Get Updates
Get notified of breaking news, exclusive insights, and must-see stories!

ದಿನಗಳ ದಾಖಲೆ ಮಾತ್ರ, ಸಾಧನೆ ಶೂನ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕೆ

ಬೆಂಗಳೂರು: ರಾಜ್ಯದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರೇ ತಾವು ದಾಖಲೆಯ ಪುಸ್ತಕದಲ್ಲಿ ಬರೆದಿರುವುದು ಕೇವಲ ದಿನಗಳ ಸಂಖ್ಯೆಯನ್ನೇ ಹೊರತು, ಸಾಧನೆಯ ಅಕ್ಷರಗಳನ್ನಲ್ಲ. ತಮ್ಮ ತುಘಲಕ್‌ ಆಡಳಿತದ ದುಸ್ಥಿತಿಯ ದಿನಗಳನ್ನು ಕನ್ನಡಿಗರು ಎಂದಿಗೂ ಮರೆಯುವುದಿಲ್ಲ, ಕ್ಷಮಿಸುವುದಿಲ್ಲ ಎಂದು ಬಿಜೆಪಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ಸುದೀರ್ಘ ಅವಧಿಗೆ ಸಿಎಂ ಆಗಿ ಆಡಳಿತ ನೀಡುವ ಮೂಲಕ ದಿವಂಗತ ಡಿ.ದೇವರಾಜು ಅರಸು ಅವರ ದಾಖಲೆ ಮುರಿದ ಸಿದ್ದರಾಮಯ್ಯನವರ ಕುರಿತು ಬಿಜೆಪಿ ಎಕ್ಸ್ ಪೋಸ್ಟ್ ಮಾಡಿದೆ. 'ದಾಖಲೆ ಬರೆದ "ಅಭಿನವ ಅರಸು"ಗೆ ಅಭಿನಂದನೆಗಳು...ನಿಮ್ಮ ದಾಖಲೆ ಆಡಳಿತದ ವೈಫಲ್ಯದ ಸಾಧನೆಗಳನ್ನು ಬಿಡುವು ಸಿಕ್ಕಾಗ ಒಮ್ಮೆ ಕಣ್ಣಾಡಿಸಿ ಸಿದ್ದರಾಮಯ್ಯನವರೇ' ಎಂದು ಬಿಜೆಪಿ ವ್ಯಂಗ್ಯವಾಡಿದೆ. ಇದರೊಂದಿಗೆ ಸಿದ್ದರಾಮಯ್ಯನವರ 7 ವರ್ಷ 240 ದಿನಗಳ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಕುಟುಕಿದೆ. ಮಾತ್ರವಲ್ಲದೇ ಸಿದ್ದರಾಮಯ್ಯನವರು ಆಡಳಿತದಲ್ಲಿ ವಿಫಲವಾಗಿದ್ದಾರೆ ಎಂದು ಪಟ್ಟಿಯನ್ನು ನೀಡಿದೆ.

BJP Slams Siddaramaiah Calls His Record-Breaking Tenure a Failure

ರಾಜ್ಯದಲ್ಲಿ ಸಾಲದ ಹೊರೆ ಹೆಚ್ಚಾಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಕರುನಾಡು ಗೂಂಡಾ ರಾಜ್ಯವಾಗಿದೆ. ಸರ್ಕಾರಿ ಶಾಲೆಗಳು ಪಾಳು ಬಿದ್ದಿದೆ. ಜಲಾಶಯಗಳು ಹೂಳು ತುಂಬಿವೆ. ಸರ್ಕಾರಿ ಖಾಲಿ ಹುದ್ದೆಗಳ ನೇಮಕಾತಿ ನಡೆದಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ರೈತರ ಆತ್ಮಹತ್ಯೆ ಲೆಕ್ಕಕ್ಕೆ ಸಿಗದಂತಾಗಿದೆ. ರಾಜ್ಯದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಮುಟ್ಟಿದೆ. ಓಲೈಕೆ ರಾಜಕಾರಣವು ಮಿತಿಮೀರಿದೆ ಎಂದು ಬಿಜೆಪಿ ದೂರಿದೆ.

ಇದಿಷ್ಟೇ ಅಲ್ಲ ಪಟ್ಟಿ ಇನ್ನೂ ಮುಂದುವರಿಯಲಿದೆ. ಸಿದ್ದರಾಮಯ್ಯನವರೇ ನೀವು ಸುದೀರ್ಘ ಅವಧಿಗೆ ಸಿಎಂ ಆಗಿ ಕೇವಲ ದಾಖಲೆಯ ಪುಸ್ತಕದಲ್ಲಿ ಬರೆದಿರುವುದು ದಿನಗಳ ಸಂಖ್ಯೆಯನ್ನೇ ಹೊರತು, ಸಾಧನೆಯ ಅಕ್ಷರಗಳನ್ನಲ್ಲ ಎಂದು ಕುಟುಕಿದೆ. ಈ ಮೂಲಕ ಸಿದ್ದರಾಮಯ್ಯನವರ ಅವಧಿಯಲ್ಲಿ ಇದೆಲ್ಲ ಹೆಚ್ಚಾಗಿದೆ ಎಂದು ಆರೋಪಿಸಿದೆ.

ಬಿಜೆಪಿ ನಾಯಕರು ಹೇಳಿದ್ದೇನು?

ಸಿದ್ದರಾಮಯ್ಯ ಅವರ ಸುದೀರ್ಘ ಅವಧಿಯ ಮುಖ್ಯಮಂತ್ರಿ ಆಡಳಿತದ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದಿಸಿ ಮಾತನಾಡಿದ್ದಾರೆ. ಕ್ವಾಂಟಿಟಿಗಿಂತ ಕ್ವಾಲಿಟಿ ತುಂಬಾ ಮುಖ್ಯವಾಗುತ್ತದೆ. ಎಷ್ಟು ಅವಧಿವರೆಗೆ ಇದ್ದರೂ ಎಂಬುದಕ್ಕಿಂತ ಏನೆಲ್ಲ ಅಭಿವೃದ್ಧಿ ಮಾಡಿದ್ದಾರೆ. ಎಷ್ಟು ಸುಧಾರಣೆ ಆಗಿದೆ ಎಂಬುದರ ಬಗ್ಗೆ ಚರ್ಚೆಗಳು ಆಗಬೇಕು. ಅದರ ಬಗ್ಗೆ ಮಾತನಾಡಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಏಳು ವರ್ಷ ಪೂರೈಸಿದ ಸಿಎಂ ಸಿದ್ದರಾಮಯ್ಯ ಅವರನ್ನು ದೇವರಾಜ ಅರಸು ಅವರಿಗೆ ಹೋಲಿಕೆ ಮಾಡಬಾರದು. ದೇವರಾಜು ಅರಸು ತಂದ ಸುಧಾರಣೆಗಳನ್ನು ಬೇರೆ ಯಾರೂ ತಂದಿಲ್ಲ. ಬಡವರಿಗೆ ಭೂಮಿ ನೀಡಿದ್ದರು. ಅವರು ನಿಜವಾದ ಬದ್ಧತೆ ಇದ್ದ ಹಿಂದುಳಿದ ವರ್ಗದ ನಾಯಕ. ಅವರ ದಾರಿಯಲ್ಲಿ ಸಿದ್ದರಾಮಯ್ಯನವರು ನಡೆದಿದ್ದರೆ ಚೆನ್ನಾಗಿರುತ್ತಿತ್ತು. ಸಿದ್ದರಾಮಯ್ಯ ಅವರು 2013 ರಲ್ಲಿ ಉತ್ತಮ ಆಡಳಿತ ಕೊಟ್ಟಿದ್ದರು. ಇಂದು ಅವರ ಸರ್ಕಾರದ ಬಗ್ಗೆ ಜನರಿಗೆ ಬೇಸರವಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+