'ನರೇಂದ್ರ ಮೋದಿ ಕೋಬ್ರಾ; ಯುಪಿಎ ಸರ್ಕಾರ ಚೇಳು'
ಬೆಂಗಳೂರು, ಸೆಪ್ಟೆಂಬರ್ 18: ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಕಳೆದ ವಾರ ಆಯ್ಕೆಯಾಗುತ್ತಿದ್ದಂತೆ ಮೋದಿ ಪರ ಮತ್ತು ವಿರುದ್ಧ ನಾಡಿನ ಅನೇಕಾನೇಕ ಮಂದಿ ತಮ್ಮ ಶಕ್ತಿ/ಸಾಮರ್ಥ್ಯ, ಗ್ರಹಿಕೆಗೆ ಅನುಸಾರ ಹೇಳಿಕೆಗಳನ್ನು/ ಫರ್ಮಾನುಗಳನ್ನು ಹೊರಡಿಸಿದ್ದಾರೆ.
ಮೊದಲು ಮಾತಿನ ಬಾಂಬ್ ಸಿಡಿಸಿದವರು ಜ್ಞಾನಪೀಠ ಬುದ್ಧಿಜೀವಿ ಡಾ. ಯು.ಆರ್. ಅನಂತಮೂರ್ತಿ ಅವರು 'ಮೋದಿ ಪ್ರಧಾನಿಯಾಗುವ ದೇಶದಲ್ಲಿ ನಾನಿರಲಾರೆ' ಎಂದು ತಮ್ಮ ಅಭಿವೃಕ್ತಿ ಸ್ವಾತಂತ್ರ್ಯವನ್ನು ಪ್ರಕಟಗೊಳಿಸಿದರು.
ಇಡೀ ನಾಡಿನಾದ್ಯಂತ ಇದಕ್ಕೆ ವ್ಯಾಪಕ ಟೀಕೆಗಳು ಹರಿದುಬಂದಿವೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೀಗೆ ಹೇಳಿದ್ದಾರೆ:

'ಕಾಂಗ್ರೆಸ್ ನಲ್ಲಿ ವೀರಪ್ಪ ಮೊಯಿಲಿ ಸೇರಿದಂತೆ ಎಲ್ಲ ನಾಯಕರು ಇಂದಿರಾ ಗಾಂಧಿ ಕುಟುಂಬದ ಭಟ್ಟಂಗಿಗಳಾಗಿದ್ದು, ನಾಯಕತ್ವದ ದಿವಾಳಿತನದಲ್ಲಿದ್ದಾರೆ. ಅದಕ್ಕೇ ನರೇಂದ್ರ ಮೋದಿಯವರ ಬಗ್ಗೆ ಭೀತಿ ನಿರ್ಮಾಣವಾಗಿದೆ'.
ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಪ್ರತಿಕ್ರಿಯೆ:
'ಮೋದಿ ಪ್ರಧಾನಿಯಾದರೆ ತಾವು ಭಾರತದಲ್ಲಿ ನೆಲೆಸಲು ಇಷ್ಟಪಡುವುದಿಲ್ಲ ಎಂದು ಹೇಳಿಕೆ ನೀಡಿರುವ ಅನಂತಮೂರ್ತಿ ಆದಷ್ಟು ಬೇಗನೇ ಈ ದೇಶದಿಂದ ಹೊರ ನಡೆಯಲಿ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದಾಗ ಈ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತು ಅಭಿಮಾನವನ್ನು ಹೊಂದಿರುವ ಪ್ರತಿಯೊಬ್ಬ ಪ್ರಜೆ ಸಂಭ್ರಮಿಸಿದ್ದಾನೆ. ಈ ಸಂದರ್ಭದಲ್ಲಿ ಜಾತ್ಯತೀತತೆಯ ತುತ್ತೂರಿ ಊದಿದರೆ ನಡೆಯುವುದಿಲ್ಲ'
ಇನ್ನು ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್ ಮಾರ್ನುಡಿ ಏನು?
'ನರೇಂದ್ರ ಮೋದಿ 'ಕೋಬ್ರಾ' ಇದ್ದಂತೆ. ಯುಪಿಎ ಸರ್ಕಾರ 'ಚೇಳು' ಇದ್ದಂತೆ. ಚೇಳು ಕುಟುಕಿದರೆ ಔಷಧಿಯಿದೆ. ಆದ್ದರಿಂದ ಯಾವ ಆಡಳಿತ ಬೇಕೆಂದು ಜನರೇ ನಿರ್ಧರಿಸಬೇಕು. ಮೋದಿ ಪ್ರಧಾನಿಯಾದರೆ ದೇಶವೇ ವಿಷ ವರ್ತುಲದೊಳಗೆ ಸಿಲುಕಿಕೊಳ್ಳುತ್ತದೆ. ಯುಪಿಎ ಸರ್ಕಾರ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತದೆ'.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications