ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳು ವಾಸಕ್ಕೆ ಯೋಗ್ಯವಾಗಿಲ್ಲ: ವರದಿ
ಬೆಂಗಳೂರು, ಮಾರ್ಚ್ 10: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಜನಾಂಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ಹಾಸ್ಟೆಲ್ ಗಳು ವಾಸಕ್ಕೆ ಯೋಗ್ಯವಾಗಿಲ್ಲ ಎಂಬ ಕರಾಳ ಸತ್ಯವನ್ನು ಬಿಜೆಪಿ ಎಸ್ ಸಿ ಹಾಗೂ ಎಸ್ಟಿ ಮೋರ್ಚಾ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಎಲ್ಲ ಜಿಲ್ಲೆಗಳ 1080 ಪರಿಶಿಷ್ಟ ವಿದ್ಯಾರ್ಥಿಗಳ ಹಾಸ್ಟೆಲ್ ಹಾಗೂ 1,510 ಹಿಂದುಳಿದ ವರ್ಗದ ಮಕ್ಕಳ ಹಾಸ್ಟೆಲ್ ಗಳಲ್ಲಿ ಬಿಜೆಪಿ ಕಾರ್ಯಕರ್ತರ ಖುದ್ದು ಪರಿಶೀಲನೆ ನಡೆಸಿ ಸರ್ಕಾರಿ ಹಾಸ್ಟೆಲ್ ಸಮೀಕ್ಷಾ ವರದಿಯನ್ನು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಶುಕ್ರವಾರ ಬಿಡುಗಡೆ ಮಾಡಿದರು.
ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಪರಿಶಿಷ್ಟ, ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳು, ಮಹಿಳಾ ಹಾಸ್ಟೆಲ್ ಗಳು ಹಾಗೂ ವಸತಿ ಶಾಲೆಗಳ ಈ ನರಕ ಸದೃಶ ಸ್ಥಿತಿಯನ್ನು ರಾಜ್ಯ ಬಿಜೆಪಿ ಸಮೀಕ್ಷಾ ವರದಿ ಬಯಲು ಮಾಡಿದೆ.

ದೀನ ದಲಿತ, ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳು ನರಕವಾಗಿದ್ದರೆ, ಅಧಿಕಾರಿಗಳು ಮತ್ತು ಮಂತ್ರಿಗಳ ಲೂಟಿಗೆ ಸ್ವರ್ಗವಾಗಿವೆ ಎಂದು ಸಮೀಕ್ಷಾ ವರದಿ ದೂರಿದೆ. ಸಮಾಜ ಕಲ್ಯಾಣ ಇಲಾಖೆ ನಿರ್ವಹಣೆಯಲ್ಲಿರುವ ಹಾಸ್ಟೆಲ್ ಸ್ಥಿತಿ ನರಕ ಸದೃಶವಾಗಿದ್ದು, ದಲಿತರ ಉದ್ಧಾರದ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿಮಾಡಲಾಗಿದೆ ಎಂದು ಸಚಿವ ಡಿ.ವಿ. ಸದಾನಂದ ಗೌಡ ಕಟುವಾಗ್ದಾಳಿ ನಡೆಸಿದರು.
ಸಣ್ಣ ಮಕ್ಕಳಿಗೆ ನೀಡಬೇಕಾದ ಬೆಡ್ಶೀಟ್, ದಿಂಬು ಖರೀದಿ ಸಂಬಂಧ 25 ಕೋಟಿ ರೂ. ವ್ಯವಹಾರದಲ್ಲಿ 8 ಕೋಟಿ ರೂ. ಲೂಟಿಯಾಗಿದೆ. ಕಂಪ್ಯೂಟರ್ ಖರೀದಿ, ಸಮವಸ್ತ್ರ, ಶೂ-ಸಾಕ್ಸ್, ಟೈ, ಬೆಲ್ಟ್ , ಪಾತ್ರೆ -ಪರಿಕರ, ಆಹಾರ ಪದಾರ್ಥಗಳ ಖರೀದಿ ಸೇರಿದಂತೆ ಎಲ್ಲದರಲ್ಲೂ ಅಕ್ರಮ ನಡೆದಿದೆ.

ಟೆಂಡರ್ ಕರೆಯದೇ ಕಾಮಗಾರಿ ಗುತ್ತಿಗೆಗಳನ್ನು ನೀಡಲಾಗಿದೆ. ಈ ಬಗ್ಗೆ ವಿಧಾನಮಂಡಲ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯೇ ವರದಿ ನೀಡಿದ್ದರೂ ಈವರೆಗೆ ತನಿಖೆ ನಡೆಸಿಲ್ಲ. ನಮ್ಮದು ಭ್ರಷ್ಟಾಚಾರ ರಹಿತ ಸರಕಾರ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ತಾಕತ್ತಿದ್ದರೆ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.
ಶಾಸಕ ಡಾ.ಅಶ್ವತ್ಥನಾರಾಯಣ, ಮೇಲ್ಮನೆ ಸದಸ್ಯ ಬಿ.ಜೆ.ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ , ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಹಾಗೂ ನಟಿ ತಾರಾ ಅನುರಾಧ, ಶ್ರುತಿ, ಬೆಂಗಳೂರು ನಗರ ಬಿಜೆಪಿ ಎಸ್ಸಿ ಮೋರ್ಚ ಅಧ್ಯಕ್ಷ ಎಚ್. ಕೋದಂಡರಾಮ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications