರ ಬರೆದರೂ ಒಂದಕ್ಕೂ ಉತ್ತರ ಕೊಟ್ಟಿಲ್ಲ, ಮಾಹಿತಿ ನೀಡಿಲ್ಲ ಅಂತಾ ಸಿದ್ದರಾಮಯ್ಯ ಹೇಳ್ತಾರೆ. ಹಾಗಾದ್ರೆ ಅಂಕಿ ಅಂಶಗಳನ್ನಿಟ್ಟುಕೊಂಡು ಹೇಳಿದ್ದೀರಲ್ಲಾ 4000 ಕೋಟಿ ಖರ್ಚಾಗಿದೆ, 2000 ಕೋಟಿ ಅಕ್ರಮವಾಗಿದೆ ಎಂದು ಹೇಗೆ ಹೇಳಿದ್ರಿ?

ಭ್ರಮನಿರಸನರಾಗಿ ಹೀಗೆಲ್ಲಾ ಮಾತಾಡ್ತಿದ್ದೀರಾ?
ಸತ್ಯಕ್ಕೆ ದೂರವಾದ ಹೇಳಿಕೆ, ಆರೋಪ ಮಾಡಿರುವ ಕಾರಣ ನೋಟೀಸ್ ನೀಡಲಾಗುತ್ತಿದೆ. ನೀವು ಮಾಹಿತಿ ಕೇಳಿದ್ರಿ, ಸರ್ಕಾರ ಮಾಹಿತಿ ನೀಡಲು ರೆಡಿಯಿದೆ. ಆದ್ರೆ ನೀವು ಮಾಹಿತಿ ಇಲ್ಲದೇ 4167 ಕೋಟಿ ಖರ್ಚು ಮಾಡಿ 2000 ಕೋಟಿ ಅಕ್ರಮ ಎಂದು ಹೇಳಿ ಸರ್ಕಾರಕ್ಕೆ ಕೆಟ್ಟ ಹೆಸರು ಮಾಡುವ ಯತ್ನ ಮಾಡಿದ್ದೀರಿ ಹೇಗೆ ಎನ್ನುವ ಮಾಹಿತಿಯುಳ್ಳ ನೋಟೀಸ್ ನೀಡಲಾಗುತ್ತಿದೆ. ಭ್ರಮನಿರಸನರಾಗಿ ಹೀಗೆಲ್ಲಾ ಮಾತಾಡ್ತಿದ್ದೀರಾ? ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದೀರಿ. ಹ್ಯೂಬ್ಲೋಟ್ ವಾಚ್ ಬಗ್ಗೆ ಸಿದ್ದರಾಮಯ್ಯನವರೇ ಉತ್ತರ ಕೊಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications