ಮೇಕೆದಾಟು ಯೋಜನೆ ಜಾರಿ ಆಗ್ರಹ ಪತ್ರ ಚಳವಳಿಗೆ ಬಿಜೆಪಿ ಬೆಂಬಲಿಗರ ಅಡ್ಡಿ: ಎಎಪಿ
ಬೆಂಗಳೂರು, ಅಕ್ಟೋಬರ್ 13: ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲು, ಆಮ್ ಆದ್ಮಿ ಪಕ್ಷ ಸಾರ್ವಜನಿಕರಿಂದ ಸಹಿ ಸಂಗ್ರಹಣಾ ಅಭಿಯಾನ ಮಾಡಲಾಗುತ್ತಿದೆ. ಆದರೆ ನಮ್ಮ ಈ ಅಭಿಯಾನಕ್ಕೆ ಕೆಲವು ಬಿಜೆಪಿ ಬೆಂಬಲಿಗರು ಇದಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದ್ದಾರೆ ಎಂದು ಪಕ್ಷ ಆರೋಪ ಮಾಡಿದೆ.
ಆಮ್ ಆದ್ಮಿ ಪಕ್ಷದ ಸಹಿ ಸಂಗ್ರಹ ಅಭಿಯಾನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶುಕ್ರವಾರ ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ಹಳ್ಳಿಯಲ್ಲಿ ಸಹಿ ಸಂಗ್ರಹ ನಡೆಸುವ ಸಂದರ್ಭದಲ್ಲಿ ಕೆಲವು ಬಿಜೆಪಿ ಬೆಂಬಲಿಗರು ಅಭಿಯಾನಕ್ಕೆ ಅಡ್ಡಿಪಡಿಸಲು ಮುಂದಾದರು ಎಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಆಂಜನೇಯ ರೆಡ್ಡಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅವರು, ಪೊಲೀಸರಿಗೆ ಅಭಿಯಾನದ ಬಗ್ಗೆ ವಿವರಣೆ ನೀಡಿದ ನಂತರ, ಪೊಲೀಸರು ಕೂಡ ಸಹಿ ಸಂಗ್ರಹ ಮಾಡಲು ಒಪ್ಪಿಗೆ ಕೊಟ್ಟರು.

ಎಎಪಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ
ಮೇಕೆದಾಟು ಜಲಾಶಯ (ಡ್ಯಾಂ) ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ವಿಚಾರವಾಗಿ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರದಾದ್ಯಂತ ಜನರಿಂದ ಸಹಿ ಸಂಗ್ರಹ ಮಾಡುತ್ತಿದೆ. ಈ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಪಕ್ಷದ ಮುಖ್ಯಸ್ಥರು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದಿಂದ ಬೆಂಗಳೂರು ನಗರದ ಕುಡಿಯುವ ನೀರಿನ ಶಾಶ್ವತ ಯೋಜನೆ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಕ್ಕಾಗಿ ಪ್ರಧಾನ ಮಂತ್ರಿಗಳಿಗೆ ಪತ್ರ ಚಳುವಳಿ ಕಾರ್ಯಕ್ರಮ ಕಳೆದ ವಾರದಿಂದ ಆರಂಭವಾಗಿದೆ. ಮಂಗಳವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕೇಂಬ್ರಿಡ್ಜ್ ಬಡಾವಣೆಯಲ್ಲಿ ನಡೆಯಿತು. ನಿತ್ಯ ಒಂದೊಂದು ಕಡೆ ಪಕ್ಷ ಅಭಿಯಾನ ಮೂಲಕ ಪತ್ರ-ಸಹಿ ಸಂಗ್ರಹಿಸುತ್ತಿದೆ. ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications