Get Updates
Get notified of breaking news, exclusive insights, and must-see stories!

ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ

ಬೆಂಗಳೂರು, ಅ. 07: ಮಹಿಳೆಯರಿಗೆ ಸುರಕ್ಷಿತ ನಗರವನ್ನಾಗಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಸೇಫ್‌ ಸಿಟಿ ಪ್ರಾಜೆಕ್ಟ್‌ನ್ನು ರಾಜ್ಯದಲ್ಲಿ ಅಳವಡಿಸಲು ಅನಗತ್ಯ ವಿಳಂಬ ಧೋರಣೆಯನ್ನು ಬಿಜೆಪಿ ಸರ್ಕಾರ ತೋರಿಸುತ್ತಿದೆ. ಈ ಮೂಲಕ ನಗರದ ಕ್ರೈಂ ರೇಟ್‌ ಹೆಚ್ಚಳವಾಗಲು ಕಾರಣವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಆರೋಪಿಸಿದ್ದಾರೆ.

ಗುರುವಾರ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ದೆಹಲಿಯಲ್ಲಿ ನಡೆದಂತಹ ಘನಘೋರ ಅತ್ಯಾಚಾರ ಪ್ರಕರಣದ ನಂತರ ದೆಹಲಿ ನಗರ ಪೊಲೀಸ್‌ ಈ ಯೋಜನೆಯನ್ನು ರೂಪಿಸಿತ್ತು. 2018 ರಲ್ಲಿ ಈ ಯೋಜನೆಗೆ ಕೇಂದ್ರ ಸರಕಾರದ ಗೃಹ ಇಲಾಖೆ ಅನುಮತಿ ನೀಡಿತ್ತು. ಈ ಯೋಜನೆಯ ಅಡಿಯಲ್ಲಿ ಬೆಂಗಳೂರು, ದೆಹಲಿ, ಮುಂಬಯಿ, ಚೆನ್ನೈ, ಹೈದರಾಬಾದ್‌, ಲಕ್ನೋ, ಅಹಮದಾಬಾದ್‌ ಮತ್ತು ಕೋಲ್ಕೊತ್ತಾ ನಗರಗಳಿಗೆ ಹಣಕಾಸಿನ ನೆರವನ್ನು ಒದಗಿಸಲಾಗಿತ್ತು. ಬೆಂಗಳೂರು ನಗರಕ್ಕೆ ಮೊದಲ ಹಂತವಾಗಿ 667 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿತ್ತು' ಎಂದು ವಿವರಿಸಿದ್ದಾರೆ.

ಸರ್ಕಾರದ ವಿಳಂಬ ಧೋರಣೆ!

ಸರ್ಕಾರದ ವಿಳಂಬ ಧೋರಣೆ!

ಈ ಹಣವನ್ನು ಬಳಸಿಕೊಂಡು ನಗರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ, 16 ಸಾವಿರ ಕ್ಯಾಮೆರಾಗಳನ್ನು ಅಳವಡಿಸುವುದು ಪ್ರಮುಖ ಗುರಿಯಾಗಿತ್ತು. ಅಲ್ಲದೆ, 50 ಸೇಫ್ಟೀ ಐಲ್ಯಾಂಡ್‌ಗಳನ್ನು ರೂಪಿಸುವುದು ಈ ಯೋಜನೆಯಲ್ಲಿತ್ತು. ಈ ಯೋಜನೆ ಅನುಷ್ಠಾನ ಮಾಡವಲ್ಲಿ ರಾಜ್ಯ ಸರಕಾರ ವಿನಾಕಾರಣ ವಿಳಂಬ ಮಾಡಿದೆ. ಕೇಂದ್ರ ಸರಕಾರ ಯೋಜನೆಗೆ ಅನುಮತಿ ನೀಡಿದ ನಂತರ ರಾಜ್ಯ ಸರಕಾರ ಮತ್ತೊಂದು ವರ್ಷ ಸಮಯ ತಗೆದುಕೊಂಡಿತು. ಆ ನಂತರ, ಈ ವರೆಗೂ ನಾಲ್ಕು ಟೆಂಡರ್ ಕರೆದಿರುವ ರಾಜ್ಯ ಸರಕಾರ ಕೊನೆಗೂ ಯೋಜನೆ ಅನುಷ್ಠಾನಕ್ಕೆ ಕಂಪನಿಯೊಂದನ್ನು ಅಂತಿಮಗೊಳಿಸುವ ಹಂತಕ್ಕೆ ತಲುಪಿದೆ ಎಂದು ದಾಸರಿ ವಿವರಿಸಿದ್ದಾರೆ.

ಸರ್ವೇಲೆನ್ಸ್ ಕ್ಯಾಮೆರಾ ಹೊಂದಿರುವ ದೆಹಲಿ

ಸರ್ವೇಲೆನ್ಸ್ ಕ್ಯಾಮೆರಾ ಹೊಂದಿರುವ ದೆಹಲಿ

ಕೇಂದ್ರ ಸರಕಾರದಿಂದ ಅನುದಾನ ಪಡೆದುಕೊಳ್ಳುವ ಮೂಲಕ ದೆಹಲಿಯಲ್ಲಿ ಪ್ರತಿ ಒಂದು ಚದರ ಮೈಲಿಗೆ 1826.6 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಸರ್ವೇಲೆನ್ಸ್ ಕ್ಯಾಮೆರಾಗಳನ್ನು ಹೊಂದಿರುವ ನಗರ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಲಂಡನ್‌ ನಗರ 2 ನೇ ಸ್ಥಾನದಲ್ಲಿದ್ದು, 3 ಸ್ಥಾನವನ್ನು ಚೆನ್ನೈ ಪಡೆದುಕೊಂಡಿದೆ ಎಂದು ಆಮ್ ಆದ್ಮಿ ಪಾರ್ಟಿ ವಿವರಿಸಿದೆ. ಜೊತೆಗೆ ಬೆಂಗಳೂರಿನಲ್ಲಿ ಯೋಜನೆ ಗ್ರಹಣ ಹಿಡಿದಿದ್ದನ್ನು ವಿವರಿಸಿದೆ.

ಜೆಸಿಬಿ ಸರ್ಕಾರಗಳಿಂದ ಯೋಜನೆಗೆ ಗ್ರಹಣ!

ಜೆಸಿಬಿ ಸರ್ಕಾರಗಳಿಂದ ಯೋಜನೆಗೆ ಗ್ರಹಣ!

ಬೆಂಗಳೂರು ನಗರದಲ್ಲಿ ಈ ಯೋಜನೆ ಪ್ರಾರಂಭಕ್ಕೆ ರಾಜ್ಯ ಬಿಜೆಪಿ ಸರ್ಕಾರ ಗ್ರಹಣ ಹಿಡಿಸಿದೆ. ಇಂತಹ ಮಹತ್ವಪೂರ್ಣ ಯೋಜನೆಯ ಅನುಷ್ಠಾನಕ್ಕೆ ಈಗಿನ ಹಾಗೂ ಹಿಂದಿನ ಜೆಸಿಬಿ ಸರಕಾರಗಳು ಗ್ರಹಣ ಹಿಡಿಸಿವೆ. ಮಹಿಳೆಯರ ವಿರುದ್ಧ ಅಫರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಇದನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ಮನಸ್ಥಿತಿಯನ್ನು ತೋರಿಸದೇ ಇರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕ್ರೈಂ ರೇಟ್‌ ಹೆಚ್ಚಲು ಬಿಜೆಪಿ ಸರಕಾರ ಕಾರಣ

ಬೆಂಗಳೂರಿನಲ್ಲಿ ಕ್ರೈಂ ರೇಟ್‌ ಹೆಚ್ಚಲು ಬಿಜೆಪಿ ಸರಕಾರ ಕಾರಣ

ನಿರ್ಭಯಾ ನಿಧಿಯನ್ನು ಬಳಸಿಕೊಳ್ಳದೆ ಇರುವ ಮೂಲಕ ನಗರದಲ್ಲಿ ಅಫರಾಧ ಅದರಲ್ಲೂ ಮಹಿಳೆಯರ ಮೇಲಿನ ಅಫರಾಧ ಚಟುವಟಿಕೆಗಳು ಹೆಚ್ಚಾಗಿವೆ. ಯೋಜನೆಯನ್ನು ವಿನಾಕಾರಣ ವಿಳಂಬ ಮಾಡಿದ ಬಿಜೆಪಿ ಸರಕಾರ ಇದಕ್ಕೆ ಮೂಲ ಕಾರಣ. ರಾಜ್ಯ ಸರಕಾರ ಈ ಯೋಜನೆಯ ಅಳವಡಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಈ ಮೂಲಕ ನಗರವನ್ನು ಮಹಿಳೆಯರಿಗಾರಿ ಸುರಕ್ಷಿತವಾಗಿಸಬೇಕು ಎಂದು ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಾ ಸ್ವಾಮಿ ಆಗ್ರಹಿಸಿದರು. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಯೋಜಕ ವಿಜಯ್‌ ಶಾಸ್ತ್ರಿಮಠ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Recommended Video

      Rajasthan Royals ಅವರು ಪಂದ್ಯದ ನಡುವೆ ಹೀಗೆ ಎಡವಟ್ಟು ಮಾಡಿದ್ದೇಕೆ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+