ಜಯನಗರ ಚುನಾವಣೆ : ಬಿಜೆಪಿಯಿಂದ ಎನ್.ನಾಗರಾಜು ಅಮಾನತು
ಬೆಂಗಳೂರು, ಜುಲೈ 08 : ಬೈರಸಂದ್ರ ವಾರ್ಡ್ನ ಬಿಜೆಪಿ ಬಿಬಿಎಂಪಿ ಸದಸ್ಯ ಎನ್.ನಾಗರಾಜು ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಜಯನಗರ ವಿಧಾನಸಭೆ ಚುನಾವಣೆಯಲ್ಲಿ ನಾಗರಾಜು ಅವರು ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದರು ಎಂಬ ಆರೋಪವಿದೆ.
ಬೆಂಗಳೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ ಅವರು ಎನ್.ನಾಗರಾಜು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೂನ್ 14ರಂದು ನಾಗರಾಜು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.
ಜೂನ್ 11ರಂದು ಬೆಂಗಳೂರಿನ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದಿತ್ತು. ಜೂನ್ 13ರಂದು ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನ ಸೌಮ್ಯಾ ರೆಡ್ಡಿ ಅವರು 2 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯ ಬಿ.ಎನ್.ಪ್ರಹ್ಲಾದ್ ಅವರು ಸೋಲು ಅನುಭವಿಸಿದ್ದರು.
ಬಸವೇಶ್ವರ ನಗರ ವಾರ್ಡ್ ಬಿಬಿಎಂಪಿ ಮಾಜಿ ಸದಸ್ಯ ಎನ್.ಎಚ್.ಪದ್ಮರಾಜ್ ಅವರಿಗೂ ಶೋಕಾಸ್ ನೀಡಲಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಚಾರದ ವೇಳೆ ಪಕ್ಷದ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ.

ಪ್ರಚಾರದಿಂದ ದೂರವುಳಿದಿದ್ದರು
ಜೂನ್ 11ರಂದು ಬೆಂಗಳೂರಿನ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದಿತ್ತು. ಆದರೆ, ಎನ್.ನಾಗರಾಜು ಅವರು ಚುನಾವಣಾ ಪ್ರಚಾರದಿಂದ ದೂರವುಳಿದಿದ್ದರು.
ಜೂನ್ 4ರಂದು ಎನ್.ನಾಗರಾಜು ಮಾಜಿ ಸಚಿವ ಎಚ್.ಎಂ.ರೇವಣ್ಣ, ರಾಮಲಿಂಗಾ ರೆಡ್ಡಿ, ರಾಮಲಿಂಗಾ ರೆಡ್ಡಿ ಪುತ್ರಿ, ಜಯನಗರದ ಹಾಲಿ ಶಾಸಕಿ ಸೌಮ್ಯಾ ರೆಡ್ಡಿ ಜೊತೆಯಾಗಿರುವ ಫೋಟೋವನ್ನು ಫೇಸ್ಬುಕ್ನಲ್ಲಿ ಹಾಕಿದ್ದರು. ಆದ್ದರಿಂದ, ಅವರು ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

ಎನ್.ನಾಗರಾಜು ಸ್ಪಷ್ಟನೆ ನೀಡಿದ್ದರು
ಬೈರಸಂದ್ರ ವಾರ್ಡ್ ಬಿಬಿಎಂಪಿ ಸದಸ್ಯ ಎನ್.ನಾಗರಾಜು ಅವರು, 'ಜಯನಗರ ಕ್ಷೇತ್ರದಲ್ಲಿ ಬಿಜೆಪಿ ಬಿ.ಎನ್.ಪ್ರಹ್ಲಾದ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರಿಂದ ಯಾವುದೇ ಅಸಮಾಧಾನವಿಲ್ಲ. ಬಿಜೆಪಿಗಾಗಿಯೇ ಕೆಲಸ ಮಾಡುವೆ ನಾನು ಕಾಂಗ್ರೆಸ್ ಸೇರಿಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದೇನೆ' ಎಂದು ಹೇಳಿದ್ದರು.
ಆದರೆ, ಜಯನಗರ ಚುನಾವಣೆಯಲ್ಲಿ ಬಿ.ಎನ್.ಪ್ರಹ್ಲಾದ್ ಅವರು ಸೋಲು ಅನುಭವಿಸಿದ್ದರು. ನಂತರ ಎನ್.ನಾಗರಾಜು ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿತ್ತು. ಜುಲೈ 7ರಂದು ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಜಯನಗರ ಚುನಾವಣೆ ಫಲಿತಾಂಶ
ಜೂನ್ 11ರಂದು ಬೆಂಗಳೂರಿನ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದಿತ್ತು. ಜೂನ್ 13ರಂದು ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 54,458 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಬಿ.ಎನ್.ಪ್ರಹ್ಲಾದ್ ಅವರು 51,571 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.
ಜಯನಗರದ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಪಕ್ಷ ವಿರೋಧಿ ಕೆಲಸ ಮಾಡಲಾಗಿದೆ ಎಂದು ಆರೋಪಿಸಿ ಎನ್.ನಾಗರಾಜು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಅಭ್ಯರ್ಥಿ ಆಯ್ಕೆ ಬಗ್ಗೆ ಅಪಸ್ವರ
ಜಯನಗರದಲ್ಲಿ ಬಿಜೆಪಿ ಬಿ.ಎನ್.ಪ್ರಹ್ಲಾದ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ಪಕ್ಷದಲ್ಲಿ ಅಸಮಾಧಾನ ಉಂಟಾಗಿತ್ತು. ಬಿಬಿಎಂಪಿ ಸದಸ್ಯರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದರು.
ಬಿಬಿಎಂಪಿ ಸದಸ್ಯರಲ್ಲಿಯೇ ಯಾರಿಗಾದರೂ ಟಿಕೆಟ್ ನೀಡಬಹುದಿತ್ತು ಎಂದು ಅವರು ಒತ್ತಾಯಿಸಿದ್ದರು. ಜಯನಗರದ 3ನೇ ಬ್ಲಾಕ್ನಲ್ಲಿರುವ ಪೈ ವೈಸ್ರಾಯ್ ಹೋಟೆಲ್ನಲ್ಲಿ ಬಿಬಿಎಂಪಿ ಸದಸ್ಯರು ಸಭೆ ನಡೆಸಿ, ಪಕ್ಷದ ನಾಯಕರ ಮೇಲೆ ಒತ್ತಡ ಹಾಕಲು ಪ್ರಯತ್ನ ನಡೆಸಿದ್ದರು. ಆದರೆ, ಪಕ್ಷ ಅಂತಿಮವಾಗಿ ಬಿ.ಎನ್.ಪ್ರಹ್ಲಾದ್ ಅವರನ್ನು ಅಭ್ಯರ್ಥಿಯಾಗಿಸಿತ್ತು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications