3ನೇ ಎಸಿಎಂಎಂ ಕೋರ್ಟ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು
ಬೆಂಗಳೂರು, ಜುಲೈ 25 : ಬೆಂಗಳೂರು ಬಿಜೆಪಿ ನಗರ ಜಿಲ್ಲಾ ಘಟಕದ ವಕ್ತಾರ ಎನ್.ಆರ್.ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದಾರೆ.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಅಪಮಾನಕರ ಪದ ಬಳಸಿ ತೇಜೋವಧೆ ಮಾಡಿದ್ದಾರೆ' ಎಂದು ಆರೋಪಿಸಿ ಬಿಜೆಪಿ ನಗರ ಜಿಲ್ಲಾ ಘಟಕದ ವಕ್ತಾರ ಎನ್.ಆರ್.ರಮೇಶ್ ಅವರು 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಸೋಮವಾರ ಮಾನನಷ್ಟ ಆರೋಪದಡಿ ಖಾಸಗಿ ದೂರು ದಾಖಲಿಸಿದ್ದಾರೆ.

'ಜುಲೈ 22ರಂದು ಮಾಗಡಿ ರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು ಭಾಷಣದ ವೇಳೆ ನನ್ನ ಘನತೆಗೆ ಧಕ್ಕೆ ತರುವ ಪದಗಳನ್ನು ಬಳಸಿದ್ದಾರೆ. ಆ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಮೊಕದ್ದಮೆ ಹೂಡುತ್ತಿದ್ದೇನೆ' ಎಂದರು.












Click it and Unblock the Notifications