"ಪಂಚಾಯತಿ ಚುನಾವಣೆಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರ ಗೆಲುವು''
ಬೆಂಗಳೂರು, ನವೆಂಬರ್ 30: ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಆ ಮೂಲಕ ರಾಜ್ಯದಲ್ಲಿ ಪ್ರಗತಿ ಕಾಣುತ್ತಿದೆ. ಜನರ ವಿಶ್ವಾಸ ಸಂಪೂರ್ಣ ಬಿಜೆಪಿ ಪರವಾಗಿದೆ. ಶೇ.80 ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆ ಪಕ್ಷಾತೀತವಾಗಿ ಸ್ಪರ್ಧೆ ಮಾಡುವಂತಾಗಿದ್ದು, ಆದರೂ ಎಲ್ಲ ರಾಜಕೀಯ ಪಕ್ಷಗಳ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಮ್ಮ ಸರ್ಕಾರ ಕಳೆದ 73 ವರ್ಷದಲ್ಲಿ ಕಾಣದ ಎಲ್ಲಾ ಸುಧಾರಣೆಗಳನ್ನು ತಂದಿದೆ. ಸಾಕಷ್ಟು ಸುಧಾರಣೆ ಕಾರ್ಯಕ್ರಮಗಳನ್ನು ತಂದಿದ್ದರಿಂದಾಗಿ ಪ್ರಗತಿ ಕಾಣುವಂತಾಗಿದೆ ಎಂದು ಹೇಳಿದರು.

ಕೊರೊನಾ ನಿರ್ವಹಣೆಯನ್ನು ಉತ್ತಮವಾಗಿ ಮಾಡಲಾಗಿದೆ. ಅತಿವೃಷ್ಟಿ-ಅನಾವೃಷ್ಟಿ ವೇಳೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದೇವೆ. ಸಂತ್ರಸ್ತರ ಬಳಿಗೆ ತೆರಳಿ ಅವರಿಗೆ ಸಾಂತ್ವನ ಹೇಳಿ ಅವರ ಕಷ್ಟಕ್ಕೆ ನಿಲ್ಲಲಾಗಿದೆ. ಎಲ್ಲ ರೀತಿಯ ಪರಿಹಾರವನ್ನು ಕೊಟ್ಟು ಅವರ ಜೀವನ ಸುಧಾರಣೆಗೆ ಎಲ್ಲಾ ಪ್ರಯತ್ನ ಮಾಡಲಾಗಿದೆ. ಹಾಗಾಗಿ ಜನರ ವಿಶ್ವಾಸ ಸಂಪೂರ್ಣ ಬಿಜೆಪಿ ಪರ ಇದೆ ಎಂದು ತಿಳಿಸಿದರು.
ರಾಜ್ಯದ ಉದ್ದಗಲದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಶೇ.80ರಷ್ಟು ಪಂಚಾಯತ್ಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಗ್ರಾಮ ಸ್ವರಾಜ್ಯ ಸಮಾವೇಶಗಳನ್ನು ನಾವು ನಾಡಿನ ಉದ್ದಗಲಕ್ಕೆ ನಡೆಸುತ್ತಿದ್ದೇವೆ. ಆರು ತಂಡಗಳಾಗಿ ಎಲ್ಲಾ ಕಡೆ ಸಮಾವೇಶಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದೇವೆ. ಕಮಲ ಎಲ್ಲ ಕಡೆ ಅರಳಲಿದ್ದು. ಹೆಚ್ಚಿನ ಪಂಚಾಯತ್ ಸದಸ್ಯರು ಬಿಜೆಪಿಯವರೇ ಇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲೆಯಲ್ಲಿ ನಮಗೆ ಹೆಚ್ಚಿನ ಸವಾಲಿದೆ. ಬಹಳ ಸದೃಢವಾಗಿ ಅಲ್ಲಿ ಜೆಡಿಎಸ್, ಕಾಂಗ್ರೆಸ್ ಬೀಡು ಬಿಟ್ಟಿದ್ದಾರೆ. ಆದರೂ ಅವರು ಅಭಿವೃದ್ಧಿ ಮಾಡಿಲ್ಲ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ವ್ಯಕ್ತಿಗತವಾಗಿ ಸ್ವಜನ ಪಕ್ಷಪಾತ, ಕುಟುಂಬ ರಾಜಕೀಯಕ್ಕೆ ಸೀಮಿತವಾಗಿದೆ ಎಂದರು.
ಜನ ವಿರೋಧಿಯಾಗಿ ಜೆಡಿಎಸ್, ಕಾಂಗ್ರೆಸ್ ಕೆಲಸ ಮಾಡಿದ್ದಾರೆ. ಹಾಗಾಗಿ ಜನ ಇವರನ್ನು ಒಪ್ಪುವುದಿಲ್ಲ. ಪ್ರಗತಿಪರವಾಗಿರುವ ಪಕ್ಷ ಮತ್ತು ಸುಧಾರಣೆ ಮತ್ತು ಬೆಳವಣಿಗೆ ಇರುವ ಬಿಜೆಪಿಯ ಕೈಹಿಡಿಯಲಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಚನ್ನಪಟ್ಟಣಕ್ಕೆ ನಾನೇ ಮುಖ್ಯಮಂತ್ರಿ ಎನ್ನುವ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಎಂ ಅಶ್ವಥ್ ನಾರಾಯಣ, ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ಅವರ ಕರ್ತವ್ಯವನ್ನು ಅವರು ಮಾಡಲಿದ್ದಾರೆ. ಅವರು ಯಾವುದೋ ಭಾವನೆಯಲ್ಲಿ ಹೇಳಿರಬಹುದು. ಪರಿಪೂರ್ಣವಾಗಿ ಆ ಭಾಗವನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿದರು.
ಯಾವುದೇ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ. ಕ್ಷೇತ್ರಕ್ಕೆ ಮಂತ್ರಿ ಸ್ಥಾನ ಕೂಡ ಇರುವುದಿಲ್ಲ. ಕ್ಷೇತ್ರದ ಶಾಸಕರಾಗಿ ಅವರು ಕೆಲಸವನ್ನು ಮಾಡುತ್ತಿದ್ದಾರೆ. ಉತ್ಸಾಹದಲ್ಲಿ ಅವರು ಹೀಗೆ ಹೇಳಿಕೆ ಕೊಟ್ಟಿರಬಹುದು, ಅದಕ್ಕೆ ಹೆಚ್ಚೇನೂ ಹೇಳುವುದಿಲ್ಲ ಎಂದು ಡಿಸಿಎಂ ತಿರುಗೇಟು ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications